ಬಿಜೆಪಿ-ಜೆಡಿಎಸ್ ನಾಯಕರ ಹಗರಣ ಬಯಲಿಗೆಳೆವೆ- CM; ಸರ್ಕಾರ ಪದಚ್ಯುತಿಯಾಗುವವರೆಗೂ ಹೋರಾಟ- ರಾಧಾ ಮೋಹನ್ ಅಗರ್ವಾಲ್

ರಾಜಕೀಯದಲ್ಲಿ ನನ್ನ ವರ್ಚಸ್ಸು ಹಾಳು ಮಾಡಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ನನ್ನ ವಿರುದ್ಧ ಸುಳ್ಳು ಮತ್ತು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ವಿಪಕ್ಷ ನಾಯಕರು ಹಗಲುಗನಸು ಕಾಣುತ್ತಿದ್ದಾರೆ.
ಸಿದ್ದರಾಮಯ್ಯ ಮತ್ತು ರಾಧಾ ಮೋಹನ್ ಅಗರ್ವಾಲ್
ಸಿದ್ದರಾಮಯ್ಯ ಮತ್ತು ರಾಧಾ ಮೋಹನ್ ಅಗರ್ವಾಲ್
Updated on

ಮೈಸೂರು: ಕಾಂಗ್ರೆಸ್ ಸರ್ಕಾರವನ್ನುಅಸ್ಥಿರಗೊಳಿಸುವ ನಿಟ್ಟಿನಲ್ಲಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಆಂದೋಲನ ನಡೆಸುತ್ತಿದ್ದರೆ, ವಿವಿಧ ಹಗರಣಗಳಲ್ಲಿ ಭಾಗಿಯಾಗಿರುವ ಎರಡೂ ವಿರೋಧ ಪಕ್ಷಗಳ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡಿರುವ ವಿವಿಧ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ವರದಿ ಬಂದ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ರಾಜಕೀಯದಲ್ಲಿ ನನ್ನ ವರ್ಚಸ್ಸು ಹಾಳು ಮಾಡಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ನನ್ನ ವಿರುದ್ಧ ಸುಳ್ಳು ಮತ್ತು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ವಿಪಕ್ಷ ನಾಯಕರು ಹಗಲುಗನಸು ಕಾಣುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತೇನೆ. ಈಗಾಗಲೇ ಜನಾಂದೋಲನ ಸಮಾವೇಶದಲ್ಲಿ ನಡೆದಿರುವ ಕೆಲವು ಹಗರಣಗಳನ್ನು ಬಯಲಿಗೆಳೆದಿದ್ದೇವೆ. ಅವರ ಹಲವು ಹಗರಣಗಳು ತನಿಖಾ ಹಂತದಲ್ಲಿದ್ದು, ವರದಿ ಸಲ್ಲಿಕೆಯಾದ ನಂತರ ಜನರ ಮುಂದೆ ಇಡುತ್ತೇನೆ ಎಂದರು.

‘ಮೈಸೂರು ಚಲೋ’ ಪಾದಯಾತ್ರೆಯನ್ನು ಸುಳ್ಳು ಎಂದು ಸಾರ್ವಜನಿಕರಿಗೆ ತೋರಿಸಲು ಕಾಂಗ್ರೆಸ್ ಜನಾಂದೋಲನ ಸಮಾವೇಶಗಳನ್ನು ನಡೆಸಿದೆ ಎಂದು ಪ್ರತಿಪಾದಿಸಿದ ಸಿದ್ದರಾಮಯ್ಯ, ವಿರೋಧ ಪಕ್ಷಗಳು ಸುಳ್ಳು ಆರೋಪ ಮಾಡುವ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿವೆ ಎಂದು ಹೇಳಿದರು. ಬಿಜೆಪಿ ಮತ್ತು ಜೆಡಿಎಸ್ ನಾಯಕರ ಬೆದರಿಕೆ ಅಥವಾ ಆಧಾರರಹಿತ ಆರೋಪಗಳಿಗೆ ನಾನು ಬಗ್ಗುವುದಿಲ್ಲ. ಆರೋಪಗಳ ವಿರುದ್ಧ ಕಾನೂನು ಮತ್ತು ರಾಜಕೀಯ ಹೋರಾಟ ನಡೆಸುತ್ತೇವೆ ಎಂದರು.

ಸಿದ್ದರಾಮಯ್ಯ ಮತ್ತು ರಾಧಾ ಮೋಹನ್ ಅಗರ್ವಾಲ್
ಪಾದಯಾತ್ರೆಗೆ 7ನೇ ದಿನ: ಮೈಸೂರು ತಲುಪಿದ ದೋಸ್ತಿ ನಾಯಕರು, ನಾಳೆ ಸಮಾರೋಪ ಕಾರ್ಯಕ್ರಮ

ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವವರೆಗೂ ಮೈತ್ರಿ ಪಾಲುದಾರರಾದ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಹೋರಾಟವನ್ನು ಮುಂದುವರೆಸುತ್ತವೆ ಕರ್ನಾಟಕದಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ವಹಿಸಿರುವ ಬಿಜೆಪಿ ಸಂಸದ ರಾಧಾ ಮೋಹನ್ ಅಗರ್ವಾಲ್ ಹೇಳಿದ್ದಾರೆ.

ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್‌ನ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅಗರ್‌ವಾಲ್, ಮುಡಾ ಮತ್ತು ವಾಲ್ಮೀಕಿ ಹಗರಣಗಳ ಕುರಿತು ಬಿಜೆಪಿ ಮತ್ತು ಜೆಡಿಎಸ್‌ ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್‌ ನಾಯಕರು ವಿಧಾನಸಭೆಯಿಂದ ಪಲಾಯನಗೈದ ಹೇಡಿಗಳು ಎಂದು ವಾಗ್ದಾಳಿ ನಡೆಸಿದ್ದಾರೆ. ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಸಾರ್ವಜನಿಕ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡಿದೆ. ಸರ್ಕಾರದಿಂದ ಉತ್ತರ ಪಡೆಯಲು ವಿರೋಧ ಪಕ್ಷಗಳು ಪಾದಯಾತ್ರೆ ಆರಂಭಿಸಬೇಕಾಯಿತು. ಇದೊಂದು ಜನಪರ ಹೋರಾಟವಾಗಿರುವುದರಿಂದ ಭ್ರಷ್ಟ ಸರಕಾರವನ್ನು ಕಿತ್ತೊಗೆಯುವವರೆಗೂ ಪ್ರತಿಪಕ್ಷಗಳು ಹೋರಾಟ ಮುಂದುವರಿಸಲಿವೆ ಎಂದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವೈಯಕ್ತಿಕ ಆಸ್ತಿ ಕುರಿತು ಮಾತನಾಡಿದ ಅಗರ್ವಾಲ್ ಅವರು, “ಅವರು ತಮ್ಮ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಅವರ ಆಸ್ತಿ ₹ 75 ಕೋಟಿ ಆಗಿತ್ತು. ಈಗ ಅದು `1,400 ಕೋಟಿಗೂ ಮೀರಿದೆ. ಜನರು ಅವರ ಆದಾಯದ ಮೂಲವನ್ನು ತಿಳಿದುಕೊಳ್ಳಲು ಬಯಸುತ್ತಾರೆ. ಸರ್ಕಾರದ ಹಣವನ್ನು ಲೂಟಿ ಮಾಡುವ ಮೂಲಕ ಕಾಂಗ್ರೆಸ್ ನಾಯಕರ ಆಸ್ತಿ ಹೆಚ್ಚಿದೆ’ ಎಂದು ಆರೋಪಿಸಿದ ಅವರು, ‘ಕಾಂಗ್ರೆಸ್‌ನ್ನು ಕಿತ್ತೊಗೆಯುವವರೆಗೂ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಕಾನೂನು ಹೋರಾಟ ನಡೆಸಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com