ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ಡಿಸಿಎಂ ನೇಮಕ ಮಾಡುವ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರ, ಅವಕಾಶ ನೀಡಿದರೆ ನಾನು ಸಿದ್ಧ: ಸತೀಶ್ ಜಾರಕಿಹೊಳಿ

ಡಿಕೆ ಶಿವಕುಮಾರ್‌ ಜತೆಗೆ ಇನ್ನೂ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ, ಪಕ್ಷವು ತನಗೆ ಅವಕಾಶ ನೀಡಿದರೆ ಡಿಸಿಎಂ ಆಗಲು ಸಿದ್ಧ ಎಂದು ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
Published on

ಬಾಗಲಕೋಟೆ: ಡಿಕೆ ಶಿವಕುಮಾರ್‌ ಜತೆಗೆ ಇನ್ನೂ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ, ಪಕ್ಷವು ತನಗೆ ಅವಕಾಶ ನೀಡಿದರೆ ಡಿಸಿಎಂ ಆಗಲು ಸಿದ್ಧ ಎಂದು ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಮಂಗಳವಾರ ಇಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿಸಿಎಂ ಹುದ್ದೆಗೆ ಕಾಂಗ್ರೆಸ್ ಹೈಕಮಾಂಡ್ ಮುಂದೆ ಯಾವುದೇ ಬೇಡಿಕೆ ಇಟ್ಟಿಲ್ಲ. 'ನಾನು ಈಗಾಗಲೇ ಸರ್ಕಾರದಲ್ಲಿ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಡಿಸಿಎಂ ಹುದ್ದೆ ಕೇವಲ ಬಡ್ತಿಯಾಗಿದೆ ಎಂದರು. 

ಮೇ 10 ರಂದು ಕರ್ನಾಟಕದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹಲವಾರು ಸಮುದಾಯಗಳು ಕಾಂಗ್ರೆಸ್‌ಗೆ ಮತ ಹಾಕಿವೆ ಎಂದು ಸತೀಶ್ ಹೇಳಿದರು.

ಪ್ರಮುಖ ಸಮುದಾಯಗಳು ಡಿಸಿಎಂ ಹುದ್ದೆಗೆ ಹಕ್ಕು ಚಲಾಯಿಸುವುದು ತಪ್ಪಲ್ಲ. ಅಂತಹ ಬೇಡಿಕೆಯನ್ನು ಸರ್ಕಾರ ಅಥವಾ ಡಿಸಿಎಂ ಡಿಕೆ ಶಿವಕುಮಾರ್ ನಿಯಂತ್ರಿಸುವ ಪ್ರಯತ್ನ ಎಂದು ಪರಿಗಣಿಸಬಾರದು. ಹೆಚ್ಚಿನ ಡಿಸಿಎಂ ಹುದ್ದೆಗಳ ಬೇಡಿಕೆಯೊಂದಿಗೆ ಯಾರ ಪ್ರಭಾವವನ್ನು ದುರ್ಬಲಗೊಳಿಸುವ ಪ್ರಯತ್ನವಿಲ್ಲ. ಹೆಚ್ಚಿನ ಡಿಸಿಎಂ ಹುದ್ದೆಗಳನ್ನು ರಚಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಏಕೆಂದರೆ, ಅದು ಸಾಮಾಜಿಕ ನ್ಯಾಯವನ್ನು ಮಾತ್ರ ನೀಡುತ್ತದೆ. ಹೆಚ್ಚಿನ ಡಿಸಿಎಂಗಳನ್ನು ನೇಮಕ ಮಾಡುವ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಡಲಾಗಿದೆ ಎಂದು ಅವರು ಪುನರುಚ್ಚರಿಸಿದರು.

ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಸ್ಥಾನಗಳನ್ನು ಮೀಸಲಿಡುವ ನಿರ್ಧಾರವನ್ನು ಸತೀಶ್ ಸ್ವಾಗತಿಸಿದರು. 

ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ಸರ್ಕಾರ ತೆರವುಗೊಳಿಸುತ್ತಿಲ್ಲ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿದ ಸತೀಶ್, ಸರ್ಕಾರವು ಆದ್ಯತೆಯ ಮೇಲೆ ಬಿಲ್‌ಗಳನ್ನು ತೆರವುಗೊಳಿಸುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ದುರುಪಯೋಗದಿಂದ ಮಾತ್ರ ಬಾಕಿ ಬಿಲ್‌ಗಳು ಏರಿಕೆಯಾಗುತ್ತಿವೆ ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com