ಕರಾವಳಿ ಕರ್ನಾಟಕದಿಂದ ಬದಲಾವಣೆಯ ಅಲೆ ಆರಂಭವಾಗಲಿದೆ: ದಿನೇಶ್ ಗುಂಡೂರಾವ್

ರಾಜ್ಯ ರಾಜಕೀಯ ಬದಲಾವಣೆಯ ಅಲೆ ಕರಾವಳಿಯಿಂದಲೇ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಹೇಳಿದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ರಾಜ್ಯ ರಾಜಕೀಯ ಬದಲಾವಣೆಯ ಅಲೆ ಕರಾವಳಿಯಿಂದಲೇ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಹೇಳಿದರು.

ಜಿಲ್ಲಾಸ್ಪತ್ರೆ ವತಿಯಿಂದ ಆಯೋಜಿಸಿದ್ದ ಗಟ್ಟಿ, ಕುಲಾಲ, ವಿಶ್ವಕರ್ಮ, ಮೊಗವೀರ, ದೇವಾಡಿಗ, ಕ್ರೈಸ್ತ, ಬ್ರಾಹ್ಮಣ, ಬಲಯ್ಯ, ಜಿಎಸ್‌ಬಿ, ಎಸ್‌ಸಿ, ಎಸ್‌ಟಿ, ಜೋಗಿ, ರಾಮ ಕ್ಷತ್ರಿಯ, ಗಾಣಿಗ, ಸವಿತಾ, ಮಡಿವಾಳ ಸೇರಿದಂತೆ ನಾನಾ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.

ನಮ್ಮ ಸರ್ಕಾರವು ಎಲ್ಲಾ ಸಮುದಾಯಗಳ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ, ಕರಾವಳಿಯಲ್ಲಿ ಬದಲಾವಣೆಯ ಅಲೆ ಇದ್ದು, ಜನರಲ್ಲಿ ನಮ್ಮ ಮೇಲಿದ್ದ ವಿಶ್ವಾಸವನ್ನು ಹೆಚ್ಚಾಗಿದೆ. ಎಲ್ಲರಿಗೂ ನ್ಯಾಯ ಸಿಗುವಂತೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದ ಎಸ್ ಟಿ ಸೋಮಶೇಖರ್ ಗೆ ಬಿಜೆಪಿ ನೋಟಿಸ್

ಇದೇ ವೇಳೆ ಮತದಾನದ ಹಕ್ಕನ್ನು ಚಲಾಯಿಸುವ ಮಹತ್ವವನ್ನು ಒತ್ತಿ ಹೇಳಿದ ಸಚಿವ, ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು.

ಬಳಿತ ಲೋಕಸಭೆ ಚುನಾವಣೆಗೆ ಹಿಂದುಳಿದ ವರ್ಗಗಳ ಪ್ರತಿನಿಧಿಗೆ ಟಿಕೆಟ್ ನೀಡಲು ಪಕ್ಷದ ನಿರ್ಧಾರಕ್ಕೆ ಕೃತಜ್ಞತೆ ಸಲ್ಲಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಮಾತನಾಡಿ, ಜನರ ಆಶೋತ್ತರಗಳನ್ನು ನಿರಾಸೆಗೊಳಿಸದೆ ಶ್ರದ್ಧೆಯಿಂದ ಪ್ರತಿನಿಧಿಸುತ್ತೇನೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದ ಪರ ನಿಂತಿದೆ, ಈ ಬಾರಿಯ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದೇ ಆದರೆ, ಹಿಂದುಳಿದ ವರ್ಗಗಳ ಹಿತಾಸಕ್ತಿಗಳ ಪರವಾಗಿ ಪ್ರಬಲವಾಗಿ ನಿಲ್ಲುತ್ತೇನೆಂದು ಹೇಳಿದರು.

ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಮೂರು ತಿಂಗಳಿಗೊಮ್ಮೆ ಅಧಿಕಾರಿಗಳ ಜತೆ ಇದೇ ರೀತಿಯ ಸಭೆ ನಡೆಸಲಿದೆ, ಸದೃಢ ಮಂಗಳೂರು ನಿರ್ಮಾಣಕ್ಕಾಗಿ ಶ್ರಮಿಸುತ್ತೇನೆಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com