'ನೂರು ವೀರಶೈವ ಸ್ವಾಮಿಗಳು ನನಗೆ ಕರೆಮಾಡಿ ಈ ಸರ್ತಿ ಕಾಂಗ್ರೆಸ್ ಗೆ ಸಹಾಯ ಮಾಡ್ತೀವಿ ಅಂತಿದ್ದಾರೆ': ಸಿದ್ದು-ಡಿಕೆಶಿ ಆತ್ಮೀಯ ಸಂಭಾಷಣೆ

ಕರ್ನಾಟಕ ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ರಾಜ್ಯದ ಇಬ್ಬರು ಅಗ್ರ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವಿನ ಸಂಭಾಷಣೆಯ ವಿಡಿಯೊವನ್ನು ಪ್ರಸಾರ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲಿ ಮತ್ತು ಇತರ ಕಡೆಗಳಲ್ಲಿ ಇಬ್ಬರ ನಡುವಿನ ಮಾತುಕತೆಯ ಭಾಗ -1 ವೈರಲ್ ಆಗಿತ್ತು.
ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್
ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್
Updated on

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ರಾಜ್ಯದ ಇಬ್ಬರು ಅಗ್ರ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವಿನ ಸಂಭಾಷಣೆಯ ವಿಡಿಯೊವನ್ನು ಪ್ರಸಾರ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲಿ ಮತ್ತು ಇತರ ಕಡೆಗಳಲ್ಲಿ ಇಬ್ಬರ ನಡುವಿನ ಮಾತುಕತೆಯ ಭಾಗ -1 ವೈರಲ್ ಆಗಿತ್ತು.

ಇಂದು ಭಾಗ -2 ಬಿಡುಗಡೆಯಾಗಿದ್ದು ಅದರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾಡುವ ಕೆಲಸಗಳು, ಪ್ರಸ್ತುತದ ರಾಜಕೀಯ ಸ್ಥಿತಿಗತಿ, ಬಿಜೆಯಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎಂಬಿತ್ಯಾದಿ ಟೀಕೆಗಳನ್ನು ಇಬ್ಬರೂ ಮಾಡಿದ್ದಾರೆ. ಇವರಿಬ್ಬರ ಸಂಭಾಷಣೆಯ ಝಲಕ್ ಹೀಗಿದೆ. 

ಲಿಂಗಾಯತರ ಕಡೆಗಣನೆ: ಭಾಗ-2 ವಿಡಿಯೊದಲ್ಲಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಈ ಬಾರಿ ಬಿಜೆಪಿಯಲ್ಲಿ ಲಿಂಗಾಯತರನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಇವರಿಗೆಲ್ಲಾ ಅನ್ಯಾಯವಾಗಿದೆ ಎಂದು ಮಾತನಾಡಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com