ಧಾರವಾಡ: ದಿಂಗಾಲೇಶ್ವರ ಸ್ವಾಮೀಜಿ ಯೂಟರ್ನ್‌; ನಾಮಪತ್ರ ವಾಪಸ್; ಜೋಶಿಗೆ ಬಿಗ್ ರಿಲೀಫ್

ಪ್ರಲ್ಹಾದ್‌ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್‌ ಪಡೆದಿದ್ದಾರೆ.
ದಿಂಗಾಲೇಶ್ವರ ಸ್ವಾಮೀಜಿ
ದಿಂಗಾಲೇಶ್ವರ ಸ್ವಾಮೀಜಿTNIE

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಹಾದ್‌ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್‌ ಪಡೆದಿದ್ದಾರೆ.

ಕೇಂದ್ರ ಸಚಿವ, ಹಾಲಿ ಸಂಸದ ಪ್ರಹ್ಲಾದ್‌ ಜೋಶಿ ವಿರುದ್ಧ ತೊಡೆತಟ್ಟಿದ್ದ ದಿಂಗಾಲೇಶ್ವರ ಸ್ವಾಮೀಜಿ ಈಗ ಚುನಾವಣಾ ಕಣದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದ ಪ್ರಹ್ಲಾದ್‌ ಜೋಶಿಗೆ ರಿಲೀಫ್‌ ಸಿಕ್ಕಂತಾಗಿದೆ.

ಕೇಂದ್ರ ಸಚಿವ, ಹಾಲಿ ಸಂಸದ ಪ್ರಲ್ಹಾದ್‌ ಜೋಶಿ ಅವರನ್ನು ಗುರಿಯಾಗಿಸಿಕೊಂಡು, ಲಿಂಗಾಯತ ಸಮುದಾಯಕ್ಕೆ ಜೋಶಿ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿ, ನಾಮಪತ್ರ ಸಲ್ಲಿಸಿದ್ದರು. ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ನುಡಿದಿದ್ದ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಹಠವನ್ನು ಬದಲಿಸಿದ್ದಾರೆ. ಪ್ರಹ್ಲಾದ್‌ ಜೋಶಿ ಹಾಗೂ ವಿನೋದ್‌ ಅಸೂಟಿ ನಡುವೆ ನೇರ ಹಣಾಹಣಿ ನಡೆಯಲಿದೆ.

ದಿಂಗಾಲೇಶ್ವರ ಸ್ವಾಮೀಜಿ
ಪ್ರಹ್ಲಾದ್ ಜೋಶಿ ವಿರುದ್ಧ ನಾಮಪತ್ರ ಸಲ್ಲಿಸಿರುವ ದಿಂಗಾಲೇಶ್ವರ ಸ್ವಾಮೀಜಿ ಕೋಟ್ಯಾಧಿಪತಿ!

ಈ ಸಂಬಂಧ ಧಾರವಾಡದ ಗೋಕುಲ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಭಕ್ತರ ಸಭೆ ಕರೆದಿದ್ದು, ಅವರ ಜೊತೆ ಸಭೆ ನಡೆಸಿ ತಮ್ಮ ಅಂತಿಮ ನಿರ್ಧಾರ ಪ್ರಕಟಿಸಿದ್ದಾರೆ. ಅದಾದ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ವಾಪಸ

ಶಿರಹಟ್ಟಿ ಫಕೀರೇಶ್ವರ ಮಠದ ಹಿರಿಯ ಪೀಠಾಧಿಪತಿ ಶಿವಯೋಗಿ ಸಿದ್ಧರಾಮ ಮಹಾಸ್ವಾಮಿಗಳು ದಿಂಗಾಲೇಶ್ವರ ಸ್ವಾಮೀಜಿಗೆ ಚುನಾವಣಾ ಕಣದಿಂದ ಹಿಂದೆ ಸರಿಯಿರಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com