ಸಿ.ಟಿ.ರವಿ, ಎಚ್.ಡಿ.ಕುಮಾರಸ್ವಾಮಿ ಭೇಟಿ: ಲೋಕಸಭೆ ಚುನಾವಣೆ ರಣತಂತ್ರ ಕುರಿತು ಚರ್ಚೆ

ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭಾನುವಾರ ಬಿಡದಿಯಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಭೇಟಿ ಮಾಡಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಹೇಗೆ ಒಗ್ಗೂಡಿ ಕೆಲಸ ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ. 
ಸಿಟಿ ರವಿ, ಕುಮಾರಸ್ವಾಮಿ
ಸಿಟಿ ರವಿ, ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭಾನುವಾರ ಬಿಡದಿಯಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಭೇಟಿ ಮಾಡಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಹೇಗೆ ಒಗ್ಗೂಡಿ ಕೆಲಸ ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ. 

ಎಲ್ಲಾ ಬಿಜೆಪಿ-ಜೆಡಿಎಸ್ ನಾಯಕರು ಕುಳಿತು ಸೌಹಾರ್ದಯುತವಾಗಿ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. “ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿಲ್ಲ. ಆದರೆ ಹಿತೈಷಿಗಳು ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಿಂದ ಸ್ಪರ್ಧಿಸಬೇಕೆಂದು ಬಯಸುತ್ತಿದ್ದಾರೆ. ಏನೆಲ್ಲಾ ಬೆಳವಣಿಗೆ ಆಗುತ್ತದೆಯೋ ನೋಡೋಣ ಎಂದರು. 

ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡರಿಂದ ತೆರವಾಗುವ ಸಾಧ್ಯತೆಯಿರುವ ಒಕ್ಕಲಿಗ ಭದ್ರಕೋಟೆಯಾದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ರವಿ ಸ್ಪರ್ಧಿಸಲು ಯೋಜಿಸಿರುವ ಕಾರಣ ಅವರ ಸಭೆ ಮಹತ್ವದ್ದಾಗಿತ್ತು. ರವಿ ಮತ್ತು ಕುಮಾರಸ್ವಾಮಿ, ಒಕ್ಕಲಿಗರಾಗಿದ್ದು, ಹಲವು ದಶಕಗಳಿಂದ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಚಿಕ್ಕಮಗಳೂರು ಮಾಜಿ ಶಾಸಕ ರವಿ ಅವರಿಗೆ ಕುಮಾರಸ್ವಾಮಿ ಈ ಹಿಂದೆ ಸಹಾಯ ಮಾಡಿದ್ದು, ಅವರ ಭೇಟಿ ಹಿಂದೆ ಅಚ್ಚರಿಯಿಲ್ಲ. ಆದರೆ ಅವರ ಸಂಬಂಧ ಮುಂದುವರಿಕೆಯಾಗಿದೆ ಎಂದು ಜೆಡಿಎಸ್ ಮುಖಂಡರೊಬ್ಬರು ಹೇಳಿದ್ದಾರೆ.

ಅಗತ್ಯವಿದ್ದರೆ ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಭೇಟಿ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಅವರ ಬೆಂಬಲಿಗ ಸಚ್ಚಿದಾನಂದ ಅವರನ್ನು ಭೇಟಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ವಾಸ್ತವತೆಯ ಬಗ್ಗೆ ಚರ್ಚಿಸಿದ್ದಾರೆ. ನಿಖಿಲ್ 2019 ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ವಿರುದ್ಧ ಸೋತಿದ್ದರು. “ಅಗತ್ಯವಿದ್ದರೆ  ಸುಮಲತಾ ಅವರನ್ನು ಭೇಟಿಯಾಗುತ್ತೇನೆ. ಇದರಲ್ಲಿ ತಪ್ಪೇನಿದೆ? ಸುಮಲತಾ ಬಿಜೆಪಿಯಲ್ಲೇ ಮುಂದುವರಿದರೆ ನಮ್ಮ ಮಿತ್ರಪಕ್ಷದ ಪರವಾಗಿ ಅವರನ್ನು ಭೇಟಿ ಮಾಡುತ್ತೇನೆ ಎಂದರು.

ಜೆಡಿಎಸ್ ಮುಗಿಸಲು ಸಿಎಂ, ಡಿಸಿಎಂ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೆಡಿಎಸ್ ಮುಗಿಸುವ ಉದ್ದೇಶ ಹೊಂದಿದ್ದಾರೆ ಎಂದು ಕುಮಾರಸ್ವಾಮಿ  ಹೇಳಿದರು. ''ಜೆಡಿಎಸ್ ಶಾಸಕರ ಬಾಗಿಲು ತಟ್ಟುತ್ತಿರುವ ಇಬ್ಬರು ನಾಯಕರ ಅಜೆಂಡಾ ಜೆಡಿಎಸ್  ಕೊನೆಗಾಣಿಸುವುದು. ನಮ್ಮ ಶಾಸಕರು ತಮ್ಮ ಕ್ಷೇತ್ರಗಳ ಸಮಸ್ಯೆಗಳಿಗೆ ಹೋದಾಗ ಪಕ್ಷ ತೊರೆದು ಕಾಂಗ್ರೆಸ್ ಸೇರುವಂತೆ ಕೇಳಿಕೊಳ್ಳುತ್ತಿದ್ದಾರೆ. ಹಣಕಾಸು ನೆರವು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಇಲ್ಲ, ನಾಯಕರಾಗಿ ಬೆಳೆಯಲು ಕಾರಣರಾದ ಪಕ್ಷವನ್ನು ಮುಗಿಸಲು ಯತ್ನಿಸುತ್ತಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com