12 ಲಕ್ಷ ಕೋಟಿ ರೂ. ಹಗರಣದ ಕಾಂಗ್ರೆಸ್, ಶೂನ್ಯ ಭ್ರಷ್ಟಾಚಾರ ಆರೋಪ ಹೊಂದಿರುವ ಮೋದಿ ಜೊತೆ ಪೈಪೋಟಿ ನಡೆಸುತ್ತಿದೆ: ಅಮಿತ್ ಶಾ ಟೀಕೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಜೊತೆ ಇಂಡಿಯಾ ಬ್ಲಾಕ್ ನ್ನು ಹೋಲಿಸಲು ಸಾಧ್ಯವೇ ಇಲ್ಲ. ಇಂಡಿಯಾ ಬ್ಲಾಕ್ 'ಪರಿವಾರವಾದಿಗಳು' (ವಂಶ ರಾಜಕೀಯ ಕುಟುಂಬಗಳು) ಮತ್ತು 'ಭ್ರಷ್ಟಾಚಾರಿಗಳ' (ಭ್ರಷ್ಟರು) ಮೈತ್ರಿ ಎಂದು ಕೇಂದ್ರ ಸಚಿವ ಅಮಿತ್ ಶಾ ಬಣ್ಣಿಸಿದ್ದಾರೆ.
ಬೆಂಗಳೂರಿನಲ್ಲಿ 5 ಲೋಕಸಭಾ ಕ್ಷೇತ್ರಗಳ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮ್ಮೇಳನದಲ್ಲಿ ಬಿಜೆಪಿ ನಾಯಕರಿಂದ ಅಮಿತ್ ಶಾ ಅವರಿಗೆ ಸನ್ಮಾನ
ಬೆಂಗಳೂರಿನಲ್ಲಿ 5 ಲೋಕಸಭಾ ಕ್ಷೇತ್ರಗಳ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮ್ಮೇಳನದಲ್ಲಿ ಬಿಜೆಪಿ ನಾಯಕರಿಂದ ಅಮಿತ್ ಶಾ ಅವರಿಗೆ ಸನ್ಮಾನ

ಬೆಂಗಳೂರು: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ '400 ಪಾರ್' (400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ) ಗುರಿಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಪಕ್ಷದ ಹಿರಿಯ ನಾಯಕ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಜೊತೆ ಇಂಡಿಯಾ ಬ್ಲಾಕ್ ನ್ನು ಹೋಲಿಸಲು ಸಾಧ್ಯವೇ ಇಲ್ಲ. ಇಂಡಿಯಾ ಬ್ಲಾಕ್ 'ಪರಿವಾರವಾದಿಗಳು' (ವಂಶ ರಾಜಕೀಯ ಕುಟುಂಬಗಳು) ಮತ್ತು 'ಭ್ರಷ್ಟಾಚಾರಿಗಳ' (ಭ್ರಷ್ಟರು) ಮೈತ್ರಿ ಎಂದು ಬಣ್ಣಿಸಿದ್ದಾರೆ.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಭಾಗಗಳ 'ಶಕ್ತಿ ಕೇಂದ್ರ' (3-5 ಬೂತ್‌ಗಳ ಸಾಮೂಹಿಕ) ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಅಮಿತ್ ಶಾ ಮಾತನಾಡಿದರು.

ಕರ್ನಾಟಕದಲ್ಲಿ ಬಿಜೆಪಿ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅಮಿತ್ ಶಾ, ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಡುವೆ ಯಾವುದೇ ಹೋಲಿಕೆಯಿಲ್ಲ ಎಂದರು. ವಿರೋಧ ಪಕ್ಷದವರು ಅತಿರೇಕದ ಭ್ರಷ್ಟಾಚಾರ ಮತ್ತು ಹಗರಣಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ಎಂದಿಗೂ ರಜೆ ತೆಗೆದುಕೊಳ್ಳದ ಪ್ರಧಾನಿ ನರೇಂದ್ರ ಮೋದಿ ಮತ್ತು ಬೇಸಿಗೆ ಆರಂಭವಾದಂತೆ ವಿದೇಶ ಪ್ರವಾಸ ಮಾಡುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಲ್ಲಿಯ ಹೋಲಿಕೆ ಎಂದು ಟೀಕಿಸಿದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತು ಎನ್‌ಡಿಎ ಒಂದು ಕಡೆ- ನಾವು ಮೋದಿ ನಾಯಕತ್ವದಲ್ಲಿ ಚುನಾವಣಾ ಕಣದಲ್ಲಿದ್ದೇವೆ. ಇನ್ನೊಂದು ಕಡೆ ಕುಟುಂಬ ರಾಜಕೀಯವನ್ನು ನಡೆಸುವ ಭ್ರಷ್ಟಾಚಾರಿಗಳನ್ನು ಒಳಗೊಂಡ ಇಂಡಿಯಾ ಮೈತ್ರಿಕೂಟ ಮತ್ತೊಂದು ಕಡೆಯಾಗಿದೆ ಎಂದರು.

ಬೆಂಗಳೂರಿನಲ್ಲಿ 5 ಲೋಕಸಭಾ ಕ್ಷೇತ್ರಗಳ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮ್ಮೇಳನದಲ್ಲಿ ಬಿಜೆಪಿ ನಾಯಕರಿಂದ ಅಮಿತ್ ಶಾ ಅವರಿಗೆ ಸನ್ಮಾನ
ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪಗೆ ಹೈಕಮಾಂಡ್‌ ಬುಲಾವ್; ನಾಳೆ ಅಮಿತ್ ಶಾ ಭೇಟಿ

ದೇಶಾದ್ಯಂತ ಸುಮಾರು ಶೇಕಡಾ 60ರಷ್ಟು ರಾಜ್ಯಗಳಿಗೆ ನಾನು ಪ್ರವಾಸ ಮಾಡಿದ್ದೇನೆ, ಎಲ್ಲೆಡೆ ಜನರು “ಮೋದಿ, ಮೋದಿ” ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ. ಪ್ರಧಾನಿ ಮೋದಿ ಅವರು ಈ ಬಾರಿ ಎಲ್ಲಾ ಬಿಜೆಪಿ ಕಾರ್ಯಕರ್ತರ ಮುಂದೆ '400-ಪಾರ್' ಗುರಿಯನ್ನು ಇರಿಸಿದ್ದಾರೆ. 2014 ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಜನರು ಶೇಕಡಾ 43ರಷ್ಟು ಮತಗಳನ್ನು ನೀಡಿ 17 ಸ್ಥಾನಗಳನ್ನು ನೀಡಿದರು. 2019 ರಲ್ಲಿ ಶೇಕಡಾ 51ರಷ್ಟು ಮತಗಳನ್ನು ನೀಡಿ ವೋಟುಗಳನ್ನು ನೀಡಿ 25 ಸ್ಥಾನಗಳನ್ನು ನೀಡಿದರು, ಆದರೆ ಈ ಬಾರಿ ಜನರು ಮತ್ತು ಪಕ್ಷದ ಕಾರ್ಯಕರ್ತರಲ್ಲಿ ನನ್ನ ವಿನಂತಿಯು ಶೇಕಡಾ 60ರಷ್ಟು ಮತಗಳನ್ನು ಖಾತರಿಪಡಿಸಿ ಬಿಜೆಪಿ ಮೈತ್ರಿಕೂಟಕ್ಕೆ ಎಲ್ಲಾ 28 ಸ್ಥಾನಗಳನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು.

ಕರ್ನಾಟಕದಲ್ಲಿ ಬಿಜೆಪಿ-ಜೆಡಿ(ಎಸ್) ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸಂಪೂರ್ಣ ವಿಶ್ವಾಸದಿಂದ ಹೇಳಬಲ್ಲೆ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಖಾತೆ ತೆರೆಯಲು ಬಿಡುವುದಿಲ್ಲ ಎಂದು ಹೇಳಿದರು.

ಮೋದಿಯವರದ್ದು ಶೂನ್ಯ ಭ್ರಷ್ಠಾಚಾರ: ಒಂದೆಡೆ ನರೇಂದ್ರ ಮೋದಿಯವರು 23 ವರ್ಷಗಳ ಕಾಲ ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ ಕೆಲಸ ಮಾಡಿದ್ದಾರೆ; 23 ವರ್ಷಗಳಲ್ಲಿ, ಪ್ರತಿಪಕ್ಷಗಳು ಮೋದಿ ವಿರುದ್ಧ 25 ಪೈಸೆ ಭ್ರಷ್ಟಾಚಾರದ ಆರೋಪವನ್ನು ಮಾಡಲು ಸಾಧ್ಯವಾಗಲಿಲ್ಲ" ಎಂದರು.

23 ವರ್ಷಗಳಿಂದ ಪಾರದರ್ಶಕತೆಯೊಂದಿಗೆ ಮೋದಿಯವರು ದೇಶದಲ್ಲೇ ಮಾದರಿಯಾಗಿದ್ದಾರೆ. ಇನ್ನೊಂದೆಡೆ ಭ್ರಷ್ಟಾಚಾರದ ಈ ‘ಘಮಾಂಡಿಯ’ (ಅಹಂಕಾರಿ) ಇಂಡಿಯಾ ಮೈತ್ರಿ ಇದೆ. ಮನಮೋಹನ್ ಸಿಂಗ್ ಮತ್ತು ಸೋನಿಯಾ ಗಾಂಧಿಯವರ 10 ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ 12 ಲಕ್ಷ ಕೋಟಿ ರೂಪಾಯಿಗಳ ಹಗರಣ ಮತ್ತು ಭ್ರಷ್ಟಾಚಾರ ನಡೆದಿದೆ ಎಂದು ಅವರು ಹೇಳಿದರು. ಭ್ರಷ್ಟಾಚಾರದ ವಿಷಯದ ಬಗ್ಗೆ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಸಹ ಈ ಸಂದರ್ಭದಲ್ಲಿ ಅಮಿತ್ ಶಾ ವಾಗ್ದಾಳಿ ನಡೆಸಿ ಕರ್ನಾಟಕದ ಜನರು ಭ್ರಷ್ಟಾಚಾರವನ್ನು ಇಷ್ಟಪಡುವುದಿಲ್ಲ ಎಂದರು.

ಬೆಂಗಳೂರಿನಲ್ಲಿ 5 ಲೋಕಸಭಾ ಕ್ಷೇತ್ರಗಳ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮ್ಮೇಳನದಲ್ಲಿ ಬಿಜೆಪಿ ನಾಯಕರಿಂದ ಅಮಿತ್ ಶಾ ಅವರಿಗೆ ಸನ್ಮಾನ
ಕರ್ನಾಟಕಕ್ಕೆ ಬಂದು ಮತ ಕೇಳಲು ಅಮಿತ್ ಶಾಗೆ ಯಾವ ನೈತಿಕತೆ ಇದೆ: ಸಿಎಂ ಸಿದ್ದರಾಮಯ್ಯ

ಯುಪಿಎ ಆಡಳಿತದಲ್ಲಿ ಮಾಧ್ಯಮಗಳು ವರದಿ ಮಾಡಿದ ವಿವಿಧ ಹಗರಣಗಳಾದ ಕಲ್ಲಿದ್ದಲು ಬ್ಲಾಕ್, ಕಾಮನ್‌ವೆಲ್ತ್, 2ಜಿ, ಐಎನ್‌ಎಕ್ಸ್ ಮೀಡಿಯಾ, ಏರ್‌ಸೆಲ್, ಲ್ಯಾಂಡ್ ಫಾರ್ ಜಾಬ್, ಜಮ್ಮು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್, ಇತ್ಯಾದಿಗಳನ್ನು ಪಟ್ಟಿ ಮಾಡಿದ ಶಾ, ಇದರಲ್ಲಿ ಭಾಗಿಯಾಗಿರುವ ಕಾಂಗ್ರೆಸ್ ಸುಮಾರು 12 ಲಕ್ಷ ಕೋಟಿ ಹಗರಣಗಳನ್ನು ನಡೆಸಿ ಇಂದು ಮೋದಿಯವರ ಜೊತೆ ಪೈಪೋಟಿಗಿಳಿದಿದೆ ಎಂದು ವ್ಯಂಗ್ಯವಾಡಿದರು.

ದೇಶದ ಜನರ ಮುಂದೆ ಸ್ಪಷ್ಟ ಆಯ್ಕೆ ಇದೆ: ಒಂದು ಕಡೆ 23 ವರ್ಷಗಳ ಕಾಲ ಒಂದು ಪೈಸೆಯೂ ಭ್ರಷ್ಟಾಚಾರವಿಲ್ಲದೆ ಆಡಳಿತ ನಡೆಸಿದ ನರೇಂದ್ರ ಮೋದಿಯಿದ್ದರೆ, ಇನ್ನೊಂದು ಕಡೆ 12 ಲಕ್ಷ ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿರುವ ಕಾಂಗ್ರೆಸ್. ಈ ಜನರು ಅಧಿಕಾರ ಸಿಕ್ಕಾಗಲೆಲ್ಲಾ ಭ್ರಷ್ಟಾಚಾರದಲ್ಲಿ ತೊಡಗುವುದು ಮಾತ್ರವಲ್ಲ, ಜನರ ಸೇವೆಯತ್ತ ಮನಸ್ಸು ಕೇಂದ್ರೀಕರಿಸುವುದಿಲ್ಲ ಎಂದು ಆರೋಪಿಸಿದರು.

ಬೆಂಗಳೂರಿನಲ್ಲಿ 5 ಲೋಕಸಭಾ ಕ್ಷೇತ್ರಗಳ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮ್ಮೇಳನದಲ್ಲಿ ಬಿಜೆಪಿ ನಾಯಕರಿಂದ ಅಮಿತ್ ಶಾ ಅವರಿಗೆ ಸನ್ಮಾನ
ಲೋಕಸಭೆ ಚುನಾವಣೆ: ಪ್ರತಿ ಬೂತ್‌ನಲ್ಲಿ ಶೇಕಡಾ 10 ರಷ್ಟು ಹೆಚ್ಚು ಮತ ಗಳಿಕೆ; ಜೆಡಿಎಸ್- ಬಿಜೆಪಿ ಮೈತ್ರಿ ಗುರಿ!

ಮೋದಿಯವರೊಂದಿಗೆ 40 ವರ್ಷಗಳಿಂದ ನಾನು ಕೆಲಸ ಮಾಡುತ್ತಿದ್ದೇನೆ. ಬಹುಶಃ 23 ವರ್ಷಗಳ ಕಾಲ ಸಿಎಂ ಮತ್ತು ಪ್ರಧಾನಿಯಾಗಿದ್ದ ವಿಶ್ವದ ಏಕೈಕ ವ್ಯಕ್ತಿ ಮೋದಿ ಒಂದು ದಿನವೂ ರಜೆ ತೆಗೆದುಕೊಳ್ಳಲಿಲ್ಲ. ಅವರು ಯಾವಾಗಲೂ ಭಾರತಕ್ಕಾಗಿ ಕೆಲಸ ಮಾಡುತ್ತಾರೆ, ಒಂದು ದಿನವೂ ರಜೆ ತೆಗೆದುಕೊಳ್ಳಲಿಲ್ಲ. ಇನ್ನೊಂದೆಡೆ ರಾಹುಲ್ ಗಾಂಧಿಯವರು ಬೇಸಿಗೆ ಬರುತ್ತಿದ್ದಂತೆ ವಿದೇಶಕ್ಕೆ ಹೋಗುತ್ತಾರೆ. ಪ್ರತಿ ಆರು ತಿಂಗಳಿಗೊಮ್ಮೆ ಕಾಂಗ್ರೆಸ್ ಅವರನ್ನು ಹುಡುಕಬೇಕಾಗುತ್ತದೆ. ಇಡೀ ದೇಶ ಒಗ್ಗಟ್ಟಾಗಿ ನರೇಂದ್ರ ಮೋದಿಯವರೊಂದಿಗೆ ನಿಂತಿದೆ ಎಂದು ಅವರು ಪ್ರತಿಪಾದಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಕರ್ನಾಟಕ ಚುನಾವಣಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com