82ನೇ ವಯಸ್ಸಿನಲ್ಲಿ ಪೋಕ್ಸೋ ಕೇಸ್ ಎದುರಿಸಿದ BSY ಗೆ ನನ್ನ ಬಗ್ಗೆ ಮಾತಾಡುವ ನೈತಿಕತೆ ಏನಿದೆ: ಸಿದ್ದರಾಮಯ್ಯ

ಬಿಜೆಪಿಯವರು ಆಪರೇಷನ್ ಕಮಲ ಮಾಡಲು ಪ್ರಯತ್ನಿಸಿದ್ರು ಆಗಲಿಲ್ಲ. ಈಗ ಬಿಜೆಪಿ-ಜೆಡಿಎಸ್​ ಸೇರಿ ಸರ್ಕಾರ ಅಸ್ಥಿರಗೊಳಿಸಲು ಯತ್ನ ನಡೆಯುತ್ತಿದೆ.
82ನೇ ವಯಸ್ಸಿನಲ್ಲಿ ಪೋಕ್ಸೋ ಕೇಸ್ ಎದುರಿಸಿದ BSY ಗೆ ನನ್ನ ಬಗ್ಗೆ ಮಾತಾಡುವ ನೈತಿಕತೆ ಏನಿದೆ: ಸಿದ್ದರಾಮಯ್ಯ
Updated on

ಮೈಸೂರು: ಬಿ ಎಸ್ ಯಡಿಯೂರಪ್ಪನವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಆಗಿದೆ. ಕೋರ್ಟ್ ದಯೆಯಿಂದ ಬಚಾವಾಗಿದ್ದಾರೆ ಅವರಿಗೆ ನನ್ನ ಬಗ್ಗೆ ಮಾತನಾಡುವ ನೈತಿಕತೆ ಏನು ಉಳಿದಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ನಮ್ಮ ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ ಎಂಬ ಬಿಎಸ್​ ಯಡಿಯೂರಪ್ಪ ಹೇಳಿಕೆಗೆ ಗರಂ ಆದ ಸಿಎಂ ಸಿದ್ದರಾಮಯ್ಯ, ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಬಿಎಸ್​ವೈಗೆ ನನ್ನ ಬಗ್ಗೆ ಮಾತಾಡುವ ನೈತಿಕತೆ ಇಲ್ಲ ಎಂದರು. ನ್ಯಾಯಾಲಯದ ದಯೆಯಿಂದ ಯಡಿಯೂರಪ್ಪ ಬದುಕಿದ್ದಾರೆ.

ಇಲ್ಲವಾದರೇ ಯಡಿಯೂರಪ್ಪ ಜೈಲಲ್ಲಿ ಇರಬೇಕಿತ್ತು. 82 ವರ್ಷ ವಯಸ್ಸಿನಲ್ಲಿ ಇದು ಬೇಕಿತ್ತಾ, ಚಿಕ್ಕ ಮಗುವಿನ ಮೇಲೆ ಈ ರೀತಿ ಮಾಡಬೇಕಿತ್ತಾ, ಯಡಿಯೂರಪ್ಪಗೆ ಯಾವ ನೈತಿಕತೆ ಇದೆ ನನ್ನ ಬಗ್ಗೆ ಮಾತನಾಡುವುದ್ದಕ್ಕೆ. ಯಡಿಯೂರಪ್ಪ ರಾಜಕೀಯ ಜೀವನದಿಂದ ನಿವೃತ್ತಿಯಾಗಬೇಕಿತ್ತು. ಅವರಿಗೆ ರಾಜಕೀಯ ನಿವೃತ್ತರಾಗಲು ಹೇಳಿ ಎಂದರು.

82ನೇ ವಯಸ್ಸಿನಲ್ಲಿ ಪೋಕ್ಸೋ ಕೇಸ್ ಎದುರಿಸಿದ BSY ಗೆ ನನ್ನ ಬಗ್ಗೆ ಮಾತಾಡುವ ನೈತಿಕತೆ ಏನಿದೆ: ಸಿದ್ದರಾಮಯ್ಯ
MUDA ಸೈಟ್ ಹಂಚಿಕೆಯಲ್ಲಿ ನನ್ನ ಪಾತ್ರವಿಲ್ಲ, ಮೈಸೂರು ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್ ಹಗರಣಗಳನ್ನು ಬಿಚ್ಚಿಡುತ್ತೇನೆ: ಸಿದ್ದರಾಮಯ್ಯ

ಬಿಜೆಪಿಯವರು ಆಪರೇಷನ್ ಕಮಲ ಮಾಡಲು ಪ್ರಯತ್ನಿಸಿದ್ರು ಆಗಲಿಲ್ಲ. ಈಗ ಬಿಜೆಪಿ-ಜೆಡಿಎಸ್​ ಸೇರಿ ಸರ್ಕಾರ ಅಸ್ಥಿರಗೊಳಿಸಲು ಯತ್ನ ನಡೆಯುತ್ತಿದೆ. ನಮ್ಮ ಸರ್ಕಾರ ಬಡವರ ಪರ ಕೆಲಸ ಮಾಡುತ್ತಿದೆ. ಹೀಗಾಗಿ ನಮ್ಮ ಸರ್ಕಾರದ ಬಗ್ಗೆ ಬಿಜೆಪಿ-ಜೆಡಿಎಸ್​ಗೆ ಭಯವಿದೆ. ಗ್ಯಾರಂಟಿಗಳನ್ನು ನಿಲ್ಲಿಸುತ್ತಾರೆಂದು ಸುಳ್ಳು ಹೇಳಿಕೆ ನೀಡಿದ್ರು, ನಾವು ಗ್ಯಾರಂಟಿ ಯೋಜನೆಗಳನ್ನು ಎಲ್ಲಿ ನಿಲ್ಲಿಸಿದ್ದೇವೆ ಹೇಳಲಿ. ಬಡವರ ಪರ ನಮ್ಮ ಸರ್ಕಾರ ಕೆಲಸ ಮಾಡುತ್ತಿರುವುದಕ್ಕೆ ಅವರಿಗೆ ಭಯವಿದೆ. ಹೀಗಾಗಿ ಬಿಜೆಪಿ-ಜೆಡಿಎಸ್ ನಮ್ಮ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com