ಜನರ ತೀರ್ಪು ಎಚ್ಚರಿಕೆ ಗಂಟೆ, ನಮ್ಮ ತಪ್ಪುಗಳನ್ನು ಪರಾಮರ್ಶಿಸಿ ಸರಿಪಡಿಸಿಕೊಳ್ಳಬೇಕು: DCM ಡಿ.ಕೆ ಶಿವಕುಮಾರ್

ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದ್ದು, ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದ್ದು, ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನ ಕುಮಾರಪಾರ್ಕ್ ಸರಕಾರಿ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು. ಲೋಕಸಭೆ ಫಲಿತಾಂಶದ ಕುರಿತ ಪರಾಮರ್ಶೆ ಬಗ್ಗೆ ಪ್ರಶ್ನಿಸಿದಾಗ, ಲೋಕಸಭಾ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲಾ ನಾಯಕರ ಜೊತೆ ಪರಾಮರ್ಶನಾ ಸಭೆ ನಡೆಸಲಾಗುವುದು. ಸೋಲು ಸೋಲೇ. ಎಲ್ಲಿ ತಪ್ಪಾಗಿದೆ, ಏಕೆ ಹೆಚ್ಚುಕಮ್ಮಿಯಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು. ಮುಂದಿನ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳ ಸಭೆ ನಡೆಸಲಾಗುವುದು. ಶೀಘ್ರವೇ ಇದಕ್ಕೆ ದಿನಾಂಕ ನಿಗದಿ ಮಾಡುತ್ತೇವೆ. ಎಲ್ಲೆಲ್ಲಿ ಏನಾಗಿದೆ ಎನ್ನುವ ಸತ್ಯಶೋಧನೆ ಹಾಗೂ ಪರಿಹಾರ ಹುಡುಕುವ ಕೆಲಸ ಆಗಬೇಕು ಎಂದು ತಿಳಿಸಿದರು.

ಕರ್ನಾಟಕ, ಹಿಮಾಚಲ ಪ್ರದೇಶದ ಚುನಾವಣೆಯ ಬಗ್ಗೆ ಎಐಸಿಸಿ ಅಧ್ಯಕ್ಷರು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಕೇಳಿದಾಗ ನಾವು 14- 15 ಸ್ಥಾನಗಳನು ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿತ್ತು. ಆದರೆ ನಿರೀಕ್ಷಿತ ಸ್ಥಾನಗಳನ್ನು ಗಳಿಸಲು ನಾವು ವಿಫಲರಾಗಿದ್ದೇವೆ. ಜನರ ತೀರ್ಪಿಗೆ ನಾವು ತಲೆಬಾಗಲೇಬೇಕು ಎಂದರು.

ಡಿ.ಕೆ ಶಿವಕುಮಾರ್
ಯಾರ್ಯಾರು ಏನೆಲ್ಲಾ ಮಾಡಿದ್ದಾರೆ, ಎಲವನ್ನೂ ದೇವರು ನೋಡ್ಕೊತಾನೆ: ಆತ್ಮಾವಲೋಕನ ಸಭೆಯಲ್ಲಿ ಡಿಕೆ ಸುರೇಶ್ ಕಣ್ಣೀರು

ಪ್ರಮುಖ ನಾಯಕರ ಊರುಗಳಲ್ಲೇ ಮತ ಗಳಿಕೆಯಾಗಿಲ್ಲ. ನನ್ನ ಕ್ಷೇತ್ರದ ಅನೇಕ ನಾಯಕರ ಊರಿನಲ್ಲಿ ನಿರೀಕ್ಷಿತ ಮಟ್ಟಕ್ಕೆ ಮತಗಳು ಬಂದಿಲ್ಲ. ಇದಕ್ಕೆ ಏನಾದರೂ ಒಂದು ಸಬೂಬು ಹೇಳಿದರೆ ಯಾರು ಕೇಳುವುದಿಲ್ಲ. ಆದ ಕಾರಣ ಪರಿಶೀಲನೆ ನಡೆಸುತ್ತೇವೆ ಎಂದು ತಿಳಿಸಿದರು.

ಸೋಲಿಗೆ ಒಂದಷ್ಟು ಶಾಸಕರು ಕಾರಣ ಎಂದು ಸಚಿವರುಗಳು ದೂರು ನೀಡಿದ್ದಾರೆ ಎಂದು ಕೇಳಿದಾಗ “ನನ್ನ ಬಳಿ ಬಂದು ಯಾರೊಬ್ಬರೂ ದೂರು ನೀಡಿಲ್ಲ. ಯಾರ ಮೇಲೆ ದೂರು ನೀಡಿದರು ಸುಖವಿಲ್ಲ, ಪ್ರಯೋಜನವೂ ಇಲ್ಲ. ಕ್ಷೇತ್ರಗಳ ಜವಾಬ್ದಾರಿ ತೆಗೆದುಕೊಂಡವರು ಕಾರ್ಯಕರ್ತರ ಬಳಿ ಮಾತನಾಡಿ, ಎಲ್ಲಿ ತಪ್ಪಾಗಿದೆ ಎಂದು ಪರಿಶೀಲನೆ ನಡೆಸಿ, ಪರಿಹಾರ ಸಮೇತ ಇದಕ್ಕೆ ಉತ್ತರ ಕೊಡಬೇಕು. ಅಷ್ಟೇ ಎಂದು ಹೇಳಿದರು.

ಲೀಡ್ ಕೊಡಿಸದ ಸಚಿವರ ರಾಜಿನಾಮೆ ಪಡೆಯಲಿ ಎನ್ನುವ ಶಾಸಕ ಬಸವರಾಜ ಶಿವಗಂಗಾ ಅವರ ಹೇಳಿಕೆ ಬಗ್ಗೆ ಕೇಳಿದಾಗ ಶಾಸಕರುಗಳು ಅನಗತ್ಯವಾಗಿ ಬಹಿರಂಗ ಹೇಳಿಕೆ ನೀಡಬಾರದು. ಎಲ್ಲಿ ತಪ್ಪಾಗಿದೆ ಎಂದು ಎಲ್ಲರೂ ಕೂತು ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com