ಶಿವಮೊಗ್ಗ: ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರ ಜಾತಿ ಬಗ್ಗೆ ಕೆಣಕಿದ್ದರು. ಇದಕ್ಕೆ ತಿರುಗೇಟು ಎಂಬಂತೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಹಿಂದುಳಿದ ಮೊರ್ಚಾದಿಂದ ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ, ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ನರೇಂದ್ರ ಮೋದಿಯವರ ಬಗ್ಗೆ ರಾಹುಲ್ ಗಾಂಧಿ ಮಾತನಾಡುತ್ತಾರೆ. ರಾಹುಲ್ ಗಾಂಧಿಗೆ ಎಷ್ಟು ಜ್ಞಾನವಿದೆ ಎನ್ನುವುದು ಪರೀಕ್ಷೆ ಮಾಡಬೇಕಿದೆ. ಕಾಂಗ್ರೆಸ್ ನಾಯಕರೇ ರಾಹುಲ್ ಗಾಂಧಿಯವರಿಗೆ ಒಂದು ಕ್ಲಾಸ್ ತಗೊಳಿ ಎಂದರು.
ಇಡೀ ಪ್ರಪಂಚದ ನಾಯಕ ನರೇಂದ್ರ ಮೋದಿ. ದೇಶದ ಜನ ಪ್ರಧಾನಿಗಳ ಜಾತಿ ನೋಡಿಲ್ಲ. ರಾಹುಲ್ ಗಾಂಧಿ ನೀವ್ ಯಾವ ಜಾತಿ. ಮಿಶ್ರತಳಿ, ಬೆರಕೆನಾ? ಇದನ್ನು ನಾನು ಹೇಳುತ್ತಿಲ್ಲ ಸಾರ್ವಜನಿಕರು ಹೇಳುತ್ತಿದ್ದಾರೆ. ನಿಮ್ಮ ಜಾತಿ ಯಾವುದು ಎಂದು ದೇಶದ ಜನಕ್ಕೆ ನೀವು ಹೇಳಬೇಕು. ನಿಮ್ಮಜ್ಜಿ ಇಂದಿರಾಗಾಂಧಿ, ನಿಮ್ಮಜ್ಜ ಪಿರೋಜ್ ಖಾನ್ ಹಾಗಾದರೇ ನಿಮ್ಮ ಜಾತಿ ಯಾವುದು ರಾಹುಲ್ ಗಾಂಧಿಯವರೇ ಎಂದು ಕಿಡಿಕಾರಿದರು.
Advertisement