ಚಿಕ್ಕಬಳ್ಳಾಪುರದಲ್ಲಿ 4.8 ಕೋಟಿ ರೂ. ಹಣ ವಶ: ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ವಿರುದ್ಧ ಪ್ರಕರಣ ದಾಖಲು

ಆಪ್ತನ ಮನೆಯಲ್ಲಿ 4.8 ಕೋಟಿ ರೂಪಾಯಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.
ಡಾ. ಕೆ. ಸುಧಾಕರ್
ಡಾ. ಕೆ. ಸುಧಾಕರ್
Updated on

ಬೆಂಗಳೂರು: ಆಪ್ತನ ಮನೆಯಲ್ಲಿ 4.8 ಕೋಟಿ ರೂಪಾಯಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.

ಡಾ. ಕೆ. ಸುಧಾಕರ್
BJP ಅಭ್ಯರ್ಥಿ ಡಾ. ಕೆ.ಸುಧಾಕರ್ ಆಪ್ತನ ಮನೆ ಮೇಲೆ ಐಟಿ ದಾಳಿ, ಕೋಟ್ಯಾಂತರ ಹಣ ಪತ್ತೆ!

ಚಿಕ್ಕಬಳ್ಳಾಪುರದ ಫ್ಲೈಯಿಂಗ್ ಸ್ಕ್ವಾಡ್ಸ್ ತಂಡ (ಎಫ್‌ಎಸ್‌ಟಿ) ಕ್ರಮ ಕೈಗೊಂಡಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ. 4. 8 ಕೋಟಿ ಮೌಲ್ಯದ ನಗದನ್ನು ಚಿಕ್ಕಬಳ್ಳಾಪುರದ ಎಫ್‌ಎಸ್‌ಟಿ ವಶಪಡಿಸಿಕೊಂಡಿರುವುದಾಗಿ ಶುಕ್ರವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಹಣ ಲೆಕ್ಕ ಹಾಕುತ್ತಿರುವ ಅಧಿಕಾರಿಗಳು
ಹಣ ಲೆಕ್ಕ ಹಾಕುತ್ತಿರುವ ಅಧಿಕಾರಿಗಳು

ಚಿಕ್ಕಬಳ್ಳಾಪುರ ಕ್ಷೇತ್ರದ ರಾಜ್ಯ ಕಣ್ಗಾವಲು ತಂಡವು ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ವಿರುದ್ಧ ಏಪ್ರಿಲ್ 25 ರಂದು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದೆ. ಮತದಾರರಿಗೆ ಆಮಿಷ ಮತ್ತು ಅನಗತ್ಯ ಪ್ರಭಾವ ಆರೋಪಕ್ಕಾಗಿ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಯೋಗ ಫೋಸ್ಟ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com