social_icon

ಕಷ್ಟ ಕಾಲದಲ್ಲಿ ನಮ್ಮ ಕೈಹಿಡಿದವರನ್ನು ಈಗ ಕೈ ಬಿಡುವ ಪ್ರಶ್ನೆಯೇ ಇಲ್ಲ: ಹುಬ್ಬಳ್ಳಿಯಲ್ಲಿ ಶೆಟ್ಟರ್ ಭೇಟಿ ಮಾಡಿದ ಡಿಕೆ ಶಿವಕುಮಾರ್

ಇಷ್ಟು ದಿನ ಚುನಾವಣೆಯಲ್ಲಿ ಬ್ಯುಸಿ ಇದ್ದೆ. ಪಕ್ಷಕ್ಕೆ ಶಕ್ತಿ ಕೊಟ್ಟ ಅನೇಕ ನಾಯಕರನ್ನು ಭೇಟಿಯಾಗಬೇಕಿತ್ತು. ನನಗೆ ಟೈಮ್ ಸಿಕ್ಕಿರಲಿಲ್ಲ, ಸರ್ಕಾರ ರಚನೆ, ಕ್ಯಾಬಿನೆಟ್ ರಚನೆ, ಶಾಸಕಾಂಗ ಸಭೆ, ಗ್ಯಾರಂಟಿಗಳು, ಇಲಾಖಾವಾರು ಪರಿಶೀಲನೆ ಕೆಲಸ ಆಗಬೇಕಿತ್ತು. ಇದರ ಮಧ್ಯದಲ್ಲಿ ಟೈಮ್ ಮಾಡಿಕೊಂಡು ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಭೇಟಿ ಆಗಲು ಬಂದಿದ್ದೇನೆ ಎಂದು ಬೆಳಗಾವಿಯಲ್

Published: 31st May 2023 10:56 AM  |   Last Updated: 31st May 2023 02:08 PM   |  A+A-


DCM D K Shivakumar and ministers had breakfast at Jagadish Shettar residence

ಜಗದೀಶ್ ಶೆಟ್ಟರ್ ನಿವಾಸದಲ್ಲಿ ಉಪಹಾರ ಸೇವಿಸಿದ ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಸಚಿವರು

Posted By : Sumana Upadhyaya
Source : Online Desk

ಬೆಳಗಾವಿ: ಇಷ್ಟು ದಿನ ಚುನಾವಣೆಯಲ್ಲಿ ಬ್ಯುಸಿ ಇದ್ದೆ. ಪಕ್ಷಕ್ಕೆ ಶಕ್ತಿ ಕೊಟ್ಟ ಅನೇಕ ನಾಯಕರನ್ನು ಭೇಟಿಯಾಗಬೇಕಿತ್ತು. ನನಗೆ ಟೈಮ್ ಸಿಕ್ಕಿರಲಿಲ್ಲ, ಸರ್ಕಾರ ರಚನೆ, ಕ್ಯಾಬಿನೆಟ್ ರಚನೆ, ಶಾಸಕಾಂಗ ಸಭೆ, ಗ್ಯಾರಂಟಿಗಳು, ಇಲಾಖಾವಾರು ಪರಿಶೀಲನೆ ಕೆಲಸ ಆಗಬೇಕಿತ್ತು. ಇದರ ಮಧ್ಯದಲ್ಲಿ ಟೈಮ್ ಮಾಡಿಕೊಂಡು ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಭೇಟಿ ಆಗಲು ಬಂದಿದ್ದೇನೆ ಎಂದು ಬೆಳಗಾವಿಯಲ್ಲಿ ಇಂದು ಬುಧವಾರ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಅವರಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹುಬ್ಬಳ್ಳಿಯಲ್ಲಿರುವ ಜಗದೀಶ್ ಶೆಟ್ಟರ್ ನಿವಾಸಕ್ಕೆ ಇಂದು ಭೇಟಿ ನೀಡಿ ಮಾತುಕತೆ ನಡೆಸಿದರು.

ಅದಕ್ಕೂ ಮುನ್ನ ಬೆಳಗಾವಿಯಲ್ಲಿ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಹೇಗೆ ಮಾಡಬೇಕು ಎಂದು ನಮಗೆ ಗೊತ್ತಿದೆ. ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆಗೆ ಇದೆ. ಯಾವುದೇ ಕಂಡೀಷನ್ ಏನೂ ಇಲ್ಲಾರೀ. ಯಾರೂ ಒಪ್ಪಿಕೊಳ್ಳುವುದು ಬಿಡುವುದು ಇಲ್ಲ, ಅವರು ನಮ್ಮ ಪಕ್ಷದ ನಾಯಕರು. ಬಾರ್ಗೇನಿಂಗ್ ಮಾಡುವಂತದ್ದು ಏನೂ ಇಲ್ಲ. ಯಾರು ನಮ್ಮ ಜೊತೆ ಧೈರ್ಯ ಮಾಡಿ ಕೈ ಜೋಡಿಸಿದ್ದಾರೆ ಅವರನ್ನು ಕೈ ಬಿಡುವ ಪ್ರಶ್ನೆ ಬರಲ್ಲ ಎಂದು ಹೇಳಿದರು.

ಇದನ್ನೂ ಓದಿ: ನನ್ನ ಆತ್ಮವಿಶ್ವಾಸ ಕುಗ್ಗಿಲ್ಲ, ಖಿನ್ನತೆಗೊಳಗಾಗಿಲ್ಲ: ಫಲಿತಾಂಶದ ಬಳಿಕ ಮೊದಲ ಬಾರಿ ಶೆಟ್ಟರ್ ಬಹಿರಂಗ ಪ್ರತಿಕ್ರಿಯೆ!

ಲೋಕಸಭೆ ಚುನಾವಣೆ ಟಾರ್ಗೆಟ್ ಮಾಡಿ ಇಬ್ಬರೂ ನಾಯಕರ ಬಳಕೆ ಮಾಡುತ್ತಿರಾ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ, ಅವರು ನಮ್ಮ ಪಕ್ಷದ ನಾಯಕರು. ಅವರು ನಮ್ಮ ಪಕ್ಷದ ಕಾರ್ಯಕರ್ತರಲ್ಲ. ಗೆದ್ದಿರಬಹುದು, ಸೋತಿರಬಹುದು ಅವರು ನಮ್ಮ ನಾಯಕರು ಎಂದರು.

ತುಮಕೂರು ಗುಬ್ಬಿ ವಾಸು, ಶಿವಲಿಂಗೇಗೌಡ, ಪುಟ್ಟಣ್ಣಯ್ಯ, ಬಾಬುರಾವ್ ಚಿಂಚನಸೂರ್ ಇವರೆಲ್ಲ ಇರುವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಪಕ್ಷಕ್ಕೆ ಸೇರಿದರು. ನಮ್ಮ ಪಕ್ಷಕ್ಕೆ ಇವರೆಲ್ಲರೂ ಶಕ್ತಿ ತುಂಬಿದ್ದು, ನಾವು ಅವರ ಶಕ್ತಿ ತುಂಬಬೇಕಾದದ್ದು ನಮ್ಮ ಕರ್ತವ್ಯ. ಹೀಗಾಗಿ ನಾನು ಪಕ್ಷದ ಆಂತರಿಕ ವಿಚಾರ ಚರ್ಚೆ ಸಲಹೆ ಪಡೆಯಲು ಭೇಟಿ ಮಾಡುತ್ತಿದ್ದೇನೆ. ಸೌಹಾರ್ದಯುತವಾಗಿ ಭೇಟಿ ಬಿಟ್ಟು ರಾಜಕೀಯ ವಿಶೇಷ ಏನು ಇಲ್ಲ ಎಂದರು. 

ಇದನ್ನೂ ಓದಿ: ಸಚಿವ ಸ್ಥಾನ ಮಿಸ್: ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಭೇಟಿ ಮಾಡಿ ಡಿ ಕೆ ಶಿವಕುಮಾರ್ ಮನ ಓಲೈಕೆ?

ಇಂದು ಮಧ್ಯಾಹ್ನ ಎಲ್ಲ ಮಂತ್ರಿಗಳು ಸೇರಿ ಸಭೆ ಮಾಡುತ್ತಿದ್ದೇವೆ. ನಾಳೆ ರೆಗ್ಯುಲರ್ ಕ್ಯಾಬಿನೆಟ್ ಮೀಟಿಂಗ್ ಇದೆ. ನಾಳೆ ಮುಂಚಿತವಾಗಿ ಸಿಎಂ ಕೆಲವರನ್ನು ಆಹ್ವಾನಿಸಿದ್ದು, ಎಲ್ಲಾ ಇಲಾಖೆ ಮಂತ್ರಿಗಳು ಕೂಡ ಚರ್ಚೆ ಮಾಡಿದ್ದಾರೆ. ಪರಸ್ಪರ ಚರ್ಚೆ ಮಾಡಿ ಬಳಿಕ ನಾವು ನಿಮ್ಮ ಜೊತೆ ಮಾತನಾಡುತ್ತೇವೆ ಎಂದರು.

ಈ ವೇಳೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಹ ಶೆಟ್ಟರ್ ನಿವಾಸಕ್ಕೆ ತೆರಳಿದ್ದರು. 

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಗದೀಶ್​ ಶೆಟ್ಟರ್​​, ಡಿಕೆ ಶಿವಕುಮಾರ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದರು. ಮುಂಬರುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

Stay up to date on all the latest ರಾಜಕೀಯ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp