ಬಿಜೆಪಿಗೆ ಮರಳುವುದಿಲ್ಲ, ಕಾಂಗ್ರೆಸ್‌ನಲ್ಲೇ ಮುಂದುವರಿದು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತೇನೆ: ಜಗದೀಶ್ ಶೆಟ್ಟರ್

ಕಾಂಗ್ರೆಸ್‌ನಲ್ಲೇ ಮುಂದುವರಿದು ಪಕ್ಷದ ಬಲವರ್ಧನೆಗೆ ಶ್ರಮಿಸುವುದಾಗಿ ಮಾಜಿ ಸಿಎಂ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಜಗದೀಶ್‌ ಶೆಟ್ಟರ್‌(Jagadish Shettar) ಹೇಳಿದ್ದಾರೆ. 
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಬೆಂಗಳೂರು: ಕಾಂಗ್ರೆಸ್‌ನಲ್ಲೇ ಮುಂದುವರಿದು ಪಕ್ಷದ ಬಲವರ್ಧನೆಗೆ ಶ್ರಮಿಸುವುದಾಗಿ ಮಾಜಿ ಸಿಎಂ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಜಗದೀಶ್‌ ಶೆಟ್ಟರ್‌(Jagadish Shettar) ಹೇಳಿದ್ದಾರೆ. 

ಬಿಜೆಪಿಗೆ ಹಿಂತಿರುಗುವ ಪ್ರಶ್ನೆಯೇ ಇಲ್ಲ, ನಾನು ಕಾಂಗ್ರೆಸ್‌ನಲ್ಲಿಯೇ ಇದ್ದು ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು. 

ಬೆಂಗಳೂರಿನಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿಗೆ ಪರ್ಯಾಯವನ್ನು ನೀಡಲು ಕಾಂಗ್ರೆಸ್ ಸಮರ್ಥವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಪೂರ್ಣ ಬಹುಮತ ಬಂದಿರುವುದು ಜನತೆಗೆ ಖುಷಿ ತಂದಿದೆ. ಅದೃಷ್ಟವಶಾತ್ ನಮ್ಮಲ್ಲಿ ಸ್ಥಿರ ಸರಕಾರವಿದ್ದು, ಜನರು ಇದರಿಂದ ಸಂತಸಗೊಂಡಿದ್ದಾರೆ ಎಂದ ಅವರು, ಸರಕಾರ ರಚನೆ ಪ್ರಕ್ರಿಯೆ ಸುಗಮವಾಗಲಿ ಎಂದು ಆಶಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com