ಪಕ್ಷದ ಸೋಲಿನ ಹಿಂದಿನ ಕಾರಣ ಹುಡುಕಲು ವಿವರವಾದ ವಿಶ್ಲೇಷಣೆ ಮಾಡುತ್ತೇವೆ, ಕಟೀಲ್ ತಲೆದಂಡವಿಲ್ಲ: ಬೊಮ್ಮಾಯಿ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಹೀನಾಯ ಸೋಲಿನ ಹಿಂದಿನ ಕಾರಣಗಳ ಕುರಿತು ವಿವರವಾದ ವಿಶ್ಲೇಷಣೆ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Published: 14th May 2023 06:26 PM | Last Updated: 14th May 2023 08:07 PM | A+A A-

ಸಿಎಂ ಬೊಮ್ಮಾಯಿ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಹೀನಾಯ ಸೋಲಿನ ಹಿಂದಿನ ಕಾರಣಗಳ ಕುರಿತು ವಿವರವಾದ ವಿಶ್ಲೇಷಣೆ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಪಕ್ಷದ “ಸೋಲನ್ನು” “ವಿನಮ್ರವಾಗಿ” ಸ್ವೀಕರಿಸಿದ್ದು, ಸೋಲಿನ ಹಿಂದಿನ ಕಾರಣಗಳ ಕುರಿತು ವಿವರವಾದ ವಿಶ್ಲೇಷಣೆ ಮಾಡುತ್ತೇವೆ ಎಂದು ಕರ್ನಾಟಕದ ನಿರ್ಗಮಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.
ಇದನ್ನೂ ಓದಿ: ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಸುನಾಮಿ ನಡುವೆಯೂ ಸಿಲಿಕಾನ್ ಸಿಟಿಯಲ್ಲಿ ಸ್ಥಾನ ಉಳಿಸಿಕೊಂಡ ಬಿಜೆಪಿ
ಒಟ್ಟಾರೆ ಸಮೀಕ್ಷೆಯ ಫಲಿತಾಂಶಗಳ ವಿವರವಾದ ವಿಶ್ಲೇಷಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಸಿದ್ದವಾಗುತ್ತೇವೆ. ನಾವು ನಮ್ಮ ಅಧ್ಯಕ್ಷರೊಂದಿಗೆ ಅನೌಪಚಾರಿಕ ಸಭೆ ನಡೆಸಿದ್ದೇವೆ. ಕೆಲವು ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ ಮತ್ತು ನಾವು ಚುನಾಯಿತ ಪ್ರತಿನಿಧಿಗಳು ಮತ್ತು ಸ್ಪರ್ಧಿಸಿದ ಅಭ್ಯರ್ಥಿಗಳೊಂದಿಗೆ ಸಭೆ ನಡೆಸುತ್ತೇವೆ. ನಾವು ಆಳವಾದ ವಿಶ್ಲೇಷಣೆಯನ್ನು ಮಾಡುತ್ತೇವೆ ಮತ್ತು ಲೋಕಸಭೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಕಾರ್ಯತಂತ್ರ ರೂಪಿಸುತ್ತೇವೆ ಎಂದು ಬೊಮ್ಮಾಯಿ ಹೇಳಿದರು.
ಕಟೀಲ್ ತಲೆದಂಡವಿಲ್ಲ
ಚುನಾವಣಾ ಸೋಲಿನ ನಂತರ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ತಮ್ಮ ಸ್ಥಾನದಿಂದ ಕೆಳಗಿಳಿಯುವುದಿಲ್ಲ ಎಂದೂ ಸ್ಪಷ್ಟಪಡಿಸಿರುವ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕಟೀಲ್ ಹುದ್ದೆಯಿಂದ ಕೆಳಗಿಳಿಯುವುದಿಲ್ಲ.. ಇಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಕೆಲವು ಶಾಸಕರು ಹಾಜರಿದ್ದರು. ನಾವು ನಮ್ಮ ಸೋಲನ್ನು ನಮ್ರತೆಯಿಂದ ಒಪ್ಪಿಕೊಂಡಿದ್ದೇವೆ. ಇದು ಪ್ರಧಾನಿ ಮೋದಿಯವರ ಸೋಲಲ್ಲ, ಅವರು ರಾಷ್ಟ್ರೀಯ ನಾಯಕ, ಒಟ್ಟಾರೆಯಾಗಿ ಕಾಂಗ್ರೆಸ್ ನಾಯಕತ್ವ ಸೋತಿದೆ ಎಂದು ಹೇಳಿದರು.