social_icon

ನಮಗೆ ಜೆಡಿಎಸ್ ಬೆಂಬಲ ಬೇಕಿಲ್ಲ, ಆರಾಮಾದಾಯಕ ಬಹುಮತ ಸಿಗಲಿದೆ: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನ ದೊರೆಯಲಿದೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಗಳ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

Published: 05th May 2023 01:13 PM  |   Last Updated: 05th May 2023 02:26 PM   |  A+A-


Basavaraj Bommai

ಬಸವರಾಜ ಬೊಮ್ಮಾಯಿ

Posted By : Shilpa D
Source : PTI

ಶಿಗ್ಗಾಂವಿ: ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನ ದೊರೆಯಲಿದೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಗಳ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷ ಬಿಜೆಪಿಯ "ಆರಾಮದಾಯಕ ಬಹುಮತ" ದೊಂದಿಗೆ ಮತ್ತು ಜೆಡಿಎಸ್ ಬೆಂಬಲವಿಲ್ಲದೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ನಾನು ಸಿಎಂ ಆಗಿ ಮುಂದುವರಿಯುವ ಬಗ್ಗೆ ಬಿಜೆಪಿ ಹೈಕಮಾಂಡ್ ಮತ್ತು ಅದರ ಸಂಸದೀಯ ಮಂಡಳಿ ನಿರ್ಧರಿಸುತ್ತದೆ ಎಂದು ಹೇಳಿದರು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ನಿಂದ ಮತ್ತೊಮ್ಮೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಈ ಬಾರಿ ಸೋಲುತ್ತಾರೆ ಎಂದು ಅವರು ಹೇಳಿದರು. ಆದರೆ, 2019ರಲ್ಲಿ ಕಾಂಗ್ರೆಸ್-ಜೆಡಿ(ಎಸ್) ಸರ್ಕಾರವನ್ನು ಪತನಗೊಳಿಸಲು ಬಿಜೆಪಿಗೆ ಸಹಾಯ ಮಾಡಿದ 14 ಪಕ್ಷಾಂತರಿಗಳು ಆಯಾ ಕ್ಷೇತ್ರಗಳಿಂದ ಗೆಲ್ಲುತ್ತಾರೆ.

ಕಾಂಗ್ರೆಸ್ ಚುನಾವಣಾ ಭಾಷಣವನ್ನು ಅತ್ಯಂತ ಕೀಳು ಮಟ್ಟಕ್ಕೆ ಕೊಂಡೊಯ್ದಿದೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ. ಸಮೀಕ್ಷೆಗಳನ್ನು ಹೇಗೆ ಮಾಡಲಾಗುತ್ತದೆ ಎಂಬುದು ನಮಗೆ ತಿಳಿದಿದೆ. ನಾನು ಆರಾಮದಾಯಕ ಬಹುಮತದ ನಿರೀಕ್ಷೆಯಲ್ಲಿದ್ದೇನೆ" ಎಂದು ಬೊಮ್ಮಾಯಿ ಹೇಳಿದರು ಮತ್ತು ಪಕ್ಷಕ್ಕೆ ಜೆಡಿಎಸ್‌ನ ಬೆಂಬಲ ಅಗತ್ಯವಿಲ್ಲ ಎಂದು ಹೇಳಿದರು.

ಜಾತಿ ಆಧಾರಿತ ಕೋಟಾದಲ್ಲಿ, OBC ಗಳ ಅಡಿಯಲ್ಲಿ ಆಂತರಿಕ ಮೀಸಲಾತಿ ಮತ್ತು ಇತರ ವಿಷಯಗಳು ಬಹಳ ಬಾಕಿಯಿರುವ ಬೇಡಿಕೆಯಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾನು ಅವುಗಳನ್ನು ಪರಿಹರಿಸಿದ್ದೇನೆ" ಎಂದು ಹೇಳಿದರು. ಈ ಹಿಂದೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡದ ಕಾರಣ ಹಲವರಿಗೆ ಸೌಲಭ್ಯ ನಿರಾಕರಿಸಲಾಗಿತ್ತು. ಒಳಮೀಸಲಾತಿಯಿಂದ ಆ ವರ್ಗದ ಜನರಿಗೆ ಈಗ ಭರವಸೆ ಸಿಕ್ಕಿದೆ ಎಂದರು.

ಇದನ್ನೂ ಓದಿ: ರಾಜ್ಯದ ಜನತೆ ಕಾಂಗ್ರೆಸ್ ಪರವಾಗಿದ್ದಾರೆ: ಸಿದ್ದರಾಮಯ್ಯ (ಸಂದರ್ಶನ)

ನಾವು ಆಂತರಿಕ ಮೀಸಲಾತಿಯನ್ನು ಶಿಫಾರಸು ಮಾಡಿದ್ದೇವೆ; ಅಂತಿಮವಾಗಿ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಚುನಾವಣೆಗೆ ಮುಂಚಿತವಾಗಿ, ರಾಜ್ಯ ಸರ್ಕಾರವು ಮೀಸಲಾತಿಯ ಪ್ರಯೋಜನಗಳನ್ನು ಒದಗಿಸಲು ಲಿಂಗಾಯತರು ಮತ್ತು ಒಕ್ಕಲಿಗರನ್ನು ಸೇರಿಸಲು OBC ಗಳ ಎರಡು ಹೊಸ ವರ್ಗಗಳನ್ನು ರಚಿಸಿತು.

ತಮ್ಮ ಸರ್ಕಾರದ ವಿರುದ್ಧ ಕಾಂಗ್ರೆಸ್ ನ ಶೇ.40ರಷ್ಟು ಕಮಿಷನ್ ಆರೋಪವನ್ನು ತಳ್ಳಿಹಾಕಿದ ಬೊಮ್ಮಾಯಿ, ‘ಪತ್ರಿಕೆಗಳು ಅಥವಾ ಪ್ರತಿಪಕ್ಷಗಳು ಅಥವಾ ಗುತ್ತಿಗೆದಾರರ ಸಂಘ ನಮ್ಮ ಸರ್ಕಾರದ ವಿರುದ್ಧ ಒಂದು ಪ್ರಕರಣ ತೋರಿಸಲಿ. ನಾನು ಉತ್ತರಿಸುತ್ತೇನೆ’ ಎಂದು ಸವಾಲು ಹಾಕಿದರು.

ಚುನಾವಣಾ ಭಾಷಣವನ್ನು ಕಾಂಗ್ರೆಸ್ ಅತ್ಯಂತ ಕೀಳು ಮಟ್ಟಕ್ಕೆ ಕೊಂಡೊಯ್ದಿದೆ. ಇದು ಕಾಂಗ್ರೆಸ್‌ನಿಂದ ಪ್ರಾರಂಭವಾಯಿತು. ವಿಷ ಸರ್ಪ (ವಿಷಪೂರಿತ ಹಾವು) ಹೇಳಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರಂಭಿಸಿದರು. ಕ್ರಿಯೆಗೆ  ಪ್ರತಿಕ್ರಿಯೆ ಹೀಗೆ ಬರುತ್ತದೆ. ನೀವು ಹೇಳಲು ಮತ್ತು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಬಿಎಸ್ ಯಡಿಯೂರಪ್ಪ ನಂತರ ಲಿಂಗಾಯತ ನಾಯಕರಾಗಿ ಹೊರಹೊಮ್ಮುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಈಗ ಪಕ್ಷದಲ್ಲಿ ಲಿಂಗಾಯತ ನಾಯಕರ ದಂಡೇ ಇದೆ. ಎಲ್ಲರೂ ನಾಯಕರು, ಎರಡನೇ ಹಂತ ಎಂದು ಏನೂ ಇಲ್ಲ ಎಂದು ತಿಳಿಸಿದ್ದಾರೆ.


Stay up to date on all the latest ರಾಜಕೀಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp