ಕಾಂಗ್ರೆಸ್ ಸರ್ಕಾರ ಪತನಗೊಳಿಸುವಷ್ಟು ಬಲ ಬಿಜೆಪಿಗೆ ಇಲ್ಲ: ಕೆ.ಸಿ ವೇಣುಗೋಪಾಲ್

ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರದ ಬೆಂಬಲಕ್ಕೆ ಬರುತ್ತಿಲ್ಲ. ಬಜೆಟ್‌ನಲ್ಲಿ ರಾಜ್ಯದ ವಿರುದ್ಧ ತಾರತಮ್ಯ ಮಾಡಿದೆ, ಮತ್ತೊಂದೆಡೆ, ಹಿಂದಿನಂತೆ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನ ನಡೆಸುತ್ತಿದ್ದಾರೆ, ಆದರೆ, ಈಗ ಸಮಯ ಬದಲಾಗಿದೆ. ಕೇಂದ್ರ ಸರ್ಕಾರ ಮೊದಲಿನಷ್ಟು ಬಲಿಷ್ಠವಾಗಿಲ್ಲ...
ಕೆಸಿ ವೇಣುಗೋಪಾಲ್
ಕೆಸಿ ವೇಣುಗೋಪಾಲ್
Updated on

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಷಡ್ಯಂತ್ರಕ್ಕೆ ನಾವು ಮಣಿಯುವುದಿಲ್ಲ. ಜನರ ಬಳಿಗೆ ಹೋಗಿ ವಾಸ್ತವವನ್ನು ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಭಾನುವಾರ ಹೇಳಿದರು.

ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಹರಿಹಾಯ್ದರು.

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ ಇತಿಹಾಸವನ್ನು ಹೊಂದಿದೆ.

ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರದ ಬೆಂಬಲಕ್ಕೆ ಬರುತ್ತಿಲ್ಲ. ಬಜೆಟ್‌ನಲ್ಲಿ ರಾಜ್ಯದ ವಿರುದ್ಧ ತಾರತಮ್ಯ ಮಾಡಿದೆ, ಮತ್ತೊಂದೆಡೆ, ಹಿಂದಿನಂತೆ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನ ನಡೆಸುತ್ತಿದ್ದಾರೆ, ಆದರೆ, ಈಗ ಸಮಯ ಬದಲಾಗಿದೆ. ಕೇಂದ್ರ ಸರ್ಕಾರ ಮೊದಲಿನಷ್ಟು ಬಲಿಷ್ಠವಾಗಿಲ್ಲ ಎಂಬುದು ಅವರಿಗೆ ಗೊತ್ತಿಲ್ಲ. ನಮಗೆ ವಿಶ್ವಾಸವಿದೆ, ಪಕ್ಷದಲ್ಲಿ ವಿಶ್ವಾಸವಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ. ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನಗಳನ್ನು ರಾಜ್ಯದ ಜನತೆಗೆ ವಿವರಿಸಲಾಗುವುದು ಎಂದು ಹೇಳಿದರು.

ಕೆಸಿ ವೇಣುಗೋಪಾಲ್
ಮುಡಾ ಹಗರಣ: ಸಿದ್ದರಾಮಯ್ಯ ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ; ಸಿಎಂ ಬೆನ್ನಿಗೆ ನಿಂತ ಕಾಂಗ್ರೆಸ್ ನಾಯಕರು

ಕರ್ನಾಟಕ ರಾಜಕೀಯದಲ್ಲಿ ಗಂಭೀರ ಬೆಳವಣಿಗೆಗಳು ನಡೆಯುತ್ತಿರುವುದರಿಂದ ಇಂದು ಸಚಿವರೊಂದಿಗೆ ಚರ್ಚೆ ನಡೆಸಿದೆವು. ಬಿಜೆಪಿಗೆ ಸರ್ಕಾರವನ್ನು ಉರುಳಿಸುವ ಇತಿಹಾಸವಿದೆ. 2018ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಕೇಂದ್ರ ನಾಯಕತ್ವ ಷಡ್ಯಂತ್ರ ನಡೆಸಿದ್ದು, ಈಗಲೂ ಅದೇ ಉದ್ದೇಶದಿಂದ ಕರ್ನಾಟಕ ಸರ್ಕಾರವನ್ನು ಗುರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಬಿಜೆಪಿ-ಜೆಡಿಎಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ಈ ಯೋಜನೆಗಳು ಪ್ರತಿಪಕ್ಷಗಳ ರಾಜಕೀಯ ಹಿತಾಸಕ್ತಿಗಳಿಗೆ ಬೆದರಿಕೆಯಾಗಿ ಕಾಣುತ್ತಿವೆ, ವಿವಾದಗಳನ್ನು ಸೃಷ್ಟಿಸಲು ಮತ್ತು ಸರ್ಕಾರದ ಸ್ಥಿರತೆಯನ್ನು ಹಾಳುಮಾಡಲು ಪ್ರೇರೇಪಿಸುತ್ತಿವೆ ಎಂದು ಹೇಳಿದರು.

ಇದೇ ವೇಳೆ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಶೋಕಾಸ್ ನೋಟಿಸ್ ನೀಡಿರುವುದು ದುರದೃಷ್ಟಕರ ಎಂದು ಕಿಡಿಕಾರಿದರು.

ರಾಜ್ಯಪಾಲರು ಬಿಜೆಪಿಯ ಅಸ್ತ್ರದಂತೆ ವರ್ತಿಸಿದ್ದಾರೆ. ಅವರು ಸಿಎಂಗೆ ನೋಟಿಸ್ ನೀಡುವ ಮೂಲಕ ಸರ್ಕಾರದ ಅಸ್ಥಿರತೆಯ ಗ್ರಹಿಕೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com