ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಜಿಲ್ಲೆಯಾದ ಮೈಸೂರು-ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳೆರಡೂ ಗೆಲ್ಲುವುದು ಪ್ರತಿಷ್ಠೆಯ ವಿಷಯವಾಗಿದ್ದು, ಪಕ್ಷದ ಅಭ್ಯರ್ಥಿಗಳ ಗೆಲುವಿನ ಜವಾಬ್ದಾರಿಯನ್ನು ಸ್ಥಳೀಯ ಶಾಸಕರು ಮತ್ತು ಮುಖಂಡರಿಗೆ ವಹಿಸಿದ್ದಾರೆ.
ಸದ್ಯ ಎರಡೂ ಕ್ಷೇತ್ರಗಳು ಈಗ ಬಿಜೆಪಿ ಪಾಲಾಗಿರುವುದರಿಂದ, ಸಿದ್ದರಾಮಯ್ಯ ತಮ್ಮ ತವರು ನೆಲದಲ್ಲಿ ತಮ್ಮ ಹಿಡಿತವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲು ಮಾರ್ಗಸೂಚಿಯನ್ನು ರೂಪಿಸಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಳರಲ್ಲಿ 2.5 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ ಸಾಧಿಸುವಂತೆ ರಾಜಕೀಯ ತಂತ್ರಗಾರಿಕೆ ಹೆಣೆದು ಕೆಲಸ ಮಾಡಲು ಶಾಸಕರಿಗೆ ಟಾಸ್ಕ್ ನೀಡಿದ್ದಾರೆ.
ಕಾಂಗ್ರೆಸ್ ನರಸಿಂಹರಾಜ, ಚಾಮರಾಜ, ಪಿರಿಯಾಪಟ್ಟಣ, ವಿರಾಜಪೇಟೆ ಮತ್ತು ಮಡಿಕೇರಿ ಕ್ಷೇತ್ರಗಳನ್ನು ಹೊಂದಿದ್ದರೆ, ಜೆಡಿಎಸ್ ಎರಡು ಹುಣಸೂರು ಮತ್ತು ಚಾಮುಂಡೇಶ್ವರಿ ಮತ್ತು ಬಿಜೆಪಿ ಏಕೈಕ ಕೆಆರ್ ನಗರ ಕ್ಷೇತ್ರವನ್ನು ಹೊಂದಿದೆ. ಸಿದ್ದರಾಮಯ್ಯ ಅವರು ಹುಣಸೂರು ಮತ್ತು ಚಾಮುಂಡೇಶ್ವರಿಯಿಂದ 50 ಸಾವಿರ ಮತಗಳ ಮುನ್ನಡೆ ಬಯಸಿದ್ದು, ನರಸಿಂಹರಾಜ ಮತ್ತು ಚಾಮರಾಜ ಕ್ಷೇತ್ರದಿಂದ ಒಂದು ಲಕ್ಷ ಮತಗಳ ಮುನ್ನಡೆ ಬಯಸಿದ್ದಾರೆ. ಆದರೆ ವಿಧಾನಸಭೆ ಮತ್ತು ಸಂಸತ್ ಚುನಾವಣೆಗಳಲ್ಲಿ ಮತದಾನದ ಮಾದರಿ ಭಿನ್ನವಾಗಿರುವುದರಿಂದ ಹಾಲಿ ಶಾಸಕರಿಗೆ ಇದು ಸುಲಭವಲ್ಲ.
2014ರ ಲೋಕಸಭೆ ಚುನಾವಣೆಯಲ್ಲಿ ಮಡಿಕೇರಿಯಲ್ಲಿ ಬಿಜೆಪಿ 24,953, ಕೃಷ್ಣರಾಜದಲ್ಲಿ 34,567, ಚಾಮರಾಜದಲ್ಲಿ 32,302 ಮತ್ತು ವಿರಾಜಪೇಟೆಯಲ್ಲಿ 17,745 ಮತಗಳ ಮುನ್ನಡೆ ಸಾಧಿಸಿತ್ತು. ಪಿರಿಯಾಪಟ್ಟಣದಲ್ಲಿ 19,357, ಹುಣಸೂರಿನಲ್ಲಿ 16,408, ಚಾಮುಂಡೇಶ್ವರಿಯಲ್ಲಿ 8,264 ಮತ್ತು ನರಸಿಂಹರಾಜ 35,518 ಮತಗಳನ್ನು ಕಾಂಗ್ರೆಸ್ ಪಡೆದಿದೆ. ಬಿಜೆಪಿ 30,908 ಮತಗಳ ಅಂತರದಿಂದ ಗೆಲುವು ಸಾಧಿಸಿದೆ.
2019ರಲ್ಲಿ ಬಿಜೆಪಿ 1,36,194 ಮತಗಳ ಅಂತರದಿಂದ ಗೆದ್ದು ಕಾಂಗ್ರೆಸ್ಗೆ ದಿಗ್ಭ್ರಮೆ ಮೂಡಿಸಿತ್ತು. ಏಕೆಂದರೆ ಮಡಿಕೇರಿಯಲ್ಲಿ 41,976, ವಿರಾಜಪೇಟೆ 41,497, ಚಾಮುಂಡೇಶ್ವರಿ 22,150, ಕೃಷ್ಣರಾಜ 52,074 ಮತ್ತು ಚಾಮರಾಜ 46,051 ಮತಗಳು ಏರಿಕೆಯಾಗಿದೆ. ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್ 23,777, ಹುಣಸೂರು 3,798 ಮತ್ತು ನರಸಿಂಹರಾಜ 41,979 ಮತಗಳಿಂದ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ.
ಬಿಜೆಪಿ ಪ್ರಭಾವವನ್ನು ತಡೆಯಲು ಮತ್ತು ಕ್ಷೇತ್ರದಲ್ಲಿ ಮುನ್ನಡೆಯನ್ನು ಸುಧಾರಿಸಲು ಕಾಂಗ್ರೆಸ್ ಸರ್ಕಾರದ ಭರವಸೆಯನ್ನು ಶಾಸಕರು ಪ್ರತಿ ಮನೆಗೆ ತಲುಪಿಸಬೇಕೆಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಒಕ್ಕಲಿಗ ಮತಗಳ ಮೇಲೆ ಅವಲಂಬಿಸಿದ್ದಾರೆ. ಇಬ್ಬರು ಸಚಿವರು ಹಾಗೂ ಹಾಲಿ ಶಾಸಕರು ತಮ್ಮ ಸಾಮರ್ಥ್ಯ ಸಾಬೀತುಪಡಿಸುವಂತೆ ಹೇಳಿದ್ದು, ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ.
ಚಾಮರಾಜನಗರವನ್ನು ಕಾಂಗ್ರೆಸ್ ಭದ್ರಕೋಟೆ ಎಂದು ಪರಿಗಣಿಸಲಾಗಿದ್ದರೂ, ಪಕ್ಷದ ಅಭ್ಯರ್ಥಿ ಆರ್ ಧ್ರುವನಾರಾಯಣ ಅವರು ಬಿಜೆಪಿಯ ವಿ ಶ್ರೀನಿವಾಸ ಪ್ರಸಾದ್ ವಿರುದ್ಧ 1,256 ಮತಗಳ ಅಲ್ಪ ಅಂತರದಿಂದ ಸೋತಿದ್ದಾರೆ. ಧ್ರುವನಾರಾಯಣ ಅವರು 1,41,277 ಮತಗಳನ್ನು ಪಡೆದಿದ್ದು, ಹೆಗ್ಗಡದೇವನಕೋಟೆ, ನಂಜನಗೂಡು, ವರುಣಾ, ಟಿ ನರಸೀಪುರ, ಹನೂರು, ಕೊಳ್ಳೇಗಾಲ, ಚಾಮರಾಜನಗರ ಮತ್ತು ಗುಂಡ್ಲುಪೇಟೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಆದರೆ ಶ್ರೀನಿವಾಸ್ ಪ್ರಸಾದ್ ಅವರನ್ನು ಕಣಕ್ಕಿಳಿಸಿ, ನಂಜನಗೂಡಿನಲ್ಲಿ 9,791, ಚಾಮರಾಜನಗರದಲ್ಲಿ 9,681 ಮತ್ತು ಗುಂಡ್ಲುಪೇಟೆಯಲ್ಲಿ 15,510 ಮತಗಳನ್ನು ಗಳಿಸಿದ್ದರು.
ಕಾಂಗ್ರೆಸ್ ಹೈಕಮಾಂಡ್ ಇತ್ತೀಚೆಗೆ ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿಯಾಗಿ ಸುನೀಲ್ ಬೋಸ್ ಅವರನ್ನು ಕಣಕ್ಕಿಳಿಸಿದೆ. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರು ತಮ್ಮ ಮಗ ಚುನಾವಣೆಯಲ್ಲಿ ಪ್ರಭಾವಿ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಪಕ್ಷವು ನಿರೀಕ್ಷಿಸುತ್ತಿದೆ.
ಹಿರಿಯ ಶಾಸಕರಾದ ಪುಟ್ಟರಂಗ ಶೆಟ್ಟಿ, ಆರ್ ಕೃಷ್ಣಮೂರ್ತಿ ಮತ್ತು ಅನಿಲ್ ಚಿಕ್ಕಮಾದು ಹಾಗೂ ಮೊದಲ ಸಲ ಶಾಸಕರಾದ ಗಣೇಶ್ ಪ್ರಸಾದ್ ಮತ್ತು ದರ್ಶನ್ ಧ್ರುವನಾರಾಯಣ್ ಅವರ ಮೇಲೆ ಸಿದ್ದರಾಮಯ್ಯ ಹೊಣೆಗಾರಿಕೆ ಹೊರಿಸಿದ್ದಾರೆ. ವರುಣಾ ಕ್ಷೇತ್ರವೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಭಾಗವಾಗಿರುವುದರಿಂದ ವಿಧಾನಸಭೆ ಚುನಾವಣೆಗಿಂತ ಮತಗಳ ಅಂತರ ಹೆಚ್ಚಾಗುವಂತೆ ನೋಡಿಕೊಳ್ಳಲು ಪುತ್ರ ಡಾ.ಯತೀಂದ್ರ ಅವರನ್ನು ನಿಯೋಜಿಸಿದ್ದಾರೆ. ಜೆಡಿಎಸ್ ಪ್ರತಿನಿಧಿಸುವ ಹನೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಮಾಜಿ ಶಾಸಕ ಆರ್.ನರೇಂದ್ರ ಅವರು ತಮ್ಮ ಪ್ರಭಾವವನ್ನು ಸಾಬೀತುಪಡಿಸುವ ಸಮಯ ಕೂಡ ಬಂದಿದೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಮುಖ ಫಲಾನುಭವಿಗಳಾಗಿರುವ ಮಹಿಳಾ ಮತದಾರರನ್ನು ಕಾಂಗ್ರೆಸ್ ಒಲೈಸಿಕೊಳ್ಳಲು ನೋಡುತ್ತಿದೆ. ಬಿಜೆಪಿಯು ಮೋದಿಯವರ ಹೆಸರಿನ ಮೇಲೆ ಚುನಾವಣೆ ಎದುರಿಸುತ್ತಿರುವುದರಿಂದ ಗುಂಡ್ಲುಪೇಟೆ, ನಂಜನಗೂಡು, ಚಾಮರಾಜನಗರ ಮತ್ತು ಕೊಳ್ಳೇಗಾಲದಲ್ಲಿ ಲಿಂಗಾಯತ, ನಾಯಕ, ದೇವನಾಗ ಮತ್ತು ಇತರ ಹಿಂದುಳಿದ ಜಾತಿಗಳ ಮತಗಳನ್ನು ಕ್ರೋಢೀಕರಿಸಲು ಕಾಂಗ್ರೆಸ್ ಗೆ ಬಿಸಿ ತಟ್ಟಿದೆ. ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜ್ ಅವರ ತವರೂರು ಕೊಳ್ಳೆಗಾಲವಾಗಿದೆ.
ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ: ಚಾಮರಾಜನಗರ, ಮೈಸೂರು-ಕೊಡಗು ಕ್ಷೇತ್ರವನ್ನು ಶತಾಯ ಗತಾಯ ಗೆಲ್ಲಲೇ ಬೇಕು ಎನ್ನುವ ಹಠ ತೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಏಪ್ರಿಲ್ 1ರಿಂದ ಮೂರು ದಿನಗಳ ಕಾಲ ಮೈಸೂರಿನಲ್ಲಿ ಬೀಡುಬಿಟ್ಟು ಪ್ರಚಾರ ಕೈಗೊಳ್ಳಲಿದ್ದಾರೆ.
ಇಂದು ಬೆಳಗ್ಗೆ 10.40ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಿದ್ದರಾಮಯ್ಯ, ವರುಣಾ ಕ್ಷೇತ್ರದ ಬಿಳಿಗೆರೆ ಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿಂದ ಟಿ.ನರಸೀಪುರಕ್ಕೆ ಹೋಗಿ 3 ಗಂಟೆಗೆ ಪ್ರಚಾರ ಭಾಷಣ ಮಾಡಲಿದ್ದಾರೆ. ಬಳಿಕ ಸಂಜೆ ಮೈಸೂರಿಗೆ ಆಗಮಿಸಿ ಕ್ರೈಸ್ತರ ಧರ್ಮಗುರು ಡಾ| ಬರ್ನಾಡ್ ಮೊರೆಸ್ ಅವರನ್ನು ಭೇಟಿ ಮಾಡಲಿದ್ದಾರೆ. ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ನಾಳೆ ಬೆಳಗ್ಗೆ 10ಕ್ಕೆ ಶಂಕರಮಠಕ್ಕೆ ಭೇಟಿ ನೀಡಲಿದ್ದು, ಬಳಿಕ 11ಕ್ಕೆ ಚಾಮರಾಜ ಕ್ಷೇತ್ರದಲ್ಲಿ ಚುನಾವಣ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4ಕ್ಕೆ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಜತೆ ಸಭೆ ನಡೆಸಲಿದ್ದಾರೆ. ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡುವರು. ಎ.3ರಂದು 9.30ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿ ಆಶೀರ್ವಾದ ಪಡೆಯಲಿದ್ದಾರೆ. 10.15ಕ್ಕೆ ಹೆಲಿಕಾಪ್ಟರ್ ಮೂಲಕ ಚಾಮರಾಜನಗರಕ್ಕೆ ತಲುಪಿ, ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮೈಸೂರಿಗೆ ಆಗಮಿಸಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಸಂಜೆ ಬೆಂಗಳೂರಿಗೆ ಮರಳಲಿದ್ದಾರೆ.
Advertisement