ಲೋಕಸಭಾ ಚುನಾವಣೆ: ಜನವರಿ 19 ರಂದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೇ 19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೇ 19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಜ. 19 ರಂದು ನಡೆಯುವ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಬಗ್ಗೆ ಚರ್ಚೆ ಮಾಡಲಾಗುವುದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ ಎಂದರು. 

ಶೀಘ್ರ ನಿಗಮ ಮಂಡಳಿ ನೇಮಕ ಪಟ್ಟಿ ಪ್ರಕಟ: ಸಂಕ್ರಾಂತಿ ಉಡುಗೊರೆಯಾಗಿ ನಿಗಮ ಮಂಡಳಿ ನೇಮಕ ಆಗುತ್ತದೆಯೇ ಎಂದು ಕೇಳಿದಾಗ, "ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ ಎಂದು ತಿಳಿಸಿದರು.

ಅನಂತ ಕುಮಾರ್ ಹೆಗಡೆಗೆ ಮಾನಸಿಕ ಸ್ಥಿರತೆ ಇಲ್ಲ:

ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, "ಮಾನಸಿಕ ಸ್ಥಿಮಿತ ಇರುವವರು ಈ ರೀತಿ ಮಾತನಾಡುವುದಿಲ್ಲ. ಅವರ ಮಾತು ತಪ್ಪು ಎಂದು ಅವರ ನಾಯಕರುಗಳಿಗೆ ಅರ್ಥವಾಗಿರುವುದು ಉತ್ತಮ ಬೆಳವಣಿಗೆ. ಅನಂತ ಕುಮಾರ್ ಹೆಗಡೆ ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ" ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com