social_icon

ಸ್ಟಾಲಿನ್‌ ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನೂ ಕಾನೂನುಬಾಹಿರವಾಗಿ ಕಳುಹಿಸಿಕೊಟ್ಟಿದ್ದ ಸಿದ್ದರಾಮಯ್ಯ ಈಗ ಎಲ್ಲಿ ಅಡಗಿ ಕೂತಿದ್ದಾರೆ?

ಬೆಂಗಳೂರಿನಲ್ಲಿ ನಡೆದ ಇಂಡಿ ಮೈತ್ರಿಕೂಟದ ಸಭೆಯಲ್ಲಿ ಪಾಲ್ಗೊಳ್ಳಲು ಬಂದ ಸ್ಟಾಲಿನ್‌ರವರನ್ನು ಸ್ವಾಗತಿಸಲು, ಮಾವನ ಆತಿಥ್ಯ ಮಾಡುವ ಅಳಿಯನಂತೆ, ತಮ್ಮ ಇಡೀ ಸಚಿವ ಸಂಪುಟವನ್ನು ಮಾತ್ರವಲ್ಲದೆ ರಾಜ್ಯದ ಉನ್ನತ ಐಎಎಸ್ ಅಧಿಕಾರಿಗಳನ್ನೂ ಕಾನೂನುಬಾಹಿರವಾಗಿ ಕಳುಹಿಸಿಕೊಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಎಲ್ಲಿ ಅಡಗಿ ಕೂತಿದ್ದಾರೆ?...

Published: 29th September 2023 02:28 PM  |   Last Updated: 29th September 2023 07:58 PM   |  A+A-


BJP Tweet.

ಬಿಜೆಪಿ ಟ್ವೀಟ್

Posted By : Manjula VN
Source : Online Desk

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಇಂಡಿ ಮೈತ್ರಿಕೂಟದ ಸಭೆಯಲ್ಲಿ ಪಾಲ್ಗೊಳ್ಳಲು ಬಂದ ಸ್ಟಾಲಿನ್‌ರವರನ್ನು ಸ್ವಾಗತಿಸಲು, ಮಾವನ ಆತಿಥ್ಯ ಮಾಡುವ ಅಳಿಯನಂತೆ, ತಮ್ಮ ಇಡೀ ಸಚಿವ ಸಂಪುಟವನ್ನು ಮಾತ್ರವಲ್ಲದೆ ರಾಜ್ಯದ ಉನ್ನತ ಐಎಎಸ್ ಅಧಿಕಾರಿಗಳನ್ನೂ ಕಾನೂನುಬಾಹಿರವಾಗಿ ಕಳುಹಿಸಿಕೊಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಎಲ್ಲಿ ಅಡಗಿ ಕೂತಿದ್ದಾರೆ? ಡಿಕೆ.ಶಿವಕುಮಾರ್ ಯಾವ ಬಿಲದಲ್ಲಿದ್ದಾರೆಂದು ರಾಜ್ಯ ಬಿಜೆಪಿ ಪ್ರಶ್ನೆ ಮಾಡಿದೆ.

ಕಾವೇರಿ ವಿವಾದ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.

ಸ್ಟಾಲಿನ್ ಸರ್ಕಾರಕ್ಕೆ ಕಳ್ಳತನದಿಂದ ಆದೇಶಕ್ಕಿಂತಲೂ ಹೆಚ್ಚು ನೀರು ಬಿಟ್ಟು ಕನ್ನಡಿಗರಿಗೆ, ಕರ್ನಾಟಕಕ್ಕೆ ದ್ರೋಹ ಎಸಗಿ, ಏಳು ಸುತ್ತಿನ ಕೋಟೆಯ ಪೊಲೀಸ್ ಭದ್ರತೆಯಲ್ಲಿ ಭಯದಿಂದ ಬಚ್ಚಿಟ್ಟುಕೊಂಡಿರುವ ನಮ್ಮ ಹೆಮ್ಮೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಟೀಕೆ ಮಾಡಿದೆ.

ಸ್ಟಾಲಿನ್ ಕೇಳ್ ಕೇಳ್ದಂಗೆ ಸಿದ್ದರಾಮಯ್ಯನೋರು ನಮ್ಮಮ್ಮ ಕಾವೇರಿಯನ್ನ ತಮಿಳುನಾಡಿಗೆ ಬೇಕಾಬಿಟ್ಟಿ ಹರಿಸುತ್ತಿರೋದಾದರು ಯಾಕೆ? ಎಂದು ಪ್ರಶ್ನಿಸಿ, ಸಿದ್ದರಾಮಯ್ಯ ಅವರ ಹೇಳಿಕೆಯ ವಿಡಿಯೋವೊಂದನ್ನು ಹಂಚಿಕೊಂಡು ವ್ಯಂಗ್ಯವಾಡಿದೆ.

ಸ್ಟಾಲಿನ್ ನಾಡಿನ ರೈತರಿಗೆ ಎರೆಡೆರಡು ಬೆಳೆ ಬೆಳೆಯಲು ನೀರು ಬಿಟ್ಟು, ನಾಡಿನ ರೈತರಿಗೆ ನೀರಿಲ್ಲದೆ ಭತ್ತ ಬೆಳೆಯುವ "ಕರ್ನಾಟಕ ಮಾಡೆಲ್" ಅನ್ನು ಪರಿಚಯಿಸುತ್ತಿರುವ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಎಂದು ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: ಕಾವೇರಿ ಸಮಸ್ಯೆ: ತಮಿಳುನಾಡು ಸಿಎಂ ಭೇಟಿಗಾಗಿ 48 ಗಂಟೆ ಕಾದರೂ ಅವಕಾಶ ಸಿಗಲಿಲ್ಲ - ಲೆಹರ್ ಸಿಂಗ್

ನಾಲ್ಕು ತಿಂಗಳ ಕಾಂಗ್ರೆಸ್ ಸರ್ಕಾರ, ರಾಜ್ಯದ ನೇಕಾರರ ಬದುಕನ್ನು ಅಕ್ಷರಶಃ ಅನಾಥವನ್ನಾಗಿಸಿದೆ. ಅತ್ತ ದುಡಿಮೆಯ ಕೂಲಿಯು ಇಲ್ಲ, ಇತ್ತ ನೇಕಾರಿಕೆಗೆ ಬೇಕಾದ ಕಚ್ಚಾ ವಸ್ತುಗಳನ್ನೂ ಸಹ ಸರಿಯಾಗಿ ಪೂರೈಸುತ್ತಿಲ್ಲ. ರೈತ ವಿದ್ಯಾನಿಧಿ ಯೋಜನೆಯನ್ನು ನೇಕಾರರ ಮಕ್ಕಳಿಗೂ ಸಹ ಬಿಜೆಪಿ ಸರ್ಕಾರ ವಿಸ್ತರಿಸಿತ್ತು. ಆ ಯೋಜನೆಯನ್ನು ಸಹ ಕಾಂಗ್ರೆಸ್ ಸರ್ಕಾರ ನಿಲ್ಲಿಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಕಾರರಿಗೆ ದೊರೆಯುತ್ತಿದ್ದ ವಿದ್ಯುತ್ ದರದ ಸಬ್ಸಿಡಿಗೂ ಕೈ ಸರ್ಕಾರ ಕೊಕ್ಕೆ ಹಾಕಿದೆ. ಪಾರಂಪರಿಕ ವೃತ್ತಿಯನ್ನು ಮುಂದುವರೆಸುತ್ತಿರುವ ನೇಕಾರ ಸಮುದಾಯವನ್ನು ಕಂಡರೆ, ಕಾಂಗ್ರೆಸ್ ಸರ್ಕಾರಕ್ಕೆ ಏಕೆ ಈ ಪರಿ ದ್ವೇಷ ಎಂಬುದು ಅರ್ಥವಾಗುತ್ತಿಲ್ಲ ಎಂದು ಹೇಳಿದೆ.

ಇದೇ ವೇಳೆ ನೀರಿನ ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ ಎಂದು ರೈತರಿಗೆ ಸೂಚನೆ ನೀಡಿದ್ದ ಸಚಿವ ಚೆಲುವರಾಯಸ್ವಾಮಿಯವರ ಹೇಳಿಕೆ ಕುರಿತಂತೆಯೂ ವ್ಯಂಗ್ಯವಾಡಿದೆ.

ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಿರುವ ಕಾಂಗ್ರೆಸ್ ನ ತುಘಲಕ್‌ ಸರ್ಕಾರ ಮುಂದೆ ಜನರಿಗೆ ಷರತ್ತುಗಳೊಂದಿಗೆ ಹೊರಡಿಸಬಹುದಾದ ಆದೇಶಗಳು ಇಂತಿವೆ...

ಕಾವೇರಿ ನೀರಿಲ್ಲ ರೈತರು ಬೆಳೆ ಬೆಳೆಯಬೇಡಿ, ಬೆಂಗಳೂರಿಗೆ ನೀರಿಲ್ಲ ಸ್ನಾನ ಮಾಡಬೇಡಿ, ಸೆಂಟ್‌ ಬಳಸಿ, ರಾಜ್ಯದಲ್ಲಿ ವಿದ್ಯುತ್‌ ಕೊರತೆ ಇದೆ ಫ್ರಿಜ್‌ ಟಿವಿ ಬಳಸಬೇಡಿ, ಬರಗಾಲದಿಂದ ಆಹಾರದ ಕೊರತೆ ಇದೆ ಉಪವಾಸ ಮಾಡಿ, ಸರ್ಕಾರದ ಬೊಕ್ಕಸ ಖಾಲಿ ಆಗಿದೆ ವಿಸ್ಕಿ, ರಮ್‌ ಕುಡಿಯಿರಿ. ಇದು ತಮಾಷೆ ಅಲ್ಲ, ಈಗಾಗಲೇ ಇದರಲ್ಲಿ ಮೂರು ಅಂಶಗಳು ಪ್ರಸ್ತುತ ಚಾಲ್ತಿಗೆ ಬಂದಿವೆ. ಇನ್ನು ಹತ್ತು ಹಲವುಗಳನ್ನು ಕಾಂಗ್ರೆಸ್‌ ತರಲಿದೆ ಎಂದು ತಿಳಿಸಿದೆ.


Stay up to date on all the latest ರಾಜಕೀಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments(3)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • Shri

    Where are BJP mps, PM and all 56 inch leaders?
    2 months ago reply
  • FLEXI

    ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದಾಗ ಕಳಸ ಬಂಡೂರಿ ಹಾಗು ಮಹದಾಯಿ ನೀರಿನ ಏನು ಕಿಸಿಯದ ಈಗ ಕಾವೇರಿ ವಿಚಾರದಲ್ಲಿ ಹೊಲಸು ರಾಜಕೀಯ ಮಾಡುತ್ತಿರುವುದು ನಾಚಿಕೆ ಕೇಡು
    2 months ago reply
  • TRP

    FELT SOMETHING IS WRONG FROM THE BEGINNING.... AFTER WATCHING THESE VIDEOS ... FOR SURE IT'S CONFIRMED... NANNU JIGUTIDA HAAGE MAADTEENI... NEENU ATTA HAAGE MAADU....
    2 months ago reply
flipboard facebook twitter whatsapp