ಖರ್ಗೆ ಕುಟುಂಬದ ಹತ್ಯೆಗೆ ಸುಪಾರಿಯಾಗಿ ರೌಡಿ ಶೀಟರ್‌ಗೆ ಬಿಜೆಪಿ ಟಿಕೆಟ್?: ಮಣಿಕಂಠ ಆಡಿಯೋಗೆ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟಂಬದ ಹತ್ಯೆಗೆ ಸಂಚು ರೂಪಾಯಿಸಲಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಕಾಂಗ್ರೆಸ್, ದಲಿತ ಸಮುದಾಯದ ಉನ್ನತ ನಾಯಕ, ದೇಶದ ಹಿರಿಯ ಹಾಗೂ ಮುತ್ಸದ್ದಿ ನಾಯಕ ಖರ್ಗೆ...
ಮಲ್ಲಿಕಾರ್ಜುನ ಖರ್ಗೆ.
ಮಲ್ಲಿಕಾರ್ಜುನ ಖರ್ಗೆ.
Updated on

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟಂಬದ ಹತ್ಯೆಗೆ ಸಂಚು ರೂಪಾಯಿಸಲಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಕಾಂಗ್ರೆಸ್, ದಲಿತ ಸಮುದಾಯದ ಉನ್ನತ ನಾಯಕ, ದೇಶದ ಹಿರಿಯ ಹಾಗೂ ಮುತ್ಸದ್ದಿ ನಾಯಕ ಖರ್ಗೆ ಕುಟುಂಬದ ಹತ್ಯೆಗೆ ಸುಪಾರಿಯಾಗಿ ರೌಡಿ ಶೀಟರ್ ಗೆ ಬಿಜೆಪಿ ಟಿಕೆಟ್ ನೀಡಲಾಗಿದೆಯೇ? ಎಂದು ಪ್ರಶ್ನಿಸಿದೆ.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಇಡೀ ಕುಟುಂಬವನ್ನು ಹತ್ಯೆ ಮಾಡುವ ಬಿಜೆಪಿಯ ಸಂಚು ಮಣಿಕಂಠ ರಾಥೋಡನ ಬಾಯಲ್ಲಿ ಹೊರಬಂದಿದೆ.

ಖರ್ಗೆ ಕುಟುಂಬದ ಹತ್ಯೆಗೆ ನೀಡಿದ ಸುಪಾರಿಗಾಗಿಯೇ ರೌಡಿ ಶೀಟರ್‌ಗೆ ಟಿಕೆಟ್ ನೀಲಾಗಿದೆಯೇ ನರೇಂದ್ರ ಮೋದಿ ಅವರೇ? ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ಪ್ರಶ್ನಿಸಿದೆ.

ನಿಮ್ಮನ್ನು ಪ್ರಶ್ನಿಸುತ್ತಾರೆ ಎಂಬ ಒಂದೇ ಕಾರಣಕ್ಕೆ ಈ ಪರಿ ದ್ವೇಷವೇ ಮೋದಿಯವರೇ? ಎಂದು ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿ ಮಣಿಕಂಠ ಆಡೋಯಿ ಸಮೇತ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com