ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಸ್ಥಾನ: ಪರಾಮರ್ಶಿಸಿ ತಪ್ಪು ಸರಿಪಡಿಸಿಕೊಳ್ಳುತ್ತೇವೆ- ಡಿ ಕೆ ಶಿವಕುಮಾರ್

ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಅತ್ಯುತ್ತಮ ಅಭ್ಯರ್ಥಿಗಳನ್ನು ನಾವು ಕಣಕ್ಕಿಳಿಸಿದ್ದೆವು. ಎಲ್ಲಾ ಕಡೆ ಒಟ್ಟಾಗಿ ಚುನಾವಣೆ ನಡೆಸಲಾಗಿತ್ತು. ಆದರೆ ಜನರ ಮಧ್ಯೆ ಗುಪ್ತಗಾಮಿನಿಯಲ್ಲಿ ಯಾವ ವಿಚಾರ ಪರಿವರ್ತನೆ ಮಾಡಿದೆ ಎಂಬುದನ್ನು ಪತ್ತೆ ಹಚ್ಚಬೇಕು.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿ ಎಡವಿದೆ ಎಂದು ಪರಾಮರ್ಶನೆ ನಡೆಸಿ, ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಎದುರಿಸಲು ಸಿದ್ದತೆ ಮಾಡಿಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿ ಆವರಣದಲ್ಲಿ ಮಾತನಾಡಿದ ಅವರು, ಲೋಕಸಭೆಯಲ್ಲಿ 1 ಸ್ಥಾನ ಹೊಂದಿದ್ದವರು ಈಗ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೇವೆ. ನಾವು 14-15 ಸೀಟುಗಳನ್ನು ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಎಲ್ಲಿ ಎಡವಿದ್ದೇವೆ ಎಂದು ಎಐಸಿಸಿಯ ಸಮಿತಿ ಸಮ್ಮುಖದಲ್ಲಿ ಇಂದು ಪರಾಮರ್ಶನೆ ನಡೆಯಲಿದೆ. ಕೇವಲ ಕರ್ನಾಟಕ ಮಾತ್ರವಲ್ಲದೇ ದೇಶದೆಲ್ಲೆಡೆ ಈ ಪ್ರಕ್ರಿಯೆ ಮಾಡಲಾಗುತ್ತಿದೆ. ನಾನು ಕೂಡ ನಾಲ್ಕು ವಿಭಾಗಗಳ ವರದಿ ಕಳುಹಿಸಿಕೊಡಲಿದ್ದೇನೆ. ನಾನು ಹಾಗೂ ಮುಖ್ಯಮಂತ್ರಿಗಳು ಸೇರಿ ನಮ್ಮ ನಾಯಕರ ಜತೆ ಚರ್ಚೆ ಮಾಡಿ ಪರಾಮರ್ಶೆ ಮಾಡುತ್ತೇವೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಅತ್ಯುತ್ತಮ ಅಭ್ಯರ್ಥಿಗಳನ್ನು ನಾವು ಕಣಕ್ಕಿಳಿಸಿದ್ದೆವು. ಎಲ್ಲಾ ಕಡೆ ಒಟ್ಟಾಗಿ ಚುನಾವಣೆ ನಡೆಸಲಾಗಿತ್ತು. ಆದರೆ ಜನರ ಮಧ್ಯೆ ಗುಪ್ತಗಾಮಿನಿಯಲ್ಲಿ ಯಾವ ವಿಚಾರ ಪರಿವರ್ತನೆ ಮಾಡಿದೆ ಎಂಬುದನ್ನು ಪತ್ತೆ ಹಚ್ಚಬೇಕು. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪರಿಣಾಮಕಾರಿಯಾಗಲಿದೆ ಎಂದು ನಾವು ಮೊದಲೇ ಅಂದಾಜಿಸಿದ್ದೆವು. ಮುಂದಿನ ದಿನಗಳಲ್ಲೂ ಅವರು ಒಟ್ಟಾಗಿರುತ್ತಾರೆ ಎಂದು ನಮಗೆ ಗೊತ್ತಿದೆ. ಅವರು ಹಾಗೆಯೇ ಇರಲಿ. ಅವರು ಒಟ್ಟಾಗಿದ್ದರೂ ನಾವು ಹೇಗೆ ಸಿದ್ಧತೆ ಮಾಡಿಕೊಳ್ಳಬೇಕೋ ಮಾಡುತ್ತೇವೆ ಎಂದು ಹೇಳಿದ್ದಾರೆ.

ಡಿ.ಕೆ ಶಿವಕುಮಾರ್
ಲೋಕಸಭೆ ಚುನಾವಣೆ ಸೋಲಿನ ಪರಾಮರ್ಶೆ: ಬೆಂಗಳೂರಿಗೆ ಕಾಂಗ್ರೆಸ್ ಕಾರ್ಯಪಡೆ ಆಗಮನ

ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿಪಿ ಟಿಎಸ್ ಪಿ ಅನುದಾನ ಬಳಸಿರುವುದಕ್ಕೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗವು ರಾಜ್ಯ ಮುಖ್ಯಕಾರ್ಯದರ್ಶಿಗಳಿಗೆ ನೋಟೀಸ್ ಜಾರಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್ “ಇಡೀ ದೇಶದಲ್ಲಿ ಆಂಧ್ರ ಪ್ರದೇಶದ ನಂತರ ಕರ್ನಾಟಕದಲ್ಲಿ ನಾವು ಪರಿಶಿಷ್ಟರ ಕಲ್ಯಾಣಕ್ಕಾಗಿ ಪ್ರತ್ಯೇಕ ಅನುದಾನ ನೀಡಿ ಬಳಸಲು ಕಾಯ್ದೆ ತಂದಿದ್ದೇವೆ.

ರಾಷ್ಟ್ರೀಯ ಆಯೋಗ ನೊಟೀಸ್ ಜಾರಿ ಮಾಡುವುದೇ ಆದರೆ ಅದು ಕೇಂದ್ರ ಸರ್ಕಾರಕ್ಕೆ ನೀಡಬೇಕು. ಈ ಅನುದಾನವನ್ನು ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಅವರಿಗೆ ವಿನಿಯೋಗಿಸುತ್ತಿದೆ. ಇದಕ್ಕೆ ನೊಟೀಸ್ ನೀಡಿರುವ ರಾಷ್ಟ್ರೀಯ ಆಯೋಗಕ್ಕೆ ನಾಚಿಕೆಯಾಗಬೇಕು. ಎಸ್ ಸಿಪಿ, ಟಿಎಸ್ ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com