ಲೋಕಸಭೆ ಚುನಾವಣೆ: ಏಪ್ರಿಲ್ 14 ರಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ರ‍್ಯಾಲಿ

ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 14 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಬಂಗ್ರಕುಲೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 14 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಬಂಗ್ರಕುಲೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ. ಇಲ್ಲಿಂದ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ತೆರಳಿ ಅಲ್ಲಿ ಸಂಜೆ 5.30ಕ್ಕೆ ರೋಡ್ ಶೋ ನಡೆಸಲಿದ್ದಾರೆ.

ಮಂಗಳೂರಿನಲ್ಲಿ ಪ್ರಧಾನಿ ಮೋದಿ ರ್ಯಾಲಿಗೆ 1 ಲಕ್ಷಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆಯಿದೆ. ಜನ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಯಶಸ್ವಿಗೊಳಿಸುವಂತೆ ಕೋರುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ ಸುನೀಲ್ ಕುಮಾರ್ ಹೇಳಿದ್ದಾರೆ.

ನಮ್ಮ ಮನೆ ಬಾಗಿಲಿಗೆ ಅಭಿಯಾನದಲ್ಲಿ ನಾವು ಮೂರು ಪರಿಕಲ್ಪನೆಗಳನ್ನು ಜನರಿಗೆ ತಲುಪಿಸುತ್ತೇವೆ - 'ಸುರಕ್ಷಿತ್, ಸಾಂಸ್ಕೃತಿಕ ಮತ್ತು ವಿಕ್ಷಿತ್ ಭಾರತ್'. ಶೌಚಾಲಯ ನಿರ್ಮಿಸುವುದರಿಂದ ಹಿಡಿದು ವಿಮಾನ ನಿಲ್ದಾಣಗಳು, ಎಲ್‌ಪಿಜಿ ಸಿಲಿಂಡರ್‌ಗಳಿಂದ ಚಂದ್ರಯಾನದವರೆಗೆ, ಮೋದಿ ಸರ್ಕಾರ ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದೆ ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ
ಏಪ್ರಿಲ್ 14 ರಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ

'ದಕ್ಷಿಣ ಕನ್ನಡದಲ್ಲಿ ಕಠಿಣ ಹೋರಾಟ' ಇದೆಯೇ? ಮಂಗಳೂರಿನಲ್ಲಿ ಮೋದಿ ರ್ಯಾಲಿ ಅಗತ್ಯವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸುನೀಲ್ ಕುಮಾರ್, "ಇದು ಗೆಲುವು ಅಥವಾ ಸೋಲಿನ ವಿಷಯವಲ್ಲ. ಹಿರಿಯ ನಾಯಕರು ಪ್ರಚಾರ ಕಾರ್ಯಕ್ಕೆ ಬರುತ್ತಾರೆ" ಎಂದು ಅವರು ಹೇಳಿದರು.

ಉತ್ತರ ಕನ್ನಡ ಸಂಸದ ಅನಂತ್‌ಕುಮಾರ್ ಹೆಗಡೆ ಅವರು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಪ್ರಚಾರಕ್ಕೆ ಬಾರದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುನೀಲ್‌ಕುಮಾರ್, ಆಂತರಿಕ ಸಮಸ್ಯೆ ಹಾಗೂ ಭಿನ್ನಾಭಿಪ್ರಾಯಗಳನ್ನು ಬಿಜೆಪಿಯೇ ಬಗೆಹರಿಸಿಕೊಳ್ಳಲಿದೆ ಎಂದರು.

ಇದೇ ವೇಳೆ, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಹೆಚ್ಚುತ್ತಿರುವ ನಕ್ಸಲ್ ಚಟುವಟಿಕೆಗಳಿಗೆ ರಾಜ್ಯ ಸರ್ಕಾರದ ಮೃದು ಧೋರಣೆಯೇ ಕಾರಣ ಎಂದು ಸುನೀಲ್ ಕುಮಾರ್ ಆರೋಪಿಸಿದರು.

ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಇಂತಹ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಟ್ಟುನಿಟ್ಟಾಗಿ ನಡೆದುಕೊಂಡಿದ್ದೆವು. ಇದು ಜನರ ಸುರಕ್ಷತೆಯ ವಿಚಾರವಾಗಿದ್ದು, ನಕ್ಸಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸುತ್ತೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com