ಬಿಜೆಪಿ ರಾಜ್ಯಾಧ್ಯಕ್ಷಗೆ ಸಿಎಂ ರಾಜಿನಾಮೆ ಕೇಳುವ ಹಕ್ಕಿಲ್ಲ: ವಿಜಯೇಂದ್ರ ವಿರುದ್ಧ ಮಧು ಬಂಗಾರಪ್ಪ ಆಕ್ರೋಶ

VISL ಅನ್ನು ಮುಚ್ಚುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ವಿಐಎಸ್‌ಎಲ್ ಸ್ಥಗಿತಗೊಂಡರೆ ಅದಕ್ಕೆ ಬಿವೈ ರಾಘವೇಂದ್ರ ಮಾತ್ರ ಹೊಣೆ ಎಂದು ಮಧು ಆರೋಪಿಸಿದರು.
ಮಧು ಬಂಗಾರಪ್ಪ
ಮಧು ಬಂಗಾರಪ್ಪ
Updated on

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಲು ಅಥವಾ ರಾಜೀನಾಮೆಗೆ ಒತ್ತಾಯಿಸಲು ನೈತಿಕತೆಯಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಭಾನುವಾರ ಲಕ್ಕವಳ್ಳಿಯ ಭದ್ರಾ ಅಣೆಕಟ್ಟಿಗೆ ಬಾಗಿನ ಅರ್ಪಿಸಿ ಮಾತನಾಡಿದ ಮಧು ಬಂಗಾರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೇಳುವ ನೈತಿಕತೆ ಇಲ್ಲ. ಅವರು ಯಾವುದಾದರೂ ಚಳವಳಿಯಲ್ಲಿ ಭಾಗವಹಿಸಿದ್ದಾರೆಯೇ? ಅವನ ಸಾಧನೆ ಏನು? ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಲು ಅವರ ಪುತ್ರರಿಬ್ಬರೂ ಕಾರಣ. ಅವರು ಭ್ರಷ್ಟರಾಗಿದ್ದರು ಮತ್ತು ಕಳೆದ ಬಿಜೆಪಿ ಅಧಿಕಾರಾವಧಿಯಲ್ಲಿ ಯಡಿಯೂರಪ್ಪ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅದಕ್ಕೆ ಬೆಲೆ ಪಾವತಿಸಿದ್ದಾರೆ ಎಂದು ಹೇಳಿದ್ದಾರೆ.

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ‌ ಕಾರ್ಖಾನೆ(ವಿಐಎಸ್‌ಎಲ್‌)ಯನ್ನು ನಷ್ಟದ ಉದ್ಯಮದಿಂದ ಹೊರ ತರುವಲ್ಲಿ ಸಂಸದ ಬಿ.ವೈ.ರಾಘವೇಂದ್ರ ವಿಫಲರಾಗಿದ್ದಾರೆ. ಈಗ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರನ್ನು ಕರೆತಂದಿದ್ದು, ಯಾವುದೇ ಪ್ರಯೋಜನವಾಗಿಲ್ಲ ಎಂದು ಮಧು ಬಂಗಾರಪ್ಪ ಟೀಕಿಸಿದರು. ಮೂರು ಬಾರಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಸಾಕಷ್ಟು ಸುಳ್ಳು ಹೇಳಿದ್ದಾರೆ. ಇಲ್ಲಿ 15 ಸಾವಿರ ನೌಕರರು ಇದ್ದರು‌. ಈ ನೌಕರರನ್ನು ವರ್ಗಾವಣೆ ಮಾಡಿರುವ ಕೀರ್ತಿ ರಾಘವೇಂದ್ರ ಅವರಿಗೆ ಸಲ್ಲುತ್ತದೆ. ಕಾರ್ಖಾನೆಯ ಈಗಿನ ಸ್ಥಿತಿಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಸಂಸದ ಬಿ ವೈ ರಾಘವೇಂದ್ರ ಕಾರಣ ಎಂದು ದೂರಿದರು. VISL ಅನ್ನು ಮುಚ್ಚುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ವಿಐಎಸ್‌ಎಲ್ ಸ್ಥಗಿತಗೊಂಡರೆ ಅದಕ್ಕೆ ಬಿವೈ ರಾಘವೇಂದ್ರ ಮಾತ್ರ ಹೊಣೆ ಎಂದು ಮಧು ಆರೋಪಿಸಿದರು.

ಮಧು ಬಂಗಾರಪ್ಪ
ಸರ್ಕಾರಿ ಶಾಲೆ ಜಾಗ ರಕ್ಷಿಸಿ: ಸಚಿವ ಮಧು ಬಂಗಾರಪ್ಪಗೆ AAP ಮನವಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com