Karnataka MLC Election 2024: ಕಾಂಗ್ರೆಸ್​​ನಿಂದ ಅಚ್ಚರಿಯ ಅಭ್ಯರ್ಥಿ, ಯಾರು ಈ Bilkis Bhanu?

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಅಚ್ಚರಿ ರೀತಿಯಲ್ಲಿ ಶಿವಮೊಗ್ಗದ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಿಲ್ಕಿಸ್ ಭಾನು ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇಷ್ಟಕ್ಕೂ ಯಾರು ಈ ಬಿಲ್ಕಿಸ್ ಭಾನು..?
Bilkis Bhanu
ಕಾಂಗ್ರೆಸ್ ಅಭ್ಯರ್ಥಿ ಬಿಲ್ಕಿಸ್ ಭಾನು
Updated on

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಅಚ್ಚರಿ ರೀತಿಯಲ್ಲಿ ಶಿವಮೊಗ್ಗದ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಿಲ್ಕಿಸ್ ಭಾನು ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇಷ್ಟಕ್ಕೂ ಯಾರು ಈ ಬಿಲ್ಕಿಸ್ ಭಾನು..?

ಹೌದು.. ವಿಧಾನ ಪರಿಷತ್ ಸ್ಥಾನಕ್ಕೆ ಕಾಂಗ್ರೆಸ್ (Congress)​ ಇಂದು ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಏಳು ಸ್ಥಾನಗಳ ಜೊತೆಗೆ ಮುಂಬರುವ ಪರಿಷತ್ ಉಪ ಚುನಾವಣೆಗೂ ಕೂಡ ಅಭ್ಯರ್ಥಿ ಘೋಷಿಸಲಾಗಿದೆ.

Bilkis Bhanu
ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ನ 7 ಅಭ್ಯರ್ಥಿಗಳ ಪಟ್ಟಿ ಪ್ರಕಟ; ಯತೀಂದ್ರ, ಬಿಲ್ಕಿಸ್ ಬಾನೊ ಸ್ಪರ್ಧೆ!

ಅಲ್ಪಸಂಖ್ಯಾತ ಕೋಟಾದಡಿ ಶಿವಮೊಗ್ಗದ ಮಾಜಿ ಜಿಪಂ ಅಧ್ಯಕ್ಷೆ ಬಿಲ್ಕಿಸ್ ಭಾನು (Bilkis Bhanu) ಅವರಿಗೆ ಕಾಂಗ್ರೆಸ್​​ ವಿಧಾನ ಪರಿಷತ್​ಗೆ ಟಿಕೆಟ್​ ನೀಡಲಾಗಿದೆ. ಆ ಮೂಲಕ ಹೊಸ ಮುಖ ಮತ್ತು ಮಹಿಳೆಗೆ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್​ ಅಚ್ಚರಿ ಅಭ್ಯರ್ಥಿಯ ಆಯ್ಕೆ ಮಾಡಿದೆ.

ಮೂಲತಃ ಬಿಲ್ಕಿಸ್ ಭಾನು ಅವರು ಈ ಹಿಂದೆ ಜಾತ್ಯಾತೀತ ಜನತಾದಳ ಪಕ್ಷದಲ್ಲಿ ಮೊದಲು ಗುರುತಿಸಿಕೊಂಡಿದ್ದರು. ರಾಜಕೀಯ ಸೇರುವ ಮುನ್ನ ಶಿಕ್ಷಕಿಯಾಗಿದ್ದರು. ಜೆಡಿಎಸ್ ನಲ್ಲಿ ಇದ್ದಾಗಲೇ ಶಿವಮೊಗ್ಗ ಜಿಲ್ಲಾ ಪಂಚಾಯತ್​​ಗೆ 1994-95 ರಲ್ಲಿ ಜಿಲ್ಲಾ ಪಂಚಾಯತ್​ ಅಧ್ಯಕ್ಷರಾಗಿದ್ದರು.

ಬಳಿಕ 2014 ರಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು. ಭದ್ರಾವತಿ ತಾಲ್ಲೂಕಿನ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದ್ದ ಅವರು ಶಿಕ್ಷಕಿಯಾಗಿ ತಮ್ಮ ಜೀವನವನ್ನು ಆರಂಭಿಸಿದ್ದರು. ನಂತರ ರಾಜಕೀಯವಾಗಿ ತೊಡಗಿಸಿಕೊಂಡು ಪಕ್ಷದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಇದೀಗ ಮುಸ್ಲಿಂ ಕೋಟಾದಲ್ಲಿ ಶಿವಮೊಗ್ಗ ಜಿಲ್ಲೆಯ ಮಹಿಳೆಯನ್ನು ಎಂಎಲ್​​ಸಿ ಅಭ್ಯರ್ಥಿ ಆಗಿ ಪಕ್ಷ ಆಯ್ಕೆ ಮಾಡಿರುವುದು ವಿಶೇಷ.

ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಬಿಲ್ಕಿಸ್ ಭಾನು

ಇನ್ನು ತಮಗೆ ಎಂಎಲ್ ಸಿ ಟಿಕೆಟ್ ಘೋಷಣೆ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಲ್ಕಿಸ್ ಭಾನು ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು 'ನಾನು ಜಿಲ್ಲಾ ಪರಿಷತ್ ಸದಸ್ಯಳಾಗಿದ್ದಾಗಿನಿಂದಲೂ ತಳಮಟ್ಟದಿಂದ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ಇಂದು ನನ್ನ ಕೆಲಸದ ಮೇಲೆ ನಂಬಿಕೆ ಇಟ್ಟು ಪಕ್ಷ ಹೊಸ ಜವಾಬ್ದಾರಿ ನೀಡಿದೆ. ಇದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಬಿಲ್ಕಿಸ್ ಭಾನು ಹೇಳಿದರು.

ನಾಳೆ ಎಲ್ಲ ಅಭ್ಯರ್ಥಿಗಳೂ ನಾಮಪತ್ರ ಸಲ್ಲಿಕೆ ಮಾಡಲಿದ್ದು ಜೂನ್ 13ಕ್ಕೆ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com