ಬೆಂಗಳೂರು ಸ್ಫೋಟದ ಬಳಿಕವೂ ಕಾಂಗ್ರೆಸ್ SDPI ಬೆಂಬಲ ಪಡೆಯುತ್ತಿದೆ: ಅಮಿತ್ ಶಾ ಆರೋಪ

ಬೆಂಗಳೂರು ಸ್ಫೋಟ ಪ್ರಕರಣದ ಬಳಿಕವೂ ಕಾಂಗ್ರೆಸ್ ಪಕ್ಷವು ಇಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಅಂಗ ಸಂಸ್ಥೆಯಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ನ ಬೆಂಬಲ ಪಡೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗಂಭೀರ ಆರೋಪ ಮಾಡಿದ್ದಾರೆ.
ಚನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋ
ಚನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋ

ಚನ್ನಪಟ್ಟಣ: ಬೆಂಗಳೂರು ಸ್ಫೋಟ ಪ್ರಕರಣದ ಬಳಿಕವೂ ಕಾಂಗ್ರೆಸ್ ಪಕ್ಷವು ಇಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಅಂಗ ಸಂಸ್ಥೆಯಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ನ ಬೆಂಬಲ ಪಡೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ (Bangalore Rural Lok Sabha constituency) ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್.‌ ಮಂಜುನಾಥ್ (Dr CN Manjunath) ಪರ ರೋಡ್‌ ಶೋನಲ್ಲಿ ಪಾಲ್ಗೊಂಡಿದ್ದ ಅಮಿತ್ ಶಾ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ತಮ್ಮ ಭಾಷಣದ ವೇಳೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟವನ್ನು ಉಲ್ಲೇಖಿಸಿದ ಅಮಿತ್ ಶಾ, ಬೆಂಗಳೂರು ಸ್ಫೋಟ ಪ್ರಕರಣದ ಬಳಿಕವೂ ಕಾಂಗ್ರೆಸ್ ಪಕ್ಷವು ಇಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಅಂಗ ಸಂಸ್ಥೆಯಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ನ ಬೆಂಬಲ ಪಡೆಯುತ್ತಿದೆ ಎಂದು ಆರೋಪಿಸಿದರು.

ಚನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋ
ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪಗೆ ಹೈಕಮಾಂಡ್‌ ಬುಲಾವ್; ನಾಳೆ ಅಮಿತ್ ಶಾ ಭೇಟಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶದ ಸುರಕ್ಷತೆ

ಇದೇ ವೇಳೆ ಪ್ರಧಾನಿ ಮೋದಿಯಿಂದ ಮಾತ್ರ ದೇಶದ ಸುರಕ್ಷತೆ ಸಾಧ್ಯ ಎಂದು ಹೇಳಿದ ಅಮಿತ್ ಶಾ, 'ಒಂದೆಡೆ ಬೆಂಗಳೂರಿನಲ್ಲಿ ಸ್ಫೋಟಗಳು ನಡೆಯುತ್ತಿದ್ದರೆ ಮತ್ತೊಂದೆಡೆ ಎಸ್‌ಡಿಪಿಐ ಕಾಂಗ್ರೆಸ್‌ಗೆ ಬೆಂಬಲ ನೀಡಿದೆ ಎಂಬ ಮಾಹಿತಿ ಸಿಕ್ಕಿದೆ. ಇದು ನಿಜವಾಗಿದ್ದರೆ, ಕಾಂಗ್ರೆಸ್ ಅಡಿಯಲ್ಲಿ ಕರ್ನಾಟಕದ ಜನರು ಸುರಕ್ಷಿತವಾಗಿರಬಹುದೇ?..ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಗೊಳ್ಳುತ್ತಿವೆ. ಆದರೆ, ಕಾಂಗ್ರೆಸ್‌ ಎಸ್‌ಡಿಪಿಐ ಅನ್ನು ಸಮರ್ಥನೆ ಮಾಡಿಕೊಂಡು ಬರುತ್ತಿದೆ. ಹಾಗಾದರೆ, ಜನ ಎಷ್ಟು ಸುರಕ್ಷಿತವಾಗಿದ್ದಾರೆ ಎಂಬ ಪ್ರಶ್ನೆ ಬರುವುದಿಲ್ಲವೇ? ಆದರೆ, ದೇಶದಲ್ಲಿ ಈಗ ಆಡಳಿತ ನರೇಂದ್ರ ಮೋದಿ ಅವರ ಕೈಯಲ್ಲಿ ಇರುವುದರಿಂದ ಇಡೀ ದೇಶ ಸುರಕ್ಷಿತವಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ನಿಂದ 12 ಲಕ್ಷ ಕೋಟಿ ಭ್ರಷ್ಟಾಚಾರ, ಮೋದಿ ಆರೋಪ ರಹಿತ!

ಇಡೀ ದೇಶವೇ ಪ್ರಧಾನಿ ಜತೆಗಿದ್ದು, ರೋಡ್ ಶೋ ವೇಳೆ ಬಂದ ಜನಸ್ತೋಮ ಅವರ ನಂಬಿಕೆಗೆ ಪುಷ್ಠಿ ನೀಡುತ್ತಿದೆ. ರಾಜಕಾರಣದಲ್ಲಿ ನರೇಂದ್ರ ಮೋದಿಯವರು 23 ವರ್ಷಗಳಿಂದ ಮುಖ್ಯಮಂತ್ರಿ ಹಾಗೂ ಪ್ರಧಾನಿ ಆಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಆಗಿನಿಂದ ಇಲ್ಲಿಯವರೆಗೂ ಅವರ ಮೇಲೆ ಒಂದೇ ಒಂದು ಗುರುತರ ಆಪಾದನೆ ಇಲ್ಲ. ಅದೇ ಇನ್ನೊಂದೆಡೆ ಪ್ರತಿಪಕ್ಷಗಳ ಮೇಲೆ 12‌ ಲಕ್ಷ ಕೋಟಿ ರೂಪಾಯಿಗೂ ಅಧಿಕ ಭ್ರಷ್ಟಾಚಾರದ ಆರೋಪಗಳಿವೆ. ಮೋದಿ 10 ವರ್ಷಗಳಲ್ಲಿ ದೇಶವನ್ನು ಸುಭದ್ರಗೊಳಿಸಿದ್ದಾರೆ. ದೇಶದ ಆರ್ಥಿಕತೆಯನ್ನು 11ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ತಂದರು. ದಯವಿಟ್ಟು ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಿ, ಇದರಿಂದ ಅವರು ಭಾರತವನ್ನು ಮೂರನೇ ಪ್ರಮುಖ ಆರ್ಥಿಕತೆಯನ್ನಾಗಿ ಮಾಡಲಿದ್ದಾರೆ ಎಂದು ಶಾ ಜನರಿಗೆ ಮನವಿ ಮಾಡಿದರು.

ಮಂಜುನಾಥ್ ರಂತಹ ಸೇವಾ ಕೇಂದ್ರಿತ ವೈದ್ಯರು ಇನ್ನೊಬ್ಬರಿಲ್ಲ

ಇದೇ ವೇಳೆ ಬಿಜೆಪಿ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಪರ ಭರ್ಜರಿ ಬ್ಯಾಟಿಂಗ್ ಮಾಡಿದ ಅಮಿತ್ ಶಾ, 'ಪ್ರಧಾನಿಯಂತಹ ಪ್ರಾಮಾಣಿಕ ಪ್ರಧಾನಿ ಮತ್ತು ಡಾ ಮಂಜುನಾಥ್ ಅವರಂತಹ ಸೇವಾ ಕೇಂದ್ರಿತ ವೈದ್ಯರು ಇಲ್ಲ. ಬಿಜೆಪಿ ಮತ್ತು ಅದರ ಮಿತ್ರ ಜೆಡಿಎಸ್ (ಜೆಡಿಎಸ್) ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲು ಜನರಿಗೆ ಸಹಾಯ ಮಾಡಿ ಪಕ್ಷವು ದೇಶಾದ್ಯಂತ 400 ಸೀಟುಗಳಿಂಗತ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಸಾಧಿಸಲು ಸಹಾಯ ಮಾಡುವಂತೆ ಅವರು ಜನರಿಗೆ ಮನವಿ ಮಾಡಿದರು.

ರಥದ ಮಾದರಿಯ ವಾಹನದಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ

ಇನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಭಾಗವಾಗಿರುವ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿರುವ ಅಮಿತ್ ಶಾ, ಒಂದು ರೀತಿಯ ರಥದಲ್ಲಿ ಅಲಂಕರಿಸಲ್ಪಟ್ಟ ನಾಲ್ಕು ಚಕ್ರಗಳ ವಾಹನದ ಮೇಲೆ ರೋಡ್ ಶೋ ನಡೆಸಿದರು. ಅವರ ಪಕ್ಕದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಡಾ.ಮಂಜುನಾಥ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಿಪಿ ಯೋಗೇಶ್ವರ ಇದ್ದರು.

ರೋಡ್ ಶೋ ಆರಂಭವಾದ ಚನ್ನಪಟ್ಟಣ ಪಟ್ಟಣಕ್ಕೆ ಸಾವಿರಾರು ಜನರು ಆಗಮಿಸಿದ್ದರು. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ತಮ್ಮ ಪಕ್ಷಗಳ ಧ್ವಜ, ಭಿತ್ತಿಪತ್ರಗಳು ಮತ್ತು ಫಲಕಗಳನ್ನು ಬೀಸುತ್ತಾ ರೋಡ್ ಶೋ ಉದ್ದಕ್ಕೂ ಸಾಗಿದರು. ಈ ವೇಳೆ ವಿವಿಧ ಸಾಂಸ್ಕೃತಿಕ ತಂಡಗಳು ವಾಹನದ ಮುಂದೆ ಡೊಳ್ಳು ಬಾರಿಸುತ್ತಾ ಕುಣಿದು ಕುಪ್ಪಳಿಸಿದವು. ಅಂತೆಯೇ "ಜೈ ಶ್ರೀ ರಾಮ್" ಮತ್ತು "ಮೋದಿ ಮೋದಿ" ಘೋಷಣೆಗಳು ಪ್ರಯಾಣದುದ್ದಕ್ಕೂ ಪ್ರತಿಧ್ವನಿಸಿತು.

ಚನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋ
12 ಲಕ್ಷ ಕೋಟಿ ರೂ. ಹಗರಣದ ಕಾಂಗ್ರೆಸ್, ಶೂನ್ಯ ಭ್ರಷ್ಟಾಚಾರ ಆರೋಪ ಹೊಂದಿರುವ ಮೋದಿ ಜೊತೆ ಪೈಪೋಟಿ ನಡೆಸುತ್ತಿದೆ: ಅಮಿತ್ ಶಾ ಟೀಕೆ

ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರ

ಇನ್ನು ಹಾಲಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರವಾಗಿದೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಸ್ಪರ್ಧೆ ಮಾಡಿದ್ದರೆ ಅವರ ವಿರುದ್ಧ ಜಯದೇವ ಹೃದ್ರೋಗ ಸಂಸ್ಥೆಯ ಮುಖ್ಯಸ್ಥರಾಗಿದ್ದ ಖ್ಯಾತ ಹೃದ್ರೋಗ ತಜ್ಞ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಅಳಿಯ ಡಾ.ಸಿ.ಎನ್.ಮಂಜುನಾಥ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಹೀಗಾಗಿ ಇಡೀ ಜೆಡಿಎಸ್ ಪಕ್ಷ ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಮಂಜುನಾಥ್ ಅವರ ಪರ ಭರ್ಜರಿ ಪ್ರಚಾರ ಮಾಡುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com