social_icon

ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಕಳಪೆ ಪ್ರದರ್ಶನ ನನ್ನ ಸೋಲಿಗೆ ಕಾರಣ: ಬಿಜೆಪಿ ಮಾಜಿ ಶಾಸಕ ಎಲ್.ನಾಗೇಂದ್ರ

ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಾಲಾಗಿದ್ದ ಸಾಂಪ್ರದಾಯಿಕ ಮತಗಳನ್ನು ಪಡೆದುಕೊಳ್ಳುವಲ್ಲಿ ಜೆಡಿಎಸ್‌ ವಿಫಲವಾದ ಕಾರಣ ನಾನು ಸೋತಿದ್ದೇನೆ ಎಂದು ಮೈಸೂರು ಬಿಜೆಪಿ ಮಾಜಿ ಶಾಸಕ ಎಲ್‌.ನಾಗೇಂದ್ರ ಹೇಳಿದರು.

Published: 18th May 2023 12:09 PM  |   Last Updated: 18th May 2023 12:09 PM   |  A+A-


L. Nagendra

ಎಲ್. ನಾಗೇಂದ್ರ

Posted By : Shilpa D
Source : Express News Service

ಮೈಸೂರು: ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಾಲಾಗಿದ್ದ ಸಾಂಪ್ರದಾಯಿಕ ಮತಗಳನ್ನು ಪಡೆದುಕೊಳ್ಳುವಲ್ಲಿ ಜೆಡಿಎಸ್‌ ವಿಫಲವಾದ ಕಾರಣ ನಾನು ಸೋತಿದ್ದೇನೆ ಎಂದು ಮೈಸೂರು ಬಿಜೆಪಿ ಮಾಜಿ ಶಾಸಕ ಎಲ್‌.ನಾಗೇಂದ್ರ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ನಾಗೇಂದ್ರ, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಹರೀಶ್ ಗೌಡ ವಿರುದ್ಧ ಸೋತಿದ್ದಕ್ಕೆ ಬೇಸರ ವ್ಯಕ್ತಪಡಿಸಿದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನನ್ನ ವಿರುದ್ಧ ಚಾಮರಾಜ ಕ್ಷೇತ್ರದಲ್ಲಿ ಮೈಸೂರು ವಿವಿ ಮಾಜಿ ಉಪಕುಲಪತಿ ಕೆ.ಎಸ್.ರಂಗಪ್ಪ ಅವರನ್ನು ಕಣಕ್ಕಿಳಿಸಿತ್ತು.

ಹಿಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ರಂಗಪ್ಪ  27,284 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದರು. ಆದರೆ 2023ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಕೆ.ರಮೇಶ್ ಕೇವಲ 4549 ಮತಗಳನ್ನು ಪಡೆದಿದ್ದರು. ಭಾಗದಲ್ಲಿ ಜೆಡಿಎಸ್ ನ ಕಳಪೆ ಸಾಧನೆ ಹಾಗೂ ಸಾಂಪ್ರದಾಯಿಕ ಮತಗಳು ಕಾಂಗ್ರೆಸ್‌ಗೆ ಹೋಗಿದ್ದರಿಂದ ನಾನು ಚುನಾವಣೆಯಲ್ಲಿ ಸೋತಿದ್ದೇನೆ ಎಂದರು. ಆದರೆ ಚುನಾವಣೆಯಲ್ಲಿ ತಮ್ಮ ಮತಗಳಿಕೆ ಹೆಚ್ಚಿದೆ ಎಂದು ನಾಗೇಂದ್ರ ಹೇಳಿದರು.

2018 ರ ಚುನಾವಣೆಗೆ ಹೋಲಿಸಿದರೆ 2023 ರ ಚುನಾವಣೆಯಲ್ಲಿ ನಾನು 17,154 ಹೆಚ್ಚು ಮತಗಳನ್ನು ಪಡೆದಿದ್ದೇನೆ. 2018 ರ ಚುನಾವಣೆಯಲ್ಲಿ ನಾನು ಸುಮಾರು 51,600 ಮತಗಳನ್ನು ಪಡೆದಿದ್ದೇನೆ ಮತ್ತು 2023 ರಲ್ಲಿ ನಾನು 68,837 ಮತಗಳನ್ನು ಪಡೆದಿದ್ದೇನೆ. ಜೆಡಿಎಸ್ ಪಕ್ಷದ ಕಳಪೆ ಸಾಧನೆಯ ಹೊರತಾಗಿ, ಕಾಂಗ್ರೆಸ್ ಘೋಷಿಸಿದ ಭಾಗ್ಯಗಳು ಮತ್ತು ಡಿಕೆ ಶಿವಕುಮಾರು ಸಿಎಂ ಆಗುತ್ತಾರೆ ಎಂದು ಜನರು ನಂಬಿ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದರು.

ಈ ಕ್ಷೇತ್ರದಲ್ಲಿ 950 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದರೂ ನಾನು ಸೋತಿದ್ದೇನೆ.  ಇದೇ ವೇಳೆ, ಕಾಂಗ್ರೆಸ್ ಬಹುಮತ ಗಳಿಸಿದ ಮೂರೇ ದಿನಕ್ಕೆ ಹೊಸಕೋಟೆಯಲ್ಲಿ ಕೊಲೆ, ಶಿವಮೊಗ್ಗದಲ್ಲಿ ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ, ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರ ಮನೆ ಮೇಲೆ ದಾಳಿ, ಭಟ್ಕಳದಲ್ಲಿ ಗಲಭೆ ನಡೆದಿದೆ ಎಂದು ನಾಗೇಂದ್ರ ಆರೋಪಿಸಿದರು.

ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಪಿಎಫ್‌ಐ ಕಾರ್ಯಕರ್ತರ ಮೇಲಿನ 175 ಪ್ರಕರಣಗಳನ್ನು ಹಿಂಪಡೆಯಲಾಗಿತ್ತು. ಕಾಂಗ್ರೆಸ್ ಆಡಳಿತದಲ್ಲಿ ಮೈಸೂರಿನಲ್ಲಿ ಹುಕ್ಕಾ ಬಾರ್‌ಗಳು ನಾಯಿಕೊಡೆಗಳಂತೆ ತಲೆ ಎತ್ತಿದ್ದವು. ಸಮಾಜದಲ್ಲಿ ಶಾಂತಿ ಕಾಪಾಡಲು ಕಾಂಗ್ರೆಸ್ ಸರ್ಕಾರ ಸಮಾಜಘಾತುಕ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ರಾಜ್ಯದಲ್ಲಿ ಹುಕ್ಕಾ ಬಾರ್‌ಗಳನ್ನು ನಿಷೇಧಿಸಬೇಕು ಎಂದು ನಾನು ಬಯಸುತ್ತೇನೆ ಎಂದು ಅವರು ಹೇಳಿದರು.


Stay up to date on all the latest ರಾಜಕೀಯ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp