social_icon

ಎನ್ ಡಿಎ ಸೇರಿರುವುದರಿಂದ ದಕ್ಷಿಣ ಮಾತ್ರವಲ್ಲ, ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕದಲ್ಲೂ ಜೆಡಿಎಸ್ ಬಲಿಷ್ಠ: ಜಿ.ಟಿ.ದೇವೇಗೌಡ

ದಕ್ಷಿಣ ಕರ್ನಾಟಕ ಮಾತ್ರವಲ್ಲದೆ ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕದಲ್ಲೂ ಜೆಡಿಎಸ್ ಬಲಿಷ್ಠವಾಗಿದೆ. ಜೆಡಿಎಸ್ ಪಕ್ಷ ಎನ್‌ಡಿಎ ಸೇರಿರುವುದರಿಂದ ಮುಂದಿನ ದಿನಗಳಲ್ಲಿ ಪಕ್ಷ ಬಲಿಷ್ಠವಾಗಲಿದೆ.

Published: 27th September 2023 08:47 AM  |   Last Updated: 27th September 2023 03:15 PM   |  A+A-


GT devegowda

ಜಿ.ಟಿ ದೇವೇಗೌಡ

Posted By : Shilpa D
Source : Express News Service

ಬೆಂಗಳೂರು: ದಕ್ಷಿಣ ಕರ್ನಾಟಕ ಮಾತ್ರವಲ್ಲದೆ ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕದಲ್ಲೂ ಜೆಡಿಎಸ್ ಬಲಿಷ್ಠವಾಗಿದೆ.  ಜೆಡಿಎಸ್ ಪಕ್ಷ ಎನ್‌ಡಿಎ ಸೇರಿರುವುದರಿಂದ ಮುಂದಿನ ದಿನಗಳಲ್ಲಿ ಪಕ್ಷ ಬಲಿಷ್ಠವಾಗಲಿದೆ ಎಂಬ ಸಂದೇಶವನ್ನು ಕಾರ್ಯಕರ್ತರಿಗೆ ರವಾನಿಸಿದೆ ಎಂದು ಹಿರಿಯ ನಾಯಕ ಜಿ.ಟಿ ದೇವೇಗೌಡ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಂಗಳವಾರ ನಡೆದ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ಸಮಿತಿ ಸಭೆ ಹಾಗೂ ಪುನಶ್ಚೇತನ ಪರ್ವ ಉದ್ಘಾಟಿಸಿ ಮಾತನಾಡಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಕಲ್ಯಾಣ ಕರ್ನಾಟಕದ ಬಾಪುಗೌಡ ದರ್ಶನಾಪುರ, ಎಸ್.ಕೆ.ಕಾಂತಾ, ವಿಶ್ವನಾಥ ಪಾಟೀಲ್ ಹೆಬ್ಬಾಳ, ಎಂ.ವೈ.ಪಾಟೀಲ್, ಸುಭಾಷ್ ಗುತ್ತೇದಾರ್ ಮುಂತಾದ ನಾಯಕರು ಜೆಡಿಎಸ್ ಶಾಸಕರಾಗಿ ಆಯ್ಕೆಯಾದರು.

ಇದನ್ನೂ ಓದಿ: ಬಿಜೆಪಿ ಜೊತೆಗಿನ ಮೈತ್ರಿ ತಂದಿಟ್ಟ ಸಂಕಷ್ಟ: ಮತ್ತಷ್ಟು ಮುಸ್ಲಿಂ ನಾಯಕರು ಜೆಡಿಎಸ್ ತೊರೆಯಲು ನಿರ್ಧಾರ?

ನಂತರ ತಮ್ಮ ನಿಷ್ಠೆಯನ್ನು ಬೇರೆ ಪಕ್ಷಗಳಿಗೆ ಬದಲಾಯಿಸಿದರು. ಕೆಲವರು ನಿವೃತ್ತರಾದರು ಇನ್ನೂ ಕೆಲವರು ನಿಧನರಾದರು. ಆದರೆ ಅವರ ಅನುಯಾಯಿಗಳು ಜನತಾದಳದಲ್ಲಿಯೇ ಇದ್ದು ನಮ್ಮ ಪಕ್ಷದ ಆಧಾರ ಸ್ತಂಭಗಳಿದ್ದಂತೆ ಎಂದುಹೇಳಿದರು.

ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು, ಮತ್ತದೇ ರೀತಿಯ ಕಾರ್ಯಕ್ರಮಗಳಿಗಾಗಿ ಕರ್ನಾಟಕದ ಲಕ್ಷಾಂತರ ಜನರು ಎದುರು ನೋಡುತ್ತಿದ್ದಾರೆ ಎಂದು ಹೇಳಿದರು. ಲೋಕಸಭೆ ಚುನಾವಣೆ ಬಳಿಕ ಕರ್ನಾಟಕದಲ್ಲಿ ಕಾಂಗ್ರೆಸ್ ಮೂರು ಹೋಳಾಗಲಿದ್ದು, ಪ್ರತಿಯೊಂದು ಗುಂಪು ತನ್ನ ಶಕ್ತಿ ಪ್ರದರ್ಶನಕ್ಕೆ ಕಾಯುತ್ತಿದೆ ಎಂದು ದೇವೇಗೌಡ ಹೇಳಿದರು.


Stay up to date on all the latest ರಾಜಕೀಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • Shri

    Only thing this will make sure ia JDS leaders financial status will improve..
    2 months ago reply
flipboard facebook twitter whatsapp