ಲೋಕಸಭೆ ಚುನಾವಣೆ: ಅನುಕಂಪದ ಕಾರ್ಡ್ ಮುಂದಿಟ್ಟ ಶ್ರೀರಾಮುಲು; ಸೋಲೊಪ್ಪಿಕೊಂಡಿದ್ದಾರೆ ಎಂದ ಕಾಂಗ್ರೆಸ್

2023ರ ವಿಧಾನಸಭೆ ಚುನಾವಣೆಯಲ್ಲಿನ ಸೋಲನ್ನು ನೆನಪಿಸಿಕೊಂಡು ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಇತ್ತೀಚೆಗೆ ನೀಡಿರುವ ಹೇಳಿಕೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರ ಪರವಾಗಿ ಕೆಲಸ ಮಾಡಲಿದೆಯೇ? ಇದು ಗಣಿ ಜಿಲ್ಲೆ ಬಳ್ಳಾರಿಯ ಬಿಜೆಪಿ ಕಾರ್ಯಕರ್ತರ ಮನದಲ್ಲಿ ಮೂಡಿರುವ ಪ್ರಶ್ನೆಯಾಗಿದೆ.
ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಭಾನುವಾರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮತದಾರರೊಂದಿಗೆ ಸಂವಾದ ನಡೆಸಿದರು.
ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಭಾನುವಾರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮತದಾರರೊಂದಿಗೆ ಸಂವಾದ ನಡೆಸಿದರು.
Updated on

ಬಳ್ಳಾರಿ: 2023ರ ವಿಧಾನಸಭೆ ಚುನಾವಣೆಯಲ್ಲಿನ ಸೋಲನ್ನು ನೆನಪಿಸಿಕೊಂಡು ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಇತ್ತೀಚೆಗೆ ನೀಡಿರುವ ಹೇಳಿಕೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರ ಪರವಾಗಿ ಕೆಲಸ ಮಾಡಲಿದೆಯೇ? ಇದು ಗಣಿ ಜಿಲ್ಲೆ ಬಳ್ಳಾರಿಯ ಬಿಜೆಪಿ ಕಾರ್ಯಕರ್ತರ ಮನದಲ್ಲಿ ಮೂಡಿರುವ ಪ್ರಶ್ನೆಯಾಗಿದೆ.

ಕಳೆದ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಸೋತಂತೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿಯೂ ಸೋತರೆ ಮುಂದಿನ ಐದು ವರ್ಷ ಸುಮ್ಮನೆ ಕುಳಿತುಕೊಳ್ಳಬೇಕಾಗುತ್ತದೆ ಎಂದು ಶ್ರೀರಾಮುಲು ಪ್ರಚಾರದ ವೇಳೆ ಹೇಳಿದ್ದಾರೆ. ಮೇ 7ರಂದು ನಡೆಯಲಿರುವ ಚುನಾವಣೆಯಲ್ಲಿ ಬಳ್ಳಾರಿಯಿಂದ ತಮ್ಮ ಗೆಲುವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ಶ್ರೀರಾಮುಲು ಅವರನ್ನು ಟೀಕಿಸಿದ ಕಾಂಗ್ರೆಸ್ ಅಭ್ಯರ್ಥಿ ಇ ತುಕಾರಾಂ, ಬಿಜೆಪಿ ನಾಯಕರು ಈಗಾಗಲೇ ಸೋಲನ್ನು ಒಪ್ಪಿಕೊಂಡಿದ್ದಾರೆ. 'ನೀವು ಭಾರತದ ರಾಜಕೀಯದ ಇತಿಹಾಸವನ್ನು ಅವಲೋಕಿಸಿದಾಗ, ಅನುಕಂಪ ಪ್ರಮುಖ ಟ್ರಂಪ್ ಕಾರ್ಡ್ ಆಗಿದೆ ಮತ್ತು ಇದು ಲೋಕಸಭಾ ಚುನಾವಣೆಯಲ್ಲೂ ಅಭ್ಯರ್ಥಿಗಳಿಗೆ ಸಹಾಯ ಮಾಡುತ್ತದೆ. ಆದರೆ, ಜೂನ್ 4ರಂದು ಫಲಿತಾಂಶ ಬರುವವರೆಗೆ ಕಾಯಬೇಕು' ಎಂದರು.

ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಭಾನುವಾರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮತದಾರರೊಂದಿಗೆ ಸಂವಾದ ನಡೆಸಿದರು.
ಬಳ್ಳಾರಿಗೆ 'ನೋ ಎಂಟ್ರಿ': ಸ್ನೇಹಿತ ಶ್ರೀರಾಮುಲು ಪರ ಜನಾರ್ಧನ ರೆಡ್ಡಿ ಡಿಜಿಟಲ್ ಪ್ರಚಾರ!

ತುಕಾರಾಂಗೆ ತಿರುಗೇಟು ನೀಡಿದ ಶ್ರೀರಾಮುಲು, 'ನನ್ನ ಭಾವನೆಗಳನ್ನು ನನ್ನ ಬೆಂಬಲಿಗರಿಗೆ ತಿಳಿಸುವುದು ನನ್ನ ಹಕ್ಕು. ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ನಡೆದಿದ್ದನ್ನು ಪ್ರಚಾರದ ವೇಳೆ ಹಂಚಿಕೊಂಡಿದ್ದೇನೆ. ನಾನು ಕೇವಲ ಸತ್ಯವನ್ನು ಹೇಳಿದ್ದೇನೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೋತರೆ, ಅವರು ಶಾಸಕರಾಗಿಯೇ ಮುಂದುವರಿಯುತ್ತಾರೆ. ಇದಲ್ಲದೆ ನಾನು ಸಚಿವನಾಗಿದ್ದ ಅವಧಿಯಲ್ಲಿ ಜಾರಿಗೊಳಿಸಿದ ಅಭಿವೃದ್ಧಿ ಕಾರ್ಯಗಳನ್ನೂ ಸ್ಮರಿಸಿಕೊಂಡೆ. ಕ್ಷೇತ್ರದ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರು ಕೈಗೊಂಡಿರುವ ಕೆಲಸಗಳನ್ನು ನಾನು ಎತ್ತಿ ತೋರಿಸಿದ್ದೇನೆ' ಎಂದಿದ್ದಾರೆ.

ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಭಾನುವಾರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮತದಾರರೊಂದಿಗೆ ಸಂವಾದ ನಡೆಸಿದರು.
ಬಳ್ಳಾರಿ: ಏಪ್ರಿಲ್ 12ರಂದು ಶ್ರೀರಾಮುಲು ನಾಮಪತ್ರ ಸಲ್ಲಿಕೆ

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ಬಿ ನಾಗೇಂದ್ರ ಮಾತನಾಡಿ, ಶ್ರೀರಾಮುಲು ಅವರು ಮನೆಯಲ್ಲಿ ಕುಳಿತುಕೊಳ್ಳಲು ಬಯಸುವುದಿಲ್ಲ ಎಂದು ಹೇಳುವ ಮೂಲಕ ಈಗಾಗಲೇ ಸೋಲನ್ನು ಒಪ್ಪಿಕೊಂಡಿದ್ದಾರೆ. ಅನುಕಂಪ ಎಂದಿಗೂ ಕೆಲಸ ಮಾಡುವುದಿಲ್ಲ. ಅಭಿವೃದ್ಧಿ ಕಾರ್ಯಗಳು ಮಾತ್ರ ಮತದಾರರಿಗೆ ಮುಖ್ಯ. ಇ ತುಕಾರಾಂ ಅವರು ತಮ್ಮ ಸರಳತೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹೆಸರುವಾಸಿಯಾಗಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com