ಹೈಕಮಾಂಡ್ ಬುಲಾವ್, ದೆಹಲಿಗೆ ಹೊರಟ ಸಿದ್ದರಾಮಯ್ಯ: ಅಭಿಮಾನಿಗಳಿಂದ ಮುಂದಿನ ಸಿಎಂ ಘೋಷಣೆ

ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿರುವ ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಕಗ್ಗಂಟಾಗಿರುವ ಹೊತ್ತಿನಲ್ಲಿ ಹೈಕಮಾಂಡ್ ನಿಂದ ಬುಲಾವ್ ಬಂದಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ದೆಹಲಿಗೆ ಹೊರಟಿದ್ದಾರೆ.
ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್
ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್

ಬೆಂಗಳೂರು: ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿರುವ ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಕಗ್ಗಂಟಾಗಿರುವ ಹೊತ್ತಿನಲ್ಲಿ ಹೈಕಮಾಂಡ್ ನಿಂದ ಬುಲಾವ್ ಬಂದಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ದೆಹಲಿಗೆ ಹೊರಟಿದ್ದಾರೆ.

ದೆಹಲಿಗೆ ಕರೆದಿರುವ ಹೈಕಮಾಂಡ್ ಇಂದು ಸಂಜೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಈಗಾಗಲೇ ನಿನ್ನೆ ನಡೆದಿರುವ ಸಿಎಲ್ ಪಿ ಸಭೆಯಲ್ಲಿ ಒಂದು ಸುತ್ತಿನ ನಿರ್ಣಯ ತೆಗೆದುಕೊಂಡು ವರದಿಯನ್ನು ಹೊತ್ತು ವೀಕ್ಷಕರು ದೆಹಲಿಗೆ ತಲುಪಿದ್ದಾರೆ. 

ಮುಂದಿನ ಸಿಎಂ ಘೋಷಣೆ: ಇಂದು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಎದುರು ಸೇರಿದ ಅಪಾರ ಸಂಖ್ಯೆಯ ಅವರ ಅಭಿಮಾನಿಗಳು ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗುತ್ತಾ ಅವರಿಗೆ ಶುಭ ಕೋರುತ್ತಿರುವುದು ಕಂಡುಬಂತು. 

ಸಿದ್ದರಾಮಯ್ಯ ತಮ್ಮ ಮನೆಯಿಂದ ದೆಹಲಿಗೆ ಹೊರಡುವ ವೇಳೆ ಕಾರ್ಯಕರ್ತರು ಘೋಷಣೆ ಕೂಗಿದರು. ಅಭಿಮಾನಿಗಳ ತಳ್ಳಾಟ, ನೂಕಾಟದಿಂದ ಸಿದ್ದರಾಮಯ್ಯ ಅವರ ಕೈಗೆ ಮತ್ತೆ ನೋವಾಗಿದೆ. ಆಗ ಬೆಂಬಲಿಗರ ಮೇಲೆ ಸಿದ್ದರಾಮಯ್ಯ ಸಿಟ್ಟಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com