ಬಿಜೆಪಿಯಿಂದ 'ಈ ಭಾನುವಾರ ಮೋದಿಗಾಗಿ' ಕಾರ್ಯಕ್ರಮ: ಏಪ್ರಿಲ್ 14ರಂದು ಮೈಸೂರು, ಮಂಗಳೂರಿನಲ್ಲಿ ಪ್ರಧಾನಿ ಪ್ರಚಾರ!

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈ ಹೊತ್ತಿನಲ್ಲಿ ರಾಜ್ಯದಲ್ಲಿ ಪಕ್ಷಗಳಿಂದ ಪ್ರಚಾರ ಜೋರಾಗಿದೆ. ಇದೇ ಭಾನುವಾರ ಏಪ್ರಿಲ್ 14ರಂದು ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬಂದು ಮತ್ತೊಂದು ಸುತ್ತಿನ ಪ್ರಚಾರ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈ ಹೊತ್ತಿನಲ್ಲಿ ರಾಜ್ಯದಲ್ಲಿ ಪಕ್ಷಗಳಿಂದ ಪ್ರಚಾರ ಜೋರಾಗಿದೆ. ಇದೇ ಭಾನುವಾರ ಏಪ್ರಿಲ್ 14ರಂದು ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬಂದು ಮತ್ತೊಂದು ಸುತ್ತಿನ ಪ್ರಚಾರ ನಡೆಸಲಿದ್ದಾರೆ.

ಕರ್ನಾಟಕ ಬಿಜೆಪಿ ತನ್ನ ರಾಜಕೀಯ ಪ್ರಚಾರದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಗಳು ಮತ್ತು ಅನುಯಾಯಿಗಳಾದ ಸಾಮಾನ್ಯ ಜನರಿಗೆ ‘ನಾನು ಮೋದಿ ಪರಿವಾರ, ಮೋದಿಗಾಗಿ ಒಂದು ಭಾನುವಾರ’ (ಮೋದಿಗಾಗಿ ಭಾನುವಾರ) ಅಭಿಯಾನದಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತಿದೆ. ಈ ನಿಟ್ಟಿನಲ್ಲಿ ಪ್ರಚಾರ ಕಾರ್ಯ ತೀವ್ರಗೊಳಿಸಿದೆ.

ಈ ಭಾನುವಾರ ಮೋದಿಗಾಗಿ ಕಾರ್ಯಕ್ರಮ: ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ ಸುನೀಲ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ನಿವೃತ್ತ ಅಧಿಕಾರಿಗಳು, ವಿದ್ಯಾರ್ಥಿಗಳು, ಐಟಿ ವೃತ್ತಿಪರರು,ವ್ಯಾಪಾರಿಗಳು ಮತ್ತು ಇತರರು ತಮ್ಮ ಬೆಳಗಿನ ನಡಿಗೆಯಲ್ಲಿ ಅಥವಾ ಅವರ ಅಪಾರ್ಟ್ಮೆಂಟ್ ಸಂಕೀರ್ಣಗಳಲ್ಲಿ ಅಥವಾ ಅವರವರ ಪ್ರದೇಶಗಳಲ್ಲಿ ಪ್ರಚಾರ ಮಾಡುತ್ತಾರೆ. "ಇದು ಸಾಮಾನ್ಯ ಜನರನ್ನು ಒಳಗೊಳ್ಳುವ ಮತ್ತು ಸಾಮಾನ್ಯ ಜನರನ್ನು ತಲುಪುವ ಪರಿಕಲ್ಪನೆಯಾಗಿದೆ" ಎಂದು ಹೇಳಿದರು.

ಪಕ್ಷವು ಏಪ್ರಿಲ್ 21 ಮತ್ತು 28 ರಂದು ಈ ಅಭಿಯಾನವನ್ನು ನಡೆಸಲಿದೆ. ಮೋದಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರ್ಯಾಲಿಗಳು ಅಥವಾ ಇತರ ಕಾರ್ಯಕ್ರಮಗಳಿಗೆ ಇತರ ದಿನಗಳಲ್ಲಿ ಬರುವುದಿಲ್ಲ, ಆದರೆ ಭಾನುವಾರದಂದು ಭಾಗವಹಿಸಲು ಉತ್ಸುಕವಾಗಿದ್ದಾರೆ. ಮನೆ ಮನೆಗಳಿಗೆ ಭೇಟಿ ನೀಡುತ್ತಾರೆ, ಹೋಟೆಲ್‌ಗಳು ಅಥವಾ ಇತರ ಸ್ಥಳಗಳಲ್ಲಿ ಜನರನ್ನು ಭೇಟಿ ಮಾಡುತ್ತಾರೆ. ಅವರ ಬೆಳಗಿನ ನಡಿಗೆಯಲ್ಲಿ ಜನರೊಂದಿಗೆ, ನೆರೆಹೊರೆಯವರೊಂದಿಗೆ ಮಾತನಾಡುತ್ತಾ ಅವರನ್ನು ತಲುಪಲು ಪ್ರಯತ್ನಿಸುತ್ತಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ
ಏಪ್ರಿಲ್ 14ಕ್ಕೆ ಪ್ರಧಾನಿ ಮಂಗಳೂರಿಗೆ ಆಗಮನ: ಮೋದಿ ರ‍್ಯಾಲಿ ರದ್ದು, ರೋಡ್ ಶೋದಲ್ಲಿ ಮಾತ್ರ ಭಾಗಿ

ಪ್ರತಿ ಬೂತ್ ಮಟ್ಟದಲ್ಲಿ ಎರಡರಂತೆ ಸಣ್ಣ ಸಭೆಗಳನ್ನು ನಡೆಸುವಂತೆ ಬಿಜೆಪಿ ಕಾರ್ಯಕರ್ತರಿಗೆ ತಿಳಿಸಲಾಗಿದೆ. 58,000 ಬೂತ್‌ಗಳಿವೆ. ಪ್ರತಿ ಸಭೆಯು 25 ರಿಂದ 50 ಜನರ ಸಣ್ಣ ಗುಂಪನ್ನು ಒಳಗೊಂಡಿರುತ್ತದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 500 ಸಭೆಗಳನ್ನು ನಡೆಸುವ ಮೂಲಕ ಹೆಚ್ಚು ಜನರನ್ನು ತಲುಪುತ್ತೇವೆ ಎಂದು ಸುನಿಲ್ ಕುಮಾರ್ ಹೇಳಿದರು.

ರಾಜ್ಯ ಸರ್ಕಾರ ಮಹಿಳೆಯರಿಗೆ 2,000 ರೂಪಾಯಿಗಳನ್ನು ನೀಡಿದೆ ಆದರೆ ಹಾಲಿನ ದರವನ್ನು ಹೆಚ್ಚಿಸುವ ಮೂಲಕ ಮತ್ತು ಅನೇಕ ಸಬ್ಸಿಡಿಗಳನ್ನು ಸ್ಥಗಿತಗೊಳಿಸುವ ಮೂಲಕ ಪ್ರತಿ ಕುಟುಂಬಕ್ಕೆ 4,500 ರೂಪಾಯಿ ಹೆಚ್ಚಿನ ಹೊರೆಯನ್ನು ಹೇಗೆ ಹಾಕಿದೆ ಎಂಬುದನ್ನು ವಿವರಿಸಲು ಪಕ್ಷದ ಕಾರ್ಯಕರ್ತರು ಮತದಾರರ ಮನೆಗೆ ಭೇಟಿ ನೀಡಲಿದ್ದಾರೆ. ಇದನ್ನು ಏಪ್ರಿಲ್ 17 ರೊಳಗೆ ಪೂರ್ಣಗೊಳಿಸಲು ತಿಳಿಸಲಾಗಿದೆ ಎಂದರು.

ಏಪ್ರಿಲ್ 14 ರಂದು ಮೈಸೂರಿನ ರ್ಯಾಲಿಯಲ್ಲಿ ವೇದಿಕೆ ಹಂಚಿಕೊಳ್ಳಲಿರುವ ಪ್ರಧಾನಿ ಮೋದಿ, ದೇವೇಗೌಡ: ಮೈಸೂರಿನಲ್ಲಿ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ವೇದಿಕೆ ಹಂಚಿಕೊಳ್ಳುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಮತ್ತು ಹಾಸನ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಗೆಲುವಿಗೆ ಕಾಂಗ್ರೆಸ್ ಜೊತೆ ಪೈಪೋಟಿ ನೀಡುತ್ತಿದೆ.

ಮಂಗಳೂರಿನಲ್ಲಿ ರೋಡ್ ಶೋ: ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ ಸುನೀಲ್ ಕುಮಾರ್, 14ರಂದು ಸಂಜೆ 4 ಗಂಟೆಗೆ ಸಾರ್ವಜನಿಕರೊಂದಿಗೆ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ
ಅಂದಿನ ಸಂದರ್ಭಗಳು ನನ್ನನ್ನು ಅಲ್ಪಕಾಲ ಬಿಜೆಪಿ ತ್ಯಜಿಸುವಂತೆ ಮಾಡಿತ್ತು, ಆ ಬಗ್ಗೆ ವಿಷಾದ ಇಲ್ಲ: ಜಗದೀಶ್ ಶೆಟ್ಟರ್

ಮೈಸೂರಿನಲ್ಲಿ ದೇವೇಗೌಡರ ಉಪಸ್ಥಿತಿಯಿಂದ ಹಳೇ ಮೈಸೂರು ಭಾಗದಲ್ಲಿ ತಮ್ಮ ಪಕ್ಷಕ್ಕೆ ಬಲ ಬರಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಇಲ್ಲಿ ಜೆಡಿಎಸ್ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ.

ರ್ಯಾಲಿ ಮತ್ತು ರೋಡ್‌ಶೋನಲ್ಲಿ ಭಾಗವಹಿಸುವ ಜನರಿಗೆ ಪಕ್ಷದ ಚಿಹ್ನೆಯಾದ ಕಮಲದ ಆಕಾರದಲ್ಲಿ ಮೆಹೆಂದಿಯನ್ನು ತಮ್ಮ ಅಂಗೈಗೆ ಹಾಕಿಕೊಳ್ಳುವಂತೆ ಬಿಜೆಪಿ ಮನವಿ ಮಾಡಿದೆ ಎಂದು ಹೇಳಿದರು.

ಮೋದಿ ಏಪ್ರಿಲ್ 14 ರಂದು ಮಂಗಳೂರಿನಲ್ಲಿ ರೋಡ್ ಶೋ: ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಹಂಪನಕಟ್ಟೆ ವರೆಗೆ ಸುಮಾರು 2 ಕಿ.ಮೀ ವರೆಗೆ ಪ್ರಧಾನಿ ರೋಡ್ ಶೋ ನಡೆಸಲಿದ್ದಾರೆ ಎಂದು ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಇದು ಬಲ್ಲಾಳ್‌ಬಾಗ್, ಪಿವಿಎಸ್ ಜಂಕ್ಷನ್ ಮತ್ತು ನವಭಾರತ ವೃತ್ತದ ಮೂಲಕ ಹಾದುಹೋಗುತ್ತದೆ. ರೋಡ್ ಶೋ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲು ಪಕ್ಷವು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಿದೆ. ಮಂಗಳೂರು ನಗರ ದಕ್ಷಿಣ, ಮಂಗಳೂರು ನಗರ ಉತ್ತರ, ಮಂಗಳೂರು, ಮೂಡುಬಿದಿರೆಯಿಂದ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com