'ಕಷ್ಟಕಾಲದಲ್ಲಿ ಬೆನ್ನಿಗೆ ನಿಂತ ಕುಮಾರಣ್ಣಾ ನಿಮಗೆ ಥ್ಯಾಂಕ್ಸ್': ಮಾಜಿ ಸಿಎಂ ಕಾಲಿಗೆ ನಮಸ್ಕರಿಸಿದ ಪ್ರತಾಪ್ ಸಿಂಹ!

ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಇಂದು ಸೋಷಿಯಲ್ ಮೀಡಿಯೊವೊಂದರಲ್ಲಿ ಫೋಟೋ ಹಾಕಿ ಬರೆದಿರುವ ಸಾಲುಗಳು ಭಾರೀ ವೈರಲ್ ಆಗಿದೆ. ಅಷ್ಟೇ ಕುತೂಹಲ ಮೂಡಿಸಿದೆ ಕೂಡ.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಾಲಿಗೆ ನಮಸ್ಕರಿಸಿದ ಸಂಸದ ಪ್ರತಾಪ್ ಸಿಂಹ
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಾಲಿಗೆ ನಮಸ್ಕರಿಸಿದ ಸಂಸದ ಪ್ರತಾಪ್ ಸಿಂಹ
Updated on

ಮೈಸೂರು/ಬಿಡದಿ: ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಇಂದು ಸೋಷಿಯಲ್ ಮೀಡಿಯೊವೊಂದರಲ್ಲಿ ಫೋಟೋ ಹಾಕಿ ಬರೆದಿರುವ ಸಾಲುಗಳು ಭಾರೀ ವೈರಲ್ ಆಗಿದೆ. ಅಷ್ಟೇ ಕುತೂಹಲ ಮೂಡಿಸಿದೆ ಕೂಡ.

ಇತ್ತೀಚೆಗೆ ಹಾಸನ ಬಳಿ ಮರಗಳ ಮಾರಣಹೋಮ ವಿಚಾರದಲ್ಲಿ ಪ್ರತಾಪ್ ಸಿಂಹ ಅವರ ಸೋದರನ ಬಂಧನವಾಗಿ ಬಿಡುಗಡೆಯಾಗಿತ್ತು. ಲೋಕಸಭೆಯೊಳಗೆ ಪ್ರತಾಪ್ ಸಿಂಹ ಹೆಸರಿನಲ್ಲಿ ಪಾಸ್ ಗಿಟ್ಟಿಸಿಕೊಂಡು ಒಳನುಗ್ಗಿ ದಾಂಧಲೆ ನಡೆಸಿದ್ದು, ಮೈಸೂರು-ಕೊಡಗು ಕ್ಷೇತ್ರದ ಮುಂಬರುವ ಲೋಕಸಭೆ ಚುನಾವಣೆ ಸಂಬಂಧ ಹೀಗೆ ಹಲವು ವಿಷಯಗಳಿಗೆ ಸಂಸದ ಪ್ರತಾಪ್ ಸಿಂಹ ಸುದ್ದಿಯಲ್ಲಿರುತ್ತಾರೆ.

ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡದ್ದು ಗೊತ್ತೇ ಇದೆ. ಮೈಸೂರು, ಮಂಡ್ಯ ಕ್ಷೇತ್ರಗಳ ಟಿಕೆಟ್ ಗೆ ಜೆಡಿಎಸ್ ಆಕಾಂಕ್ಷಿಯಾಗಿದೆ ಎಂಬ ವದಂತಿ ಕೂಡ ಇದೆ. 

ಸಂಸದ ಪ್ರತಾಪ್ ಸಿಂಹ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಇಂದು ಬೆಳಗ್ಗೆ ಅವರ ಬಿಡದಿ ತೋಟದ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಬ್ಬರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಕುಮಾರಸ್ವಾಮಿಯನ್ನು ಭೇಟಿ ಮಾಡಿರುವ ಪ್ರತಾಪ್ ಸಿಂಹ, ಅವರ ಕಾಲಿಗೆ ನಮಸ್ಕರಿಸಿ ಕಷ್ಟಕಾಲದಲ್ಲಿ ಸತ್ಯಸಂಗತಿಯನ್ನು ಜನರ ಮುಂದಿಟ್ಟು ಬೆನ್ನಿಗೆ ನಿಂತ ನಿಮಗೆ ಧನ್ಯವಾದ ಕುಮಾರಣ್ಣ ಎಂದು ಹೇಳಿದ್ದಲ್ಲದೆ ತಮ್ಮ ಭಾವನೆಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಕೂಡ ಹಂಚಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com