social_icon

ಫೋಟೋಗಳಿಗಷ್ಟೇ ದಲಿತರನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಶೈಕ್ಷಣಿಕ ಸುಧಾರಣೆಗಳಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಿಕ್ಷಣ ಪಡೆದಿದ್ದಾರೆ ಹಾಗೂ ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಕಾಂಗ್ರೆಸ್‌ನಿಂದಾಗಿ ಇಬ್ಬರೂ ಈಗ ಉನ್ನತ ಸ್ಥಾನಗಳಲ್ಲಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾ

Published: 01st May 2023 08:39 AM  |   Last Updated: 02nd May 2023 07:00 PM   |  A+A-


Mallikarjun Kharge at a campaign in Shivamogga on Sunday

ಶಿವಮೊಗ್ಗದಲ್ಲಿ ಮಲ್ಲಿಕಾರ್ಜುನ ಖರ್ಗೆ.

Posted By : Manjula VN
Source : The New Indian Express

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಶೈಕ್ಷಣಿಕ ಸುಧಾರಣೆಗಳಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಿಕ್ಷಣ ಪಡೆದಿದ್ದಾರೆ ಹಾಗೂ ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಕಾಂಗ್ರೆಸ್‌ನಿಂದಾಗಿ ಇಬ್ಬರೂ ಈಗ ಉನ್ನತ ಸ್ಥಾನಗಳಲ್ಲಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಹೇಳಿದರು.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಮೇಲಿನ ಮೌಖಿಕ ನಿಂದನೆಗಳನ್ನು ಮೋದಿಯವರು ಹೇಗೆ ಲೆಕ್ಕ ಹಾಕುತ್ತಿದ್ದಾರೆಂಬುದು ನನಗೆ ತಿಳಿಯುತ್ತಿಲ್ಲ. ಆದರೆ, ಮೋದಿಯವರು ಎಷ್ಟು ಬಾರಿ (ಎಐಸಿಸಿ ಮಾಜಿ ಅಧ್ಯಕ್ಷರು) ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಮತ್ತು ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂಬುದರ ಬಗ್ಗೆ ನನ್ನ ಬಳಿ ಅಧಿಕೃತ ಮಾಹಿತಿಗಳಿವೆ. ಜನರ ಸಹಾನುಭೂತಿ ಪಡೆಯಲು ಮೋದಿ ಈ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಅವಮಾನಿಸಿದೆ ಎಂಬ ಮೋದಿಯವರ ಆರೋಪವನ್ನು ಖರ್ಗೆ ಅವರು ನಿರಾಕರಿಸಿದರು,

ಇದೇ ವೇಳೆ ಸಂವಿಧಾನದ ಕರಡು ಜವಾಬ್ದಾರಿಯನ್ನು ಕಾಂಗ್ರೆಸ್‌ ಪಕ್ಷಕ್ಕೆ ವಹಿಸಿದ್ದ ಅಂಬೇಡ್ಕರ್ ಅವರನ್ನು ಖರ್ಗೆಯವರು ಕೊಂಡಾಡಿದರು.

ಇದನ್ನೂ ಓದಿ: ಮುಂದೊಂದು ದಿನ ವಾಕಿಂಗ್‌ ವೇಳೆ ಉಸಿರಾಡುವ ಗಾಳಿಗೂ ಬಿಜೆಪಿ ಜಿಸ್‌ಟಿ ವಿಧಿಸಬಹುದು: ಖರ್ಗೆ

ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ದಲಿತರನ್ನು ಫೋಟೋಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಆರ್‌ಎಸ್‌ಎಸ್ ಕಚೇರಿಯಲ್ಲಿ ಅಂಬೇಡ್ಕರ್ ಅವರ ಫೋಟೋ ಇಲ್ಲದಿದ್ದರೂ ಬಿಜೆಪಿಯವರು ಅಂಬೇಡ್ಕರ್ ಅವರ ಹೆಸರನ್ನು ಮತ ಭಿಕ್ಷೆಗೆ ಬಳಸುತ್ತಿದ್ದಾರೆ ಎಂದು ಆರೋಪಿಸಿದರು.

ಅಮಿತ್ ಶಾ ದಲಿತರನ್ನು ಫೋಟೋಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ದಲಿತರ ಮನೆಯಲ್ಲಿ ಊಟ ಮಾಡುವುದನ್ನು ಮಾಧ್ಯಮಗಳಲ್ಲಿ ಪ್ರಕಟಿಸುವ ಅಗತ್ಯವಿದೆಯೇ? ಅವರು ಮನುಷ್ಯರಲ್ಲವೇ? ಇತ್ತೀಗಷ್ಟೇ ಅಂಬೇಡ್ಕರ್ ಜಯಂತಿ ಸಂದರ್ಭದಲ್ಲಿ ಬಿಜೆಪಿ ನಾಯಕರು ತಮ್ಮ ಕಚೇರಿಗಳಲ್ಲಿ ಅಂಬೇಡ್ಕರ್ ಅವರ ಫೋಟೋಗಳನ್ನು ಇಟ್ಟುಕೊಂಡರು. ಆರಾಧಿಸದ ಅಂಬೇಡ್ಕರ್ ಅವರ ಹೆಸರಿನಲ್ಲಿ ಮತ ಯಾಚಿಸಲು ಅವರಿಗ ನಾಚಿಕೆಯಾಗುವುದಿಲ್ಲವೇ? ಎಂದು ಪ್ರಶ್ನಿಸಿದರು.

1947 ರಿಂದ 2014 ರವರೆಗೆ ದೇಶದಲ್ಲಿ 70% ರಷ್ಟು ವಿದ್ಯಾವಂತರಿದ್ದರೆ, ಸ್ವಾತಂತ್ರ್ಯದ ಮೊದಲು ಪ್ರತಿ 100 ಕ್ಕೆ 16 ಜನ ವಿದ್ಯಾವಂತರಿದ್ದರು. ಆ ವಿದ್ಯಾವಂತರಲ್ಲಿ ಮೋದಿ ಮತ್ತು ಶಾ ಕೂಡ ಇದ್ದಾರೆ. ಆದರೂ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಾರೆ. ನಾವು ನಿಮಗೆ ಶಿಕ್ಷಣ ನೀಡಿದ್ದೇವೆಂದು ತಿರುಗೇಟು ನೀಡಿದರು.

ಇದನ್ನೂ ಓದಿ: ಪ್ರಜಾಪ್ರಭುತ್ವ ಉಳಿಯಬೇಕಾದರೆ ಬಿಜೆಪಿ ಅಧಿಕಾರದಿಂದ ಹೋಗಬೇಕು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನಾವು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಿದ್ದೇವೆ ಮತ್ತು ಇದರಿಂದಾಗಿ ಮೋದಿ ಪ್ರಧಾನಿಯಾದರು. ಆದ್ದರಿಂದ ನೀವು ಕಾಂಗ್ರೆಸ್‌ಗೆ ಪೂಜೆ ಸಲ್ಲಿಸಬೇಕು ಎಂದರು.

ಇದೇ ವೇಳೆ ಅಗತ್ಯ ವಸ್ತುಗಳ ಮೇಲೆ ಅತಿಯಾದ ತೆರಿಗೆ ವಿಧಿಸುತ್ತಿರುವ ಮೋದಿ ಸರಕಾರವನ್ನು ಟೀಕಿಸಿದ ಖರ್ಗೆಯವರು, ಮುಂದಿನ ದಿನಗಳಲ್ಲಿ ನಾವು ಉಸಿರಾಡುವ ಗಾಳಿಗೂ ತೆರಿಗೆ ವಿಧಿಸಿದರೂ ಅಚ್ಚರಿಯಿಲ್ಲ ಎಂದು ಲೇವಡಿ ಮಾಡಿದರು.

ನಂತರ ಸೊರಬ ಕ್ಷೇತ್ರದ ಆನವಟ್ಟಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ನಟ ಶಿವರಾಜಕುಮಾರ್, ಖರ್ಗೆ ಅವರು, ಉದ್ಯೋಗ ಸಮಸ್ಯೆ ಬಗೆಹರಿಸುವಲ್ಲಿ ಬಿಜೆಪಿ ವಿಫಲವಾಗಿದ್ದು, ಕೇಂದ್ರ ಸರ್ಕಾರದ 30 ಲಕ್ಷ ಹಾಗೂ ರಾಜ್ಯ ಸರ್ಕಾರದ 2 ಲಕ್ಷ ಉದ್ಯೋಗಗಳನ್ನು ಇನ್ನೂ ಭರ್ತಿ ಮಾಡಿಲ್ಲ ಎಂದು ಕಿಡಿಕಾರಿದರು.


Stay up to date on all the latest ರಾಜಕೀಯ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp