ಬೆಳಗಾವಿ ಕಾಂಗ್ರೆಸ್‌ನಲ್ಲಿ ಭಿನ್ನಮತ: ಅಥಣಿಯಲ್ಲಿ ಪಕ್ಷದ ಮುನ್ನಡೆಗೆ ಸವದಿ ಸಹಾಯ ಮಾಡಿಲ್ಲ- ಸತೀಶ್ ಜಾರಕಿಹೊಳಿ

ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟವಾಗಿದ್ದು ಅಥಣಿ ಶಾಸಕ ಲಕ್ಷ್ಮಣ ಸವದಿ‌ ಚುನಾವಣೆ ವೇಳೆ ಸಹಕಾರ ನೀಡಿಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ನೇರ ಆರೋಪ ಮಾಡಿದ್ದಾರೆ
ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ
Updated on

ಬೆಳಗಾವಿ: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟವಾಗಿದ್ದು ಅಥಣಿ ಶಾಸಕ ಲಕ್ಷ್ಮಣ ಸವದಿ‌ ಚುನಾವಣೆ ವೇಳೆ ಸಹಕಾರ ನೀಡಿಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ನೇರ ಆರೋಪ ಮಾಡಿದ್ದಾರೆ.

ಬಿಜೆಪಿಯ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ ಪಕ್ಷದ ಪ್ರಿಯಾಂಕಾ ಜಾರಕಿಹೊಳಿ ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ ಬೆನ್ನಲ್ಲೇ ಚಿಕ್ಕೋಡಿ ಕಾಂಗ್ರೆಸ್‌ನಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳು ಮುನ್ನೆಲೆಗೆ ಬಂದಿವೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ, ತಮ್ಮ ಪುತ್ರಿ ಪ್ರಿಯಾಂಕಾ ಪ್ರಚಾರದ ನೇತೃತ್ವ ವಹಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಅಥಣಿ ಶಾಸಕ ಲಕ್ಷ್ಮಣ ಸವದಿ ಮತ್ತು ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್ ತಮ್ಮ ಕ್ಷೇತ್ರಗಳಲ್ಲಿ ಪಕ್ಷದ ವಿರುದ್ಧ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಲಕ್ಷ್ಮಣ ಸವದಿ
ಬೆಳಗಾವಿ: ಲಕ್ಷ್ಮಣ್ ಸವದಿ ಸಹ-ಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಮಹಿಳೆ ಸಾವು, ಇಬ್ಬರಿಗೆ ಗಾಯ

ಚಿಕ್ಕೋಡಿ ವಿಧಾನಸಭಾ ಭಾಗದಲ್ಲಿ ಪಕ್ಷದ ಎಲ್ಲ ಶಾಸಕರು ಪಕ್ಷಕ್ಕೆ ಮುನ್ನಡೆ ಸಾಧಿಸಲು ಸಹಾಯ ಮಾಡಿದ್ದಾರೆ ಆದರೆ ಸವದಿ ಮತ್ತು ತಮ್ಮಣ್ಣನವರ್ ಕ್ರಮವಾಗಿ ಅಥಣಿ ಮತ್ತು ಕುಡಚಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಲಾಭಕ್ಕಾಗಿ ಶ್ರಮಿಸಲಿಲ್ಲ ಎಂದು ಆರೋಪಿಸಿದರು.

ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಲು ಸವದಿ ಸಹಾಯ ಮಾಡಿದ್ದರೆ ಅವರೊಂದಿಗಿನ ಸಂಬಂಧ ಸೌಹಾರ್ದಯುತವಾಗಿರುತ್ತಿತ್ತು ಎಂದರು. ದುರದೃಷ್ಟವಶಾತ್ ಸವದಿ ನಿರ್ಣಾಯಕ ಹಂತದಲ್ಲಿ ತಮ್ಮೊಂದಿಗೆ ಅಂತರ ಕಾಯ್ದುಕೊಂಡಿದ್ದರು ಎಂದು ಜಾರಕಿಹೊಳಿ ಹೇಳಿದರು.

ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ಮುನ್ನಡೆ ಸಾಧಿಸಲು ಸಹಾಯ ಮಾಡುವುದಾಗಿ ಭರವಸೆ ನೀಡಿದ್ದರೂ ಸವದಿ ಅದನ್ನು ಮಾಡಲಿಲ್ಲ. ಬದಲಿಗೆ ಅಲ್ಲಿ ಕಾಂಗ್ರೆಸ್‌ನ ಮತಗಳು ಕಡಿಮೆಯಾಗಿದ್ದು, ಅಥಣಿಯಲ್ಲಿ ಕಾಂಗ್ರೆಸ್‌ ಹೇಗೆ ಹಿನ್ನಡೆ ಅನುಭವಿಸಿತು ಜನರು ಎಂದು ಆಶ್ಚರ್ಯ ಪಡುತ್ತಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com