ಹಿನ್ನೋಟ 2024: ಕರ್ನಾಟಕದಲ್ಲಿ ಸದ್ದು-ಸುದ್ದಿ ಮಾಡಿದ ರಾಜಕೀಯ ಸಂಗತಿಗಳು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಿಎಂ ಹಾಗೂ ಅವರ ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯ (ED) ಕೂಡ ಪ್ರಕರಣದ ತನಿಖೆ ನಡೆಸುತ್ತಿದೆ.
Vidhana Saudha
ವಿಧಾನಸೌಧ
Updated on

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ 2024 ಮಹತ್ವದ ವರ್ಷ. ಪ್ರಮುಖ ರಾಜಕಾರಣಿಗಳು ಭಾಗಿಯಾಗಿದ್ದಾರೆಂದು ಹೇಳಲಾದ ಹಗರಣಗಳಿಂದ ಪಕ್ಷಗಳು ಸದ್ದು ಮಾಡಿದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಸರ್ಕಾರ ಮತ್ತು ಅದರ ಪ್ರಮುಖ ನಾಯಕರು ವಿವಾದಗಳಲ್ಲಿ ಮುಳುಗಿ ಗಂಭೀರ ಆರೋಪಗಳನ್ನು ಎದುರಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಿಎಂ ಹಾಗೂ ಅವರ ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯ (ED) ಕೂಡ ಪ್ರಕರಣದ ತನಿಖೆ ನಡೆಸುತ್ತಿದೆ.

ಮುಡಾ, ಸಿಎಂ ಸಿದ್ದರಾಮಯ್ಯ ಪತ್ನಿಗೆ ಮೈಸೂರಿನ ದುಬಾರಿ ಪ್ರದೇಶದಲ್ಲಿ 14 ವಸತಿ ನಿವೇಶನಗಳನ್ನು ಮಂಜೂರು ಮಾಡಿತ್ತು ಎಂಬುದು ಆರೋಪವಾಗಿತ್ತು. ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ಅನುಮತಿ ನೀಡಿದ ಬಳಿಕ ನಿವೇಶನಗಳನ್ನು ವಾಪಸ್ ನೀಡಲಾಗಿದ್ದು, ಹೈಕೋರ್ಟ್‌ ತನಿಖೆ ಆದೇಶಿಸಿತ್ತು. ಮುಡಾ ಬೆಳವಣಿಗೆಗಳು ಸಿಎಂ ಮತ್ತು ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ. ಸಿದ್ದರಾಮಯ್ಯನವರಿಗೆ ಪ್ರಕರಣದಲ್ಲಿ ನಡೆಯುತ್ತಿರುವ ತನಿಖೆಯ ಫಲಿತಾಂಶದ ಮೇಲೆ ಬಹಳಷ್ಟು ಅವಲಂಬಿತವಾಗಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲೂ ಸರ್ಕಾರ ಬಹುಕೋಟಿ ಹಗರಣದಲ್ಲಿ ಸಿಲುಕಿತ್ತು. ನಿಗಮದ ಬ್ಯಾಂಕ್ ಖಾತೆಗಳ ಹಣವನ್ನು ಅಕ್ರಮವಾಗಿ ಖಾಸಗಿ ಖಾತೆಗಳಿಗೆ ವರ್ಗಾಯಿಸಲಾಗಿದೆ. ಪರಿಶಿಷ್ಟ ಜಾತಿಗಳ ಜನರ ಕಲ್ಯಾಣಕ್ಕಾಗಿ ಮೀಸಲಾದ ಹಣವನ್ನು ಲೋಕಸಭೆ ಚುನಾವಣೆಯಲ್ಲಿ ಬಳಸಲಾಗಿದೆ ಎಂದು ಆರೋಪಿಸಲಾಗಿತ್ತು.

ನಿಗಮದ ಅಧಿಕಾರಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ನಂತರ ಹಗರಣ ಬಯಲಿಗೆ ಬಂತು. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದು, ಇಡಿ ಅವರನ್ನು ಬಂಧಿಸಿದೆ. ಹಣಕಾಸು ಇಲಾಖೆ ಅಧಿಕಾರಿಗಳ ವಿರುದ್ಧವೂ ತನಿಖೆ ನಡೆಯುತ್ತಿದೆ.

ವಕ್ಫ್ ಭೂ ವಿವಾದವನ್ನು ನಿಭಾಯಿಸುವಲ್ಲಿ ಸಿದ್ದರಾಮಯ್ಯ ಸರ್ಕಾರವು ದೊಡ್ಡ ಹಿನ್ನಡೆಯನ್ನು ಎದುರಿಸಿತು, ಆದರೆ ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರವು ಪಕ್ಷವನ್ನು ಮುಜುಗರಕ್ಕೀಡುಮಾಡಿತು, ಬಿಜೆಪಿ ಅದನ್ನು ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ಲಸ್ ಆಗಿ ತೆಗೆದುಕೊಂಡಿತು. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದಾಗ ವಿಧಾನಸೌಧದ ಕಾರಿಡಾರ್‌ಗಳಲ್ಲಿ ಪಾಕಿಸ್ತಾನದ ಪರ ಘೋಷಣೆಗಳು ಮೊಳಗಿದವು. ಆರೋಪಿಗಳ ಬಗ್ಗೆ ಸರ್ಕಾರ ಮೃದು ಧೋರಣೆ ಅನುಸರಿಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದವು.

Vidhana Saudha
ಹಿನ್ನೋಟ 2024: ಹಲವು ವಿವಾದಗಳ ಆಗರ, ಮಾತಿನ ಅಬ್ಬರ; ಸದ್ದು ಮಾಡಿ ಸುದ್ದಿಯಾದವರ ವಿವರ!

ಶಾಸಕರಿಗೆ ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರ ಸಮರ್ಪಕವಾಗಿ ಹಣ ನೀಡುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಅವರಲ್ಲಿ ಕೆಲವರು 56,000 ಕೋಟಿ ರೂಪಾಯಿಗಳ ಬಜೆಟ್ ಹಂಚಿಕೆಯೊಂದಿಗೆ ಐದು ಖಾತರಿ ಯೋಜನೆಗಳನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದರು. ಆದಾಗ್ಯೂ, ಸರ್ಕಾರವು ತನ್ನ ಪ್ರಮುಖ ಯೋಜನೆಗಳಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದೆ.

ನಾಯಕತ್ವದ ಸಮಸ್ಯೆಗಳು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರವನ್ನು ಹಂಚಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ರೂಪಿಸಿದ ಒಪ್ಪಂದವು ರಾಜಕೀಯ ವಲಯಗಳಲ್ಲಿ ಆಗಾಗ್ಗೆ ಚರ್ಚೆಗೆ ಬರುತ್ತಿದೆ. ಅಂತಹ ಯಾವುದೇ ಒಪ್ಪಂದವಾಗಿಲ್ಲ ಎಂದು ಸಿಎಂ ಮತ್ತು ಡಿಸಿಎಂ ಹೇಳಿಕೊಂಡು ಬರುತ್ತಿದ್ದಾರೆ.

ಸದ್ಯಕ್ಕೆ ಕರ್ನಾಟಕದಲ್ಲಿ ಸಿದ್ದರಾಮಯ್ಯ-ಶಿವಕುಮಾರ್ ನಾಯಕತ್ವದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿರುವುದು ಕಂಡುಬರುತ್ತಿದೆ. ಅಸೆಂಬ್ಲಿ ಉಪಚುನಾವಣೆಯಲ್ಲಿ ಪಕ್ಷದ 3: 0 ಪ್ರಬಲ ಗೆಲುವಿನಿಂದ ಇದು ಪುನರಾವರ್ತನೆಯಾಗಿದೆ. ಆದರೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆಗೂ ಮೀರಿ ಸೋತಿದೆ. 28 ಸ್ಥಾನಗಳ ಪೈಕಿ ಒಂಬತ್ತನ್ನು ಮಾತ್ರ ಗೆದ್ದಿದೆ.

ಕಳೆದ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲನ್ನು ಎದುರಿಸಿದ ನಂತರ, ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡ ನಂತರ ಬಿಜೆಪಿ-ಜೆಡಿಎಸ್ ಒಂದು ಮಟ್ಟಿನ ಯಶಸ್ಸು ಸಾಧಿಸಿತು. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಕೇಂದ್ರ ಸಚಿವರನ್ನಾಗಿ ಮಾಡಿರುವುದು ಪ್ರಾದೇಶಿಕ ಪಕ್ಷಕ್ಕೆ ಅಸ್ತಿತ್ವದ ಬಿಕ್ಕಟ್ಟನ್ನು ತಡೆಯಲು ಸಹಾಯ ಮಾಡಿತು.

ಅಸೆಂಬ್ಲಿ ಉಪಚುನಾವಣೆಯಲ್ಲಿ ಅವರ ಮಗ ನಿಖಿಲ್ ಅವರ ಸೋಲು ಕುಟುಂಬಕ್ಕೆ ಹಿನ್ನಡೆಯಾಗಿದೆ, ಅವರನ್ನು ಚುನಾವಣಾ ರಾಜಕೀಯಕ್ಕೆ ಮುನ್ನಲೆಗೆ ತರುವ ಪ್ರಯತ್ನಗಳಿಗೆ ಹಿನ್ನಡೆಯಾಗಿದೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಂದಿನ ಸಂಸದ ಹಾಗೂ ಜೆಡಿಎಸ್-ಬಿಜೆಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದಲ್ಲಿ ಜೆಡಿಎಸ್ ದೊಡ್ಡ ಬಿಕ್ಕಟ್ಟನ್ನು ಎದುರಿಸಿತ್ತು. ಪ್ರಜ್ವಲ್ ಅವರು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

Vidhana Saudha
ಹಿನ್ನೋಟ 2024: ಭಾರೀ ಮಳೆ, ಭೂಕುಸಿತ, ಪ್ರವಾಹಕ್ಕೆ ಸುದ್ದಿಯಾದ ಕರ್ನಾಟಕ

ಲೋಕಸಭೆ ಚುನಾವಣೆಗೆ ಎರಡನೇ ಹಂತದ ಪ್ರಚಾರವು ಉತ್ತುಂಗದಲ್ಲಿರುವಾಗ ಮೊದಲ ಹಂತದ ಲೋಕಸಭಾ ಚುನಾವಣೆಯ ಅಂತ್ಯದ ವೇಳೆಗೆ ವಿಡಿಯೊಗಳು ವೈರಲ್ ಆಗಿದ್ದವು. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್‌ ಪಕ್ಷದ ಭದ್ರಕೋಟೆಯಾದ ಹಾಸನದಲ್ಲಿ ಸೋತರು. ನಂತರ ಬಂಧಿಸಿ ಜೈಲಿಗೆ ಕಳುಹಿಸಲಾಯಿತು.

ಪ್ರಕರಣದಲ್ಲಿ ಪ್ರಜ್ವಲ್ ಅವರ ತಂದೆ, ಶಾಸಕ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನೂ ಬಂಧಿಸಲಾಗಿತ್ತು. ಆಘಾತಕಾರಿ ಸಂಗತಿಯೆಂದರೆ, ವ್ಯಕ್ತಿಯೊಬ್ಬನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಜ್ವಲ್ ಸಹೋದರ ಮತ್ತು ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿದೆ. ದೇವೇ ಗೌಡರ ಕುಟುಂಬ ಹಾಗೂ ಜೆಡಿಎಸ್ ಗೆ ಇದು ಗಂಭೀರ ಬಿಕ್ಕಟ್ಟಿನ ಕಾಲ. ಸ್ವಲ್ಪ ಮಟ್ಟಿಗೆ ಕುಮಾರಸ್ವಾಮಿ ಪರಿಸ್ಥಿತಿಯನ್ನು ಪಾರು ಮಾಡಿದರು.

ಬಿಜೆಪಿಗೂ 2024 ಸವಾಲಿನ ವರ್ಷವಾಗಿತ್ತು. ಹಲವು ವಿಚಾರಗಳಲ್ಲಿ ಸಿದ್ದರಾಮಯ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಯಶಸ್ವಿಯಾಗಿದ್ದರೂ ಆಂತರಿಕ ಬಿಕ್ಕಟ್ಟು ಪಕ್ಷವನ್ನು ಕಾಡಿತು. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಾಯಕತ್ವದ ವಿರುದ್ಧ ಹಲವು ಹಿರಿಯ ನಾಯಕರು ಬಹಿರಂಗವಾಗಿ ಬಂಡಾಯವೆದ್ದರು. ಆಂತರಿಕ ಬಿಕ್ಕಟ್ಟು ಬೀದಿಗೆ ಬಿದ್ದು ಪಕ್ಷದ ಶಿಸ್ತು ನೀರುಪಾಲಾಯಿತು.

ಬಿಜೆಪಿ ಆಡಳಿತದಲ್ಲಿ ಕೋವಿಡ್ -19 ಸಾಂಕ್ರಾಮಿಕ ನಿರ್ವಹಣೆಯಲ್ಲಿನ ಅಕ್ರಮಗಳ ಕುರಿತು ಸರ್ಕಾರವು ತನಿಖೆಯನ್ನು ಪ್ರಾರಂಭಿಸಿದರೆ, ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಮುನಿರತ್ನ ನಾಯ್ಡು ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲಾಯಿತು.

ವರ್ಷದ ಕೊನೆಯಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ತೀವ್ರ ವಾಗ್ದಾಳಿಯಲ್ಲಿ ಪರಸ್ಪರ ತೊಡಗಿದವು. ವರ್ಷ ಮುಗಿಯುತ್ತಿರುವ ಹೊತ್ತಿನಲ್ಲಿ ರಾಜ್ಯ ರಾಜಕೀಯ ನೀರಸವಾಗಿ ತೋರದೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಹಲವು ವಾದ-ವಿವಾದಗಳಿಂದ ಸುದ್ದಿಯಾದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com