ಪ್ರಧಾನಿ ಮೋದಿಯವರಂತೆ ಬಿ ಶ್ರೀರಾಮುಲು ಬಳ್ಳಾರಿ ಜನತೆಗೆ ಖಾಲಿ ಚೊಂಬು ನೀಡಿದ್ದಾರೆ: ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಖಾಲಿ ಚೊಂಬು (ನೀರಿನ ಪಾತ್ರೆ) ನೀಡಿದ್ದು, ಬಿಜೆಪಿ ಲೋಕಸಭಾ ಅಭ್ಯರ್ಥಿ, ಮಾಜಿ ಸಚಿವ ಬಿ ಶ್ರೀರಾಮುಲು ಕೂಡ ಬಳ್ಳಾರಿ ಜಿಲ್ಲೆಗೆ ಅದನ್ನೇ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದರು.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಸೋಮವಾರ ನಡೆದ ಸಮಾವೇಶದಲ್ಲಿ ಕಾಂಗ್ರೆಸ್‌ನ ಇತರ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಸೋಮವಾರ ನಡೆದ ಸಮಾವೇಶದಲ್ಲಿ ಕಾಂಗ್ರೆಸ್‌ನ ಇತರ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ.
Updated on

ವಿಜಯನಗರ: ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಖಾಲಿ ಚೊಂಬು (ನೀರಿನ ಪಾತ್ರೆ) ನೀಡಿದ್ದು, ಬಿಜೆಪಿ ಲೋಕಸಭಾ ಅಭ್ಯರ್ಥಿ, ಮಾಜಿ ಸಚಿವ ಬಿ ಶ್ರೀರಾಮುಲು ಕೂಡ ಬಳ್ಳಾರಿ ಜಿಲ್ಲೆಗೆ ಅದನ್ನೇ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದರು.

ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಸೋಲಿನ ಭೀತಿಯಿಂದ ಮೋದಿ ಸುಳ್ಳು ಹೇಳಲು ಆರಂಭಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅವರ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಬಿಜೆಪಿಗೆ ಖಾಲಿ ಚೊಂಬು ನೀಡುವ ಸಮಯ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ಇ ತುಕಾರಾಂ ಸರಳತೆಗೆ ಹೆಸರಾಗಿದ್ದು, ಶ್ರೀರಾಮುಲು ಬಳ್ಳಾರಿಗೆ ಏನೂ ಮಾಡಿಲ್ಲ ಎಂದು ಆರೋಪಿಸಿದರು.

ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಖಚಿತವಾಗಿದೆ. ಈ ಭಯದಿಂದಾಗಿ ಅವರು ಆಕ್ಸಿಸ್ ನಡೆಸಿದ ಸಮೀಕ್ಷೆಗಳನ್ನು ಅಳಿಸುತ್ತಿದ್ದಾರೆ. ಬಿಜೆಪಿ ಸುಮಾರು 200 ಸೀಟುಗಳನ್ನು ಗೆಲ್ಲಬಹುದು ಎಂದು ಕೆಲವು ಸಮೀಕ್ಷೆಗಳು ಸೂಚಿಸುತ್ತವೆ. ಹೀಗಾಗಿ, ಮೋದಿ ಅವುಗಳನ್ನು ತಡೆಯುತ್ತಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com