ಲೋಕಸಭಾ ಚುನಾವಣೆ: ಇಂದು ಬಾಗಲಕೋಟೆ, ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ ಪ್ರಚಾರ

ಲೋಕಸಭೆ ಚುನಾವಣೆಯ ಪ್ರಚಾರವನ್ನು ತೀವ್ರಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕರ್ನಾಟಕದಲ್ಲಿ ಒಂದು ಮತ್ತು ಮಹಾರಾಷ್ಟ್ರದಲ್ಲಿ ಮೂರು ಸೇರಿದಂತೆ ನಾಲ್ಕು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on

ನವದೆಹಲಿ: ಲೋಕಸಭೆ ಚುನಾವಣೆಯ ಪ್ರಚಾರವನ್ನು ತೀವ್ರಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕರ್ನಾಟಕದಲ್ಲಿ ಒಂದು ಮತ್ತು ಮಹಾರಾಷ್ಟ್ರದಲ್ಲಿ ಮೂರು ಸೇರಿದಂತೆ ನಾಲ್ಕು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬಾಗಲಕೋಟೆಯಲ್ಲಿ ಮಧ್ಯಾಹ್ನ 12-15ಕ್ಕೆ ಮೊದಲ ಬೃಹತ್ ಸಭೆ ನಡೆಯಲಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಿ.ಪಿ ಗದ್ದಿಗೌಡ ಮತ್ತು ವಿಜಯಪುರ ಅಭ್ಯರ್ಥಿ ರಮೇಶ್​ ಜಿಗಜಿಣಗಿ ಪರವಾಗಿ ಪ್ರಧಾನಿ ಮತಯಾಚಿಸಲಿದ್ದಾರೆ. ಅಲ್ಲಿಂದ ಮಹಾರಾಷ್ಟ್ರಕ್ಕೆ ತೆರಳಿ ಮಧ್ಯಾಹ್ನ 2:15ಕ್ಕೆ ಸೊಲ್ಲಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲಿ ಕಾಂಗ್ರೆಸ್‌ನ ಪ್ರಣಿತಿ ಶಿಂಧೆ ವಿರುದ್ಧ ಬಿಜೆಪಿ ಅಭ್ಯರ್ಥಿ ರಾಮ್ ಸತ್ಪುತೆ ಕಣಕ್ಕಿಳಿದಿದ್ದಾರೆ.

ಪ್ರಧಾನಿ ಮೋದಿ
ಕೇಂದ್ರ ಸರ್ಕಾರವನ್ನು ದುರ್ಬಲಗೊಳಿಸಲು ಕೆಲ ದೇಶಗಳು, ಸಂಸ್ಥೆಗಳು ಬಯಸಿವೆ: ಪ್ರಧಾನಿ ಮೋದಿ

ಸಂಜೆ 4:30ಕ್ಕೆ ಸತಾರಾ ಕ್ಷೇತ್ರದ ಎನ್‌ಸಿಪಿ-ಶರದ್‌ಚಂದ್ರ ಪವಾರ್ ಅಭ್ಯರ್ಥಿ ಶಶಿಕಾಂತ್ ಶಿಂಧೆ ವಿರುದ್ಧ ಸ್ಪರ್ಧಿಸುತ್ತಿರುವ ಪಕ್ಷದ ಅಭ್ಯರ್ಥಿ ಉದಯನರಾಜೆ ಭೋಸ್ಲೆ ಪರ ಪ್ರಧಾನಿ ಮೋದಿ ಅವರು ಕರಾಡ್‌ನಲ್ಲಿ ರ್‍ಯಾಲಿ ನಡೆಸಲಿದ್ದಾರೆ. ಪುಣೆಯ ಹಡಪ್ಸರ್‌ನಲ್ಲಿರುವ ರೇಸ್ ಕೋರ್ಸ್ ಮೈದಾನದಲ್ಲಿ ಸಂಜೆ 6-30ಕ್ಕೆ ಪ್ರಧಾನ ಮಂತ್ರಿಯವರ ನಾಲ್ಕನೇ ರ್‍ಯಾಲಿ ಆಯೋಜಿಸಲಾಗಿದೆ. ಪುಣೆಯ ಬಿಜೆಪಿ ಅಭ್ಯರ್ಥಿ ಮುರಳೀಧರ್ ಮೊಹೋಲ್ ಪರ ಪ್ರಚಾರ ನಡೆಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com