ರಾಹುಲ್ ಗಾಂಧಿ ಮಟ್ಟಕ್ಕೆ ಪ್ರಧಾನಿ ನರೇಂದ್ರ ಮೋದಿ ಇಳಿಯಬಾರದಿತ್ತು: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ

ಜೆಡಿಎಸ್ ಅನ್ನು ಕಾಂಗ್ರೆಸ್ ಪಕ್ಷದ ಬಿ ಟೀಮ್ ಎಂದು ಕರೆದಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಗುರುವಾರ ತಿರುಗೇಟು ನೀಡಿದ್ದಾರೆ.
ಹೆಚ್.ಡಿ.ದೇವೇಗೌಡ
ಹೆಚ್.ಡಿ.ದೇವೇಗೌಡ
Updated on

ಹಾಸನ: ಜೆಡಿಎಸ್ ಅನ್ನು ಕಾಂಗ್ರೆಸ್ ಪಕ್ಷದ ಬಿ ಟೀಮ್ ಎಂದು ಕರೆದಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಗುರುವಾರ ತಿರುಗೇಟು ನೀಡಿದ್ದಾರೆ.

ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಜೆಡಿಎಸ್ ಪಕ್ಷದ ಬಗ್ಗೆ ಹಗುರವಾಗಿ ಮಾತನಾಡುವುದು ಪ್ರಧಾನಿ ಮೋದಿಯಂತಹ ಧೀಮಂತ ನಾಯಕರ ಮಟ್ಟಕ್ಕೆ ಹೊಂದುವುದಿಲ್ಲ. ಪ್ರಧಾನಿ ಮೋದಿ ಅವರು ಸುಮಾರು 10 ವರ್ಷಗಳ ಕಾಲ ಪ್ರಧಾನಿಯಾಗಿ ದೇಶವನ್ನು ಆಳಿದ್ದಾರೆ. ಪ್ರಧಾನಿ ಮೋದಿ ನಮ್ಮ ಪಕ್ಷದ ಬಗ್ಗೆ ಮಾತನಾಡುವುದು ಅನಗತ್ಯ ಎಂದು ನಾನು ಭಾವಿಸುತ್ತೇನೆ' ಎಂದು ಅವರು ಹೇಳಿದರು.

'ಪ್ರಧಾನಿ ಮೋದಿಯವರು ಜೆಡಿಎಸ್ ಅನ್ನು ಕಾಂಗ್ರೆಸ್‌ನ ಬಿ-ಟೀಂ ಎಂದು ಕರೆಯುತ್ತಾರೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನೇ ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. ಉಭಯ ನಾಯಕರ ಹೇಳಿಕೆಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ' ಎಂದು ಸಮರ್ಥಿಸಿಕೊಂಡರು.

ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ರಾಹುಲ್ ಗಾಂಧಿ ಹೇಳಿದ್ದರು.

ಪ್ರಧಾನಿ ಮೋದಿಯಂತಹ ಧೀಮಂತ ನಾಯಕರನ್ನು ಪಕ್ಷವು ರಾಹುಲ್ ಗಾಂಧಿ ಮಟ್ಟಕ್ಕೆ ತರಬಾರದಿತ್ತು. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ಜೆಡಿಎಸ್‌ಗೆ ಮತ ಹಾಕುವುದು ಕಾಂಗ್ರೆಸ್‌ಗೆ ಮತ ಹಾಕಿದಂತೆ ಎಂದು ಸಾರುತ್ತಿದ್ದಾರೆ ಎಂದು ದೂರಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ಮತ್ತು ಇಮೇಜ್ ಕುಸಿದಿದೆ. ಅವರ ಆಕ್ರಮಣಕಾರಿ ಪ್ರಚಾರವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

'ಒಂಬತ್ತು ವರ್ಷಗಳ ನಂತರ ಪ್ರಧಾನಿ ಮೋದಿ ಇಮೇಜ್ ಕುಸಿದಿದೆ. ನವದೆಹಲಿಯಿಂದ ರಾಷ್ಟ್ರೀಯ ನಾಯಕರು ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಬರುತ್ತಿದ್ದಾರೆ. ರಾಜ್ಯದ ಜನತೆ ಸಂಕಷ್ಟದಲ್ಲಿದ್ದಾಗ ಅವರು ಬರಬೇಕಿತ್ತು. ಆಗ ಅವರು ಬರಲಿಲ್ಲ, ಈಗ ಬರುತ್ತಿದ್ದಾರೆ' ಎಂದು ಅವರು ಲೇವಡಿ ಮಾಡಿದರು.

ಈಗ, ಪ್ರಧಾನಿ ಮೋದಿ ಕರ್ನಾಟಕದಲ್ಲಿ ಇಳಿದು ರೋಡ್ ಶೋಗಳಲ್ಲಿ ಜನರತ್ತ ಕೈಬೀಸುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಬಿಜೆಪಿ ಕೊಡುಗೆ ಏನು?. ಕೃಷ್ಣಾ ನದಿ ನ್ಯಾಯಮಂಡಳಿಯ ತೀರ್ಪು ಬಂದು ಹತ್ತು ವರ್ಷಗಳು ಕಳೆದಿವೆ. ಕಾಂಗ್ರೆಸ್ ಮತ್ತು ಬಿಜೆಪಿ ಏನು ಮಾಡಿದೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ರೈತರಿಗೆ ಅನ್ಯಾಯ ಮಾಡಿದೆ ಎಂದು ಪ್ರಧಾನಿ ಮೋದಿ ಹೇಳುತ್ತಿದ್ದಾರೆ. ರೈತರಿಗೆ ಆಗಿರುವ ಅನ್ಯಾಯ ಯಾವುದೆಂದು ಅವರು ಹೇಳಬೇಕು?. ಫಸಲ್ ಬಿಮಾ ಯೋಜನೆಯ ಕಂತು ನೀಡಿಲ್ಲ, ಈಗ ಮನೆ ಬಾಗಿಲಿಗೆ ನೀರು ಕೊಡುತ್ತಿದ್ದೇವೆ ಎಂದು ಮೋದಿ ಹೇಳುತ್ತಿದ್ದಾರೆ. ಯಾವ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯಶಸ್ವಿಯಾಗಿದೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com