social_icon

ಸಚಿವ ಸಂಪುಟ ವಿಸ್ತರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಕೈ ಮೇಲು: ಲಿಂಗಾಯತ- ದಲಿತರಿಗೆ ಸಿಂಹಪಾಲು!

ರಾಜ್ಯದ ಗಮನ ಸೆಳೆದಿದ್ದ ಸಚಿವ ಸಂಪುಟ ವಿಸ್ತರಣೆ ಮುಗಿದಿದೆ, ಸಿಎಂ ಸಿದ್ದರಾಮಯ್ಯ ಸಂಪುಟಕ್ಕೆ 24 ಸಚಿವರ ಸೇರ್ಪಡೆಯಾಗಿದೆ. ಹಲವು ಸರಣೆ ಸಭೆಗಳ ಬಳಿಕ ಕಾಂಗ್ರೆಸ್ ಸರಕಾರದ ನೂತನ ಸಚಿವರ ಪಟ್ಟಿ ಶುಕ್ರವಾರ ಬಿಡುಗಡೆಯಾಗಿದೆ.

Published: 27th May 2023 09:00 AM  |   Last Updated: 27th May 2023 02:08 PM   |  A+A-


cheluvarayaswamy, madhu bangarappa

ಚಲುವರಾಯಸ್ವಾಮಿ ಮತ್ತು ಬೈರತಿ ಸುರೇಶ್ , ಮಧು ಬಂಗಾರಪ್ಪ

Posted By : Shilpa D
Source : Online Desk

ಬೆಂಗಳೂರು: ರಾಜ್ಯದ ಗಮನ ಸೆಳೆದಿದ್ದ ಸಚಿವ ಸಂಪುಟ ವಿಸ್ತರಣೆ ಮುಗಿದಿದೆ, ಸಿಎಂ ಸಿದ್ದರಾಮಯ್ಯ ಸಂಪುಟಕ್ಕೆ 24 ಸಚಿವರ ಸೇರ್ಪಡೆಯಾಗಿದೆ. ಹಲವು ಸರಣೆ ಸಭೆಗಳ ಬಳಿಕ ಕಾಂಗ್ರೆಸ್ ಸರಕಾರದ ನೂತನ ಸಚಿವರ ಪಟ್ಟಿ ಶುಕ್ರವಾರ ಬಿಡುಗಡೆಯಾಗಿದೆ. ಶನಿವಾರ ಬೆಳಗ್ಗೆ 11.45 ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದ್ದು, 24 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ.

ದಲಿತ ಸಮುದಾಯಕ್ಕೆ ಬರೋಬ್ಬರಿ 9 ಸಚಿವ ಸ್ಥಾನ ಲಭಿಸಿದ್ದು ಮುನಿಯಪ್ಪ, ಜಿ.ಪರಮೇಶ್ವರ್, ಹೆಸ್.ಸಿ.ಮಹದೇವಪ್ಪ, ಆರ್.ಬಿ. ತಿಮ್ಮಾಪುರ ಮತ್ತು ಪ್ರಿಯಾಂಕ್ ಖರ್ಗೆ ಅವರುಗಳು ಪರಿಶಿಷ್ಟ ಜಾತಿ ಖೋಟಾದಲ್ಲಿ ಸಚಿವರಾಗಿದ್ದಾರೆ. ಎಡಗೈ ಮತ್ತು ಬಲಗೈ ಸಮುದಾಯಗಳನ್ನು ಸರಿದೂಗಿಸಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಸಂಪುಟ ಸಂಪೂರ್ಣ ಭರ್ತಿ: ಶೆಟ್ಟರ್, ಸವದಿ ಔಟ್, ಯಾವ ಸಮುದಾಯಕ್ಕೆ ಎಷ್ಟು ಪ್ರಾತಿನಿಧ್ಯ?

ಪರಿಶಿಷ್ಟ ಪಂಗಡದ ಪ್ರತಿನಿಧಿಗಳಾಗಿ ನಾಗೇಂದ್ರ, ಮಧುಗಿರಿ ರಾಜಣ್ಣ, ಸತೀಶ್ ಜಾರಕಿಹೊಳಿ ಅವರಿಗೆ ಅವಕಾಶ ದೊರೆತಿದೆ. ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಅತ್ಯಂತ ಸಣ್ಣ ಹಿಂದುಳಿದ ಸಮುದಾಯಗಳಲ್ಲಿ ಒಂದಾದ ಬೆಸ್ತ ಸಮುದಾಯದ ಮಾಂಕಾಳ ವೈದ್ಯ, ಮರಾಠ ಸಮಾಜದಿಂದ ಸಂತೋಷ್ ಲಾಡ್ ಇದ್ದಾರೆ.

ಕುರುಬ ಸಮುದಾಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ. ಬಿಲ್ಲವ (ಈಡಿಗ) ಸಮುದಾಯದಿಂದ ಮಧು ಬಂಗಾರಪ್ಪ ಇದ್ದಾರೆ.

ಲಿಂಗಾಯತ ಸಮುದಾಯಕ್ಕೆ ಒಟ್ಟು ಎಂಟು ಸಚಿವ ಸ್ಥಾನ ನೀಡಲಾಗಿದ್ದು, ಈ ಸಮುದಾಯದ ಬಹುತೇಕ ಎಲ್ಲಾ ಪ್ರಮುಖ ಒಳಪಂಗಡಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್‌ಕರ್ ಮತ್ತು ಶಿವಾನಂದ ಪಾಟೀಲ್, ಎಂ.ಬಿ.ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಶರಣ ಪ್ರಕಾಶ ಪಾಟೀಲ್, ದರ್ಶನಾಪುರ, ಹೆಚ್.ಕೆ.ಪಾಟೀಲ್ ಅವರು ಲಿಂಗಾಯತರ ಖೋಟಾದಲ್ಲಿ ಸಚಿವರಾಗಿದ್ದಾರೆ.

ಇದನ್ನೂ ಓದಿ: ತಪ್ಪಿದ ಸಚಿವ ಸ್ಥಾನ, ಪಕ್ಷ ನಿಷ್ಠೆಗೆ ಬೆಲೆ ಸಿಗದಿದ್ದಕ್ಕೆ ಅಸಮಾಧಾನ; ಎಂಎಲ್ ಸಿ ಹುದ್ದೆಗೆ ಹರಿಪ್ರಸಾದ್ ರಾಜಿನಾಮೆ?

ಒಕ್ಕಲಿಗರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಚೆಲುವರಾಯಸ್ವಾಮಿ, ಪಿರಿಯಾಪಟ್ಟಣ ವೆಂಕಟೇಶ್, ಎಂ.ಸಿ.ಸುಧಾಕರ್, ಕೃಷ್ಣಬೈರೇಗೌಡ ಸೇರಿ ಐದು ಮಂದಿಗೆ ಪ್ರಾತಿನಿಧ್ಯ ದೊರೆತಿದೆ.

ಮುಸ್ಲಿಂ ಸಮುದಾಯದಿಂದ ಜಮೀರ್ ಅಹಮದ್ ಖಾನ್, ರಹೀಂ ಖಾನ್ ಇಬ್ಬರು ಸಚಿವರಾಗಿದ್ದರೆ, ಯು.ಟಿ.ಖಾದರ್ ಸ್ಪೀಕರ್ ಆಗಿದ್ದಾರೆ. ಕ್ರೈಸ್ತ ಸಮುದಾಯದಿಂದ ಕೆ.ಜೆ.ಜಾರ್ಜ್ ಅವರಿಗೆ ಸಚಿವ ಸ್ಥಾನ ಒಲಿದಿದೆ. ಜೈನ ಸಮುದಾಯದಿಂದ ಡಿ.ಸುಧಾಕರ್ ಹಾಗೂ ಬ್ರಾಹ್ಮಣ ಸಮುದಾಯದ ಪ್ರತಿನಿಧಿಯಾಗಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ದೊರಕಿದೆ.

ಸಚಿವರ ಆಯ್ಕೆಯಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುವಾಗ ಪ್ರಾದೇಶಿಕ ನ್ಯಾಯ ಸಮತೋಲನ ತಪ್ಪದಂತೆಯೂ ಎಚ್ಚರ ವಹಿಸಿರುವುದು ಸಿದ್ದರಾಮಯ್ಯ ಅವರ ಆಯ್ಕೆ ಸಮತೂಕದಲ್ಲಿದೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆ. ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೂ ಪ್ರಾತಿನಿಧ್ಯ ದೊರೆತಿದೆ. ಮಲೆನಾಡು, ಕರಾವಳಿ ಕರ್ನಾಟಕ ಮತ್ತು ಮೈಸೂರು ಕರ್ನಾಟಕ ಹಾಗೂ ಮಧ್ಯ ಕರ್ನಾಟಕಕ್ಕೆ ಸಿಕ್ಕಿರುವ ಪ್ರಾತಿನಿಧ್ಯ ಜಾತಿವಾರು ಲೆಕ್ಕಾಚಾರಗಳನ್ನೂ ಸರಿದೂಗಿಸಿದೆ.


Stay up to date on all the latest ರಾಜಕೀಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp