ಕುಮಾರಸ್ವಾಮಿ ಮನವೊಲಿಕೆಗೆ ಬಿಜೆಪಿ ನಾಯಕರ ಯತ್ನ: ಪಾದಯಾತ್ರೆಯಲ್ಲಿ ಭಾಗಿಯಾಗಲು HDK ಷರತ್ತು?

ಸದ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಚ್.ಡಿ.ಕೆ ಮನವೊಲಿಕೆ ಯತ್ನ ಮಾಡಿದ್ದು, ಈ ವೇಳೆ ಪಾದಯಾತ್ರೆಯಲ್ಲಿ ಪ್ರೀತಂ ಗೌಡ ಭಾಗಿಯಾಗಬಾರದು. ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಇರದಿದ್ದರೆ ಮಾತ್ರ ಜೆಡಿಎಸ್ ಭಾಗಿಯಾಗಲಿದೆ ಎಂದು ಹೇಳಿದ್ದಾರೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಮುಡಾ ಅಕ್ರಮ ಖಂಡಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗಿಯಾಗಲು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಷರತ್ತು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಆಗಸ್ಟ್ 3ರಿಂದ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಆರಂಭವಾಗಲಿದೆ ಎಂದು ಘೋಷಣೆಯಾಗಿದೆ. ಆದರೆ ಪಾದಯಾತ್ರೆ ಬಗ್ಗೆ ಜೆಡಿಎಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪಾದಯಾತ್ರೆ ಮುಂದೂಡಿಕೆಯಾಗಲಿದೆ ಎನ್ನಲಾಗಿತ್ತು. ಆದರೆ ಬಿಜೆಪಿ ನಾಯಕರು ನಿಗದಿಯಂತೆ ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ. ಜೆಡಿಎಸ್ ನಾಯಕರ ಮನವೊಲಿಕೆ ಯತ್ನ ನಡೆಸಿದ್ದಾರೆ.

ಸದ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಚ್.ಡಿ.ಕೆ ಮನವೊಲಿಕೆ ಯತ್ನ ಮಾಡಿದ್ದು, ಈ ವೇಳೆ ಪಾದಯಾತ್ರೆಯಲ್ಲಿ ಪ್ರೀತಂ ಗೌಡ ಭಾಗಿಯಾಗಬಾರದು. ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಇರದಿದ್ದರೆ ಮಾತ್ರ ಜೆಡಿಎಸ್ ಭಾಗಿಯಾಗಲಿದೆ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ ಹೈಕಮಾಂಡ್ ಗೆ ಜೆಡಿಎಸ್ ಖಡಕ್ ಸಂದೇಶ ರವಾನಿಸಿದೆ. ಹೆಚ್.ಡಿ ಕುಮಾರಸ್ವಾಮಿ ಮನವೊಲಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹೆಚ್.ಡಿ.ಕೆ ಜೊತೆ ಚರ್ಚೆ ನಡೆಸಿದಾಗಲೂ ಇದೇ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಎಚ್.ಡಿ ಕುಮಾರಸ್ವಾಮಿ
ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವನ ಜೊತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಬಿಜೆಪಿ ಪಾದಯಾತ್ರೆ ವಿರುದ್ಧ HDK ಆಕ್ರೋಶ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com