ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಶತಮಾನೋತ್ಸವ ಸಭೆ: ಪಕ್ಷದಿಂದ ಭರದ ಸಿದ್ಧತೆ

1924ರಲ್ಲಿ ಡಿಸೆಂಬರ್ 26 ರಂದು ಬೆಳಗಾವಿಯಲ್ಲಿ ಅಧಿಕಾರ ಸ್ವೀಕರಿಸಿದ್ದರು. ನಾವು ಈಗ 2024 ನೇ ಇಸವಿಯಲ್ಲಿದ್ದೇವೆ. ಈ ಐತಿಹಾಸಿಕ ಕ್ಷಣದ 100 ವರ್ಷಗಳನ್ನು ಆಚರಿಸುವುದು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರಿಗೆ ಹೆಮ್ಮೆಯ ವಿಷಯವಾಗಿದೆ ಎಂದರು.
AICC general secretary KC Venugopal addresses a press conference, as CM Siddaramaiah, DCM DK Shivakumar and others look on, in Belagavi on Tuesday
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತಿತರರು ನೋಡುತ್ತಿರುವಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
Updated on

ಬೆಳಗಾವಿ: 1924ರ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಡಿಸೆಂಬರ್ 26ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯು(CWC) ದೇಶದ ರಾಜಕೀಯ ಹಾಗೂ ಕಾಂಗ್ರೆಸ್ ಪಕ್ಷದ ನಿರಂತರ ಹೋರಾಟಕ್ಕೆ ಪುಷ್ಟಿ ನೀಡಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.

ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವೇಣುಗೋಪಾಲ್, ಮಹಾತ್ಮ ಗಾಂಧಿಯವರು ಒಂದೇ ಒಂದು ಬಾರಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು.

1924ರಲ್ಲಿ ಡಿಸೆಂಬರ್ 26 ರಂದು ಬೆಳಗಾವಿಯಲ್ಲಿ ಅಧಿಕಾರ ಸ್ವೀಕರಿಸಿದ್ದರು. ನಾವು ಈಗ 2024 ನೇ ಇಸವಿಯಲ್ಲಿದ್ದೇವೆ. ಈ ಐತಿಹಾಸಿಕ ಕ್ಷಣದ 100 ವರ್ಷಗಳನ್ನು ಆಚರಿಸುವುದು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರಿಗೆ ಹೆಮ್ಮೆಯ ವಿಷಯವಾಗಿದೆ ಎಂದರು.

ಮಹಾತ್ಮಾ ಗಾಂಧಿಯವರು ಅಹಿಂಸಾ ತತ್ವವನ್ನು ಪ್ರಚಾರ ಮಾಡಿದರು. ದೇಶಕ್ಕೆ ಸ್ವಾತಂತ್ರ್ಯವನ್ನು ತರಲು ಈ ತತ್ವದಿಂದ ಬ್ರಿಟಿಷರ ವಿರುದ್ಧ ಹೋರಾಡಿದರು, ಬಿಜೆಪಿ ಈಗ ಎಲ್ಲವನ್ನೂ ನಾಶಪಡಿಸಿದೆ ಎಂದರು.

ಶ್ರೀಮಂತರು ಹೆಚ್ಚು ಶ್ರೀಮಂತರಾಗುತ್ತಿದ್ದಾರೆ ಮತ್ತು ಬಡವರು ಬಡವರಾಗುತ್ತಿದ್ದಾರೆ, ಸಮಾನತೆ ದೇಶದಲ್ಲಿಲ್ಲ. ದೇಶದಲ್ಲಿ ಒಬ್ಬ ವ್ಯಕ್ತಿಯ ಹಿತಾಸಕ್ತಿ ಕಾಪಾಡಲು ಸರಕಾರ ಆದ್ಯತೆ ನೀಡುತ್ತಿದೆ. ಸಾರ್ವಜನಿಕ ಉದ್ದಿಮೆಗಳು ಮಾರಾಟವಾಗುತ್ತಿದ್ದು, ರಾಷ್ಟ್ರದ ಆಸ್ತಿಗಳು ಒಬ್ಬರ ಕೈ ಸೇರುತ್ತಿವೆ ಎಂದು ಆರೋಪಿಸಿದರು.

ಕಾಂಗ್ರೆಸ್ ಎಸ್‌ಸಿ/ಎಸ್‌ಟಿಗಳು, ಹಿಂದುಳಿದ ವರ್ಗಗಳು ಮತ್ತು ಸಮಾಜದ ಬಡ ವರ್ಗಗಳಿಗೆ ಭದ್ರತೆಯನ್ನು ಒದಗಿಸಲು ಜಾತಿ ಗಣತಿಯನ್ನು ಹೊಂದಲು ಚರ್ಚಿಸುತ್ತಿದ್ದೇವೆ. ನಾವು 100 ವರ್ಷಗಳ ಹಿಂದೆ ಗಾಂಧೀಜಿ ಹೇಳಿದ ಸಮಾನತೆಯ ಬಗ್ಗೆ ಮಾತನಾಡುತ್ತಿದ್ದೇವೆ ಎಂದು ವೇಣುಗೋಪಾಲ್ ಹೇಳಿದರು.

AICC general secretary KC Venugopal addresses a press conference, as CM Siddaramaiah, DCM DK Shivakumar and others look on, in Belagavi on Tuesday
ಮಹಾತ್ಮ ಗಾಂಧಿ ಅಧ್ಯಕ್ಷತೆಯ ಐತಿಹಾಸಿಕ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಕಾಂಗ್ರೆಸ್ ಸಿದ್ಧತೆ

ಬಿಜೆಪಿಯು ದೇಶದಲ್ಲಿ ದ್ವೇಷದ ಮಾರುಕಟ್ಟೆಯನ್ನು ತೆರೆದಿದೆ. ಧರ್ಮದ ಹೆಸರಿನಲ್ಲಿ ದ್ವೇಷದ ಬೀಜಗಳನ್ನು ಬಿತ್ತುತ್ತಿದೆ ಎಂದು ಅವರು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸರ್ವಾಧಿಕಾರದಂತಹ ಆಡಳಿತದ ವಿರುದ್ಧ ಕಾಂಗ್ರೆಸ್ ಹೋರಾಡುತ್ತಿದೆ. ಅಂತಹ ಸಂದರ್ಭಗಳಲ್ಲಿ, CWC ಸಭೆಯು ದೇಶದ ರಾಜಕೀಯಕ್ಕೆ ಹೊಸ ಆಯಾಮವನ್ನು ನೀಡುತ್ತದೆ, ಪಕ್ಷವು ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಡಿಸೆಂಬರ್ 26 ರಂದು ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ ಎಂದರು.

‘ಅಂದು ಈಸ್ಟ್ ಇಂಡಿಯಾ ಕಂಪನಿ, ಈಗ ಮೊದಾನಿ’

ರಣದೀಪ್ ಸಿಂಗ್ ಸುರ್ಜೆವಾಲಾ ಮಾತನಾಡಿ, ಅಂದು ಈಸ್ಟ್ ಇಂಡಿಯಾ ಕಂಪನಿ ದೇಶವನ್ನು ಆಳಿದ್ದರೆ, ಮೊದಾನಿ ಈಗ ದೇಶವನ್ನು ಆಳುತ್ತಿದ್ದಾರೆ. “ಈಸ್ಟ್ ಇಂಡಿಯಾ ಕಂಪನಿಯು ಸಮಾಜದ ವರ್ಗಗಳನ್ನು, ದಲಿತರು ಮತ್ತು ಬಡವರನ್ನು ಶೋಷಿಸಿತು, ಈಗ ಮೊದಾನಿಯವರು ಅದನ್ನೇ ಮಾಡುತ್ತಿದ್ದಾರೆ. ಪಂಡಿತ್ ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್, ಅಂಬೇಡ್ಕರ್, ಮೌಲಾನಾ ಆಜಾದ್ ಮತ್ತು ಡಾ.ರಾಜೇಂದ್ರ ಪ್ರಸಾದ್ ಅವರು ರಚಿಸಿದ ಸಂವಿಧಾನದ ಮೇಲೆ ಕೇಂದ್ರವು ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com