ಪ್ರಜ್ವಲ್ ರೇವಣ್ಣ, ಪ್ರೀತಂ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ರಾಧಾ ಮೋಹನ್ ದಾಸ್ ಅಗರ್ವಾಲ್ ಮುಂದು!

ಹಾಸನ ಬಿಜೆಪಿ ಮಾಜಿ ಶಾಸಕ ಪ್ರೀತಂ ಜೆ ಗೌಡ ವಿರುದ್ಧ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಶನಿವಾರ ದೂರು ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಅವರು ಬಿಜೆಪಿ ಮತ್ತು ಜೆಡಿಎಸ್‌ನ ತುರ್ತು ಸಮನ್ವಯ ಸಭೆ ನಡೆಸಿದರು.
ರಾಧಾ ಮೋಹನ್ ದಾಸ್ ಅಗರ್ವಾಲ್
ರಾಧಾ ಮೋಹನ್ ದಾಸ್ ಅಗರ್ವಾಲ್

ಹಾಸನ: ಹಾಸನ ಬಿಜೆಪಿ ಮಾಜಿ ಶಾಸಕ ಪ್ರೀತಂ ಜೆ ಗೌಡ ವಿರುದ್ಧ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಶನಿವಾರ ದೂರು ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಅವರು ಬಿಜೆಪಿ ಮತ್ತು ಜೆಡಿಎಸ್‌ನ ತುರ್ತು ಸಮನ್ವಯ ಸಭೆ ನಡೆಸಿದರು.

ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ವೇಳೆ ಹಾಗೂ ಇತ್ತೀಚೆಗೆ ಹಾಸನದಲ್ಲಿ ಬಿಜೆಪಿ-ಜೆಡಿಎಸ್ ನಡೆಸಿದ ಜಂಟಿ ಸಮಾವೇಶದಲ್ಲಿ ಪ್ರೀತಂ ಗೈರುಹಾಜರಾದ ಬಗ್ಗೆ ದೇವೇಗೌಡರು ಬಿಜೆಪಿ ಹೈಕಮಾಂಡ್‌ಗೆ ದೂರವಾಣಿ ಮೂಲಕ ದೂರು ನೀಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪ್ರೀತಂ ಅವರ ಗೈರುಹಾಜರಿಯನ್ನು ಸಮರ್ಥಿಸಿಕೊಂಡಿರುವ ಅಗರ್ವಾಲ್, ಪ್ರೀತಂ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯೂ ಆಗಿದ್ದು, ಅವರು ತನ್ನದೇ ಆದ ಹಲವು ಜವಾಬ್ದಾರಿಗಳನ್ನು ಹೊಂದಿದ್ದಾರೆ ಎಂದು ಹೇಳಿದರು.

ರಾಧಾ ಮೋಹನ್ ದಾಸ್ ಅಗರ್ವಾಲ್
'ಕಾಂಗ್ರೆಸ್ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲ': ರಾಧಾ ಮೋಹನ್ ದಾಸ್ ಅಗರ್ವಾಲ್

ಬಿಜೆಪಿ ವರಿಷ್ಠರ ನಿರ್ದೇಶನದ ಮೇರೆಗೆ ಭಾನುವಾರ ಮೈಸೂರಿನಲ್ಲಿ ಅಗರ್ವಾಲ್ ಸಮ್ಮುಖದಲ್ಲಿ ಪ್ರಜ್ವಲ್ ಮತ್ತು ಪ್ರೀತಂ ಭೇಟಿಯಾಗಲಿದ್ದಾರೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ. ಪ್ರಜ್ವಲ್ ಕೋರಿಕೆಯ ಮೇರೆಗೆ ಪ್ರೀತಂ ಜೊತೆಗಿನ ಭಿನ್ನಾಭಿಪ್ರಾಯವನ್ನು ಪರಿಹರಿಸಲು ಅಗರ್ವಾಲ್ ಸಮನ್ವಯ ಸಭೆಯಲ್ಲಿ ನಿರ್ಧರಿಸಿದ್ದಾರೆ. ಸಭೆಯಲ್ಲಿ ಜೆಡಿಎಸ್‌ನ ಕೆಲವು ಸದಸ್ಯರು ಪ್ರೀತಂ ವಿರುದ್ಧ ಮಾಡಿದ ದೂರನ್ನು ಅಗರ್ವಾಲ್ ಒಪ್ಪಲಿಲ್ಲ ಎನ್ನಲಾಗಿದೆ.

ಫೋನ್ ಮೂಲಕವೂ ಪ್ರೀತಂ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲರಾದ ಪ್ರಜ್ವಲ್ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರೀತಂ ಅವರನ್ನು ನಿರ್ಲಕ್ಷ್ಯಿಸಿ ಅವರ ನಿಕಟವರ್ತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಸರಿಯಲ್ಲ. ಬಿಜೆಪಿ ನಾಯಕತ್ವವು ಯಾವುದೇ ಪದಾಧಿಕಾರಿಗಳನ್ನು ಅಥವಾ ನಾಯಕರನ್ನು ಎಂದಿಗೂ ನಿರ್ಲಕ್ಷಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಭವಿಷ್ಯದಲ್ಲಿ ಪ್ರೀತಂ ಪ್ರಚಾರದಲ್ಲಿ ಪಾಲ್ಗೊಳ್ಳುವ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಪ್ರಜ್ವಲ್ ಹೇಳಿದರು.

ರಾಧಾ ಮೋಹನ್ ದಾಸ್ ಅಗರ್ವಾಲ್
ಲೋಕಸಭೆ ಚುನಾವಣೆ ನಂತರ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪತನ: ರಾಧಾ ಮೋಹನ್ ದಾಸ್ ಅಗರ್ವಾಲ್

‘ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಖಾತರಿಗಳು ನಿಲ್ಲುತ್ತವೆ’

ಕಾಂಗ್ರೆಸ್‌ನ 25 ಖಾತ್ರಿಗಳ ಕಿರುಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ವಿರುದ್ಧ ಮಾಡಿದ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡ ಅಗರ್ವಾಲ್, ಸಾರ್ವತ್ರಿಕ ಚುನಾವಣೆಯ ಫಲಿತಾಂಶದ ನಂತರ ರಾಜ್ಯದಲ್ಲಿನ ಎಲ್ಲ ಐದು ಕಾಂಗ್ರೆಸ್ ಭರವಸೆಗಳನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ ಎಂದ ಅವರು, ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರೆಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇದೇ ವೇಳೆ, ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಮುಖಂಡರು ನಡೆಸುತ್ತಿರುವ ಭಿನ್ನಮತೀಯ ಚಟುವಟಿಕೆಗಳನ್ನು ಬದಿಗೊತ್ತಿ, ಪಕ್ಷವು ಅಂತಹ ಸಮಸ್ಯೆಗಳನ್ನು ಪರಿಹರಿಸುತ್ತದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com