ಮಂಡ್ಯ: ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮಂಡ್ಯ ಕ್ಷೇತ್ರಕ್ಕಾಗಿ ಪಟ್ಟು ಹಿಡಿದಿದೆ. ಈ ಮಧ್ಯೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮಂಡ್ಯದಿಂದಲೇ ಬಿಜೆಪಿ ಟಿಕೆಟ್ ಪಡೆಯುವ ವಿಶ್ವಾಸವಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸೋಮವಾರ ಹೇಳಿದ್ದಾರೆ.
ಸುಮಲತಾ ಅವರು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು ಮತ್ತು ನಂತರ ಬಿಜೆಪಿಗೆ ಬೆಂಬಲ ನೀಡಿದ್ದರು.
ಸುಮಲತಾ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಮೊಮ್ಮಗ ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದರು.
ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸುವ ಮೂಲಕ ಬಿಜೆಪಿ ಮಹಿಳೆಯರಿಗೆ ಆದ್ಯತೆ ನೀಡುತ್ತದೆ ಎಂಬುದನ್ನು ತೋರಿಸಿಕೊಟ್ಟಿದೆ ಎಂದು ಮಂಡ್ಯ ಸಂಸದೆ ಹೇಳಿದ್ದಾರೆ.
ನಾನು ಬಿಜೆಪಿ ಟಿಕೆಟ್ ಪಡೆಯುವ ಬಗ್ಗೆ ಯಾವುದೇ ಅನುಮಾನವಿಲ್ಲ ಮತ್ತು ಮಂಡ್ಯ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳುವುದಕ್ಕಾಗಿ ನನ್ನ ಹೋರಾಟ ನಡೆದಿದೆ. ಮಂಡ್ಯದಿಂದ ನನಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಸುಮಲತಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
Advertisement