ಬಿಜೆಪಿಯಲ್ಲಿನ ಎಲ್ಲಾ ಸಮಸ್ಯೆಗಳು ಒಂದು ತಿಂಗಳಲ್ಲಿ ಬಗೆಹರಿಯಲಿದೆ: ವಿಪಕ್ಷ ನಾಯಕ ಆರ್.ಅಶೋಕ

ಒಂದು ತಿಂಗಳಲ್ಲಿ ಬಿಜೆಪಿಯಲ್ಲಿನ ಎಲ್ಲಾ ಸಮಸ್ಯೆಗಳು ಬಗೆಹರಿಯಲಿದ್ದು, ಲೋಕಸಭೆ ಚುನಾವಣೆಯನ್ನು ಪಕ್ಷ ಒಗ್ಗಟ್ಟಿನಿಂದ ಹೋರಾಟ ನಡೆಸಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಭಾನುವಾರ ಹೇಳಿದರು.
ವಿಪಕ್ಷ ನಾಯಕ ಆರ್.ಅಶೋಕ್
ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಒಂದು ತಿಂಗಳಲ್ಲಿ ಬಿಜೆಪಿಯಲ್ಲಿನ ಎಲ್ಲಾ ಸಮಸ್ಯೆಗಳು ಬಗೆಹರಿಯಲಿದ್ದು, ಲೋಕಸಭೆ ಚುನಾವಣೆಯನ್ನು ಪಕ್ಷ ಒಗ್ಗಟ್ಟಿನಿಂದ ಹೋರಾಟ ನಡೆಸಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಭಾನುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿ.ಸೋಮಣ್ಣ ಅವರೊಂದಿಗೆ ಈಗಾಗಲೇ ಮಾತನಾಡಿದ್ದು, ಮಾತುಕತೆ ಸೋಮಣ್ಣ ಅವರು ಚುನಾವಣಾ ಸೋಲಿನ ನೋವನ್ನು ಹಂಚಿಕೊಂಡಿದ್ದಾರೆ, ಜನವರಿ 4ರಂದು ಮತ್ತೊಮ್ಮೆ ಭೇಟಿ ಮಾಡುತ್ತೇನೆಂದು ಹೇಳಿದರು.

ಕೋವಿಡ್ ವೇಳೆ ಬಿಜೆಪಿ ಹಗರಣ ನಡೆಸಿದೆ ಎಂಬ ಪಕ್ಷದ ಶಾಸಕ ಬಸನಗೌಡ ಯತ್ನಾಳ್ ಅವರು ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಸೋಲು, ಹತಾಶರಾದ ಸಮಯದಲ್ಲಿ ಇಂತಹ ಹೇಳಿಕೆಗಳು ಸಹಜ ಎಂದು ತಿಳಿಸಿದರು.

“ಯಶಸ್ಸನ ವೇಳೆ ಹಲವರು ನಮ್ಮೊಂದಿಗಿರುತ್ತಾರೆ. ಆದರೆ, ಸೋಲಿನ ಸಮಯದಲ್ಲಿ ಯಾರೂ ಮುಂದೆ ಬರುವುದಿಲ್ಲ. ಯತ್ನಾಳ್ ಅವರ ಹೇಳಿಕೆಯನ್ನು ಕೇಂದ್ರ ನಾಯಕರು ಗಮನಿಸಿದ್ದಾರೆಂದರು.

ಕಳೆದ 30 ವರ್ಷಗಳಿಂದ ರಾಮಮಂದಿರ ಬಿಜೆಪಿಯ ಪ್ರಣಾಳಿಕೆಯಲ್ಲಿದೆ. ಅದರಂತೆ ಪಕ್ಷವು ಮಂದಿರವನ್ನು ನಿರ್ಮಿಸಿದೆ. ರಾಮ ಮಂದಿರ ಮಾತ್ರವಲ್ಲ, ರಾಮರಾಜ್ಯ ಸ್ಥಾಪನೆಗೂ ನಮ್ಮ ಆಶಯವಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com