ಬೆಳಗಾವಿ; ಬೃಹತ್ ರೋಡ್ ಶೋ ಮೂಲಕ ಶೆಟ್ಟರ್ ಶಕ್ತಿ ಪ್ರದರ್ಶನ; ಬಿಎಸ್‌ವೈ, ಪ್ರಮೋದ್ ಸಾವಂತ್‌ ಸಾಥ್

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಬುಧವಾರ ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಿದರು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಸಂಸದೆ ಮಂಗಳಾ ಅಂಗಡಿ, ಮಾಜಿ ಸಚಿವ ಮುರುಗೇಶ್ ನಿರಾಣಿ ಶೆಟ್ಟರ್ ಅವರಿಗೆ ಸಾಥ್ ನೀಡಿದರು.
ಬೆಳಗಾವಿಯಲ್ಲಿ ಬುಧವಾರ ನಡೆದ ರೋಡ್‌ ಶೋನಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್, ಬಿಎಸ್ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ, ಹಾಲಿ ಸಂಸದೆ ಮಂಗಳಾ ಅಂಗಡಿ, ಶಾಸಕ ಅಭಯ ಪಾಟೀಲ ಇದ್ದರು.
ಬೆಳಗಾವಿಯಲ್ಲಿ ಬುಧವಾರ ನಡೆದ ರೋಡ್‌ ಶೋನಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್, ಬಿಎಸ್ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ, ಹಾಲಿ ಸಂಸದೆ ಮಂಗಳಾ ಅಂಗಡಿ, ಶಾಸಕ ಅಭಯ ಪಾಟೀಲ ಇದ್ದರು.
Updated on

ಬೆಳಗಾವಿ: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಬುಧವಾರ ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಿದರು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಸಂಸದೆ ಮಂಗಳಾ ಅಂಗಡಿ, ಮಾಜಿ ಸಚಿವ ಮುರುಗೇಶ್ ನಿರಾಣಿ ಶೆಟ್ಟರ್ ಅವರಿಗೆ ಸಾಥ್ ನೀಡಿದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ, ಬಾಲಚಂದ್ರ ಜಾರಕಿಹೊಳಿ, ದುರ್ಯೋಧನ ಐಹೊಳೆ, ಎಂಎಲ್‌ಸಿ ಹನುಮಂತ ನಿರಾಣಿ, ಮಾಜಿ ಶಾಸಕರಾದ ಅನಿಲ ಬೆನಕೆ, ಪ್ರಭಾಕರ ಕೋರೆ ಸೇರಿದಂತೆ ಪಕ್ಷದ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಸಮಾದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ನಗರದ ಸಮಾದೇವಿ ಗಲ್ಲಿಯಿಂದ ಹೊರಟ ಮೆರವಣಿಗೆ ಖಡೇ ಬಜಾರ್ ರಸ್ತೆ, ಗಣಪತ್ ಗಲ್ಲಿ, ಶನಿವಾರ ಖೂತ್, ಕಾಕತೀವ್ಸ್, ರಾಣಿ ಚನ್ನಮ್ಮ ವೃತ್ತದ ಮೂಲಕ ಸಾಗಿತು.

ಬೆಳಗಾವಿಯಲ್ಲಿ ಬುಧವಾರ ನಡೆದ ರೋಡ್‌ ಶೋನಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್, ಬಿಎಸ್ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ, ಹಾಲಿ ಸಂಸದೆ ಮಂಗಳಾ ಅಂಗಡಿ, ಶಾಸಕ ಅಭಯ ಪಾಟೀಲ ಇದ್ದರು.
ಅಂದಿನ ಸಂದರ್ಭಗಳು ನನ್ನನ್ನು ಅಲ್ಪಕಾಲ ಬಿಜೆಪಿ ತ್ಯಜಿಸುವಂತೆ ಮಾಡಿತ್ತು, ಆ ಬಗ್ಗೆ ವಿಷಾದ ಇಲ್ಲ: ಜಗದೀಶ್ ಶೆಟ್ಟರ್

ಪ್ರಧಾನಿ ನರೇಂದ್ರ ಮೋದಿ, ಛತ್ರಪತಿ ಶಿವಾಜಿ, ರಾಣಿ ಚನ್ನಮ್ಮ, ಶೆಟ್ಟರ್ ಪರ ಘೋಷಣೆಗಳನ್ನು ಕೂಗುತ್ತಾ ವಾದ್ಯಗೋಷ್ಠಿ, ಪಟಾಕಿ ಸಿಡಿಸುವ ಮೂಲಕ ರಾಣಿ ಚನ್ನಮ್ಮ ವೃತ್ತದಲ್ಲಿ ಮುಖಂಡರಿಗೆ ಭವ್ಯ ಸ್ವಾಗತ ಕೋರಲಾಯಿತು.

ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ಶೆಟ್ಟರ್ ಎರಡು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರ‍್ಯಾಲಿಯಲ್ಲಿ ಜನಸಾಗರವೇ ಹರಿದು ಬರುತ್ತಿರುವುದು ಶೆಟ್ಟರ್ ಗೆಲುವು ನಿಶ್ಚಿತ ಎಂಬುದನ್ನು ಸೂಚಿಸುತ್ತದೆ ಎಂದರು.

ಬೆಳಗಾವಿಯಲ್ಲಿ ಬುಧವಾರ ನಡೆದ ರೋಡ್‌ ಶೋನಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್, ಬಿಎಸ್ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ, ಹಾಲಿ ಸಂಸದೆ ಮಂಗಳಾ ಅಂಗಡಿ, ಶಾಸಕ ಅಭಯ ಪಾಟೀಲ ಇದ್ದರು.
ಲೋಕಸಭಾ ಚುನಾವಣೆ ಬಳಿಕ ಸಿದ್ದು ಸರ್ಕಾರ ಪತನ: ಜಗದೀಶ್ ಶೆಟ್ಟರ್ ಭವಿಷ್ಯ

‘ಅಬ್ ಕಿ ಬಾರ್ ಚೌರ್ ಸೌ ಪಾರ್’ ಎಂಬ ಪಕ್ಷದ ಕರೆಯನ್ನು ಅರಿತುಕೊಳ್ಳಲು ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಭಾರಿ ಅಂತರದಿಂದ ಆಯ್ಕೆ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬರಲಿದೆ. ಕರ್ನಾಟಕದಲ್ಲೂ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಸಾವಂತ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com