ಮುಸ್ಲಿಂ ಮೀಸಲಾತಿ ಸಂವಿಧಾನಕ್ಕೆ ವಿರುದ್ಧ: ಟಿಡಿಪಿ ನಿರ್ಧಾರ ಟೀಕಿಸಿದ ಬಿಜೆಪಿ ನಾಯಕ ಸಿಟಿ ರವಿ

ಧರ್ಮ ಆಧರಿತ ಮೀಸಲಾತಿಯನ್ನು ತಮ್ಮ ಪಕ್ಷವು ತೀವ್ರವಾಗಿ ವಿರೋಧಿಸುತ್ತದೆ ಮತ್ತು ಈ ವಿಚಾರದಲ್ಲಿ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ.
ಸಿಟಿ ರವಿ
ಸಿಟಿ ರವಿ
Updated on

ಮಂಗಳೂರು: ಧರ್ಮ ಆಧರಿತ ಮೀಸಲಾತಿಯನ್ನು ತಮ್ಮ ಪಕ್ಷವು ತೀವ್ರವಾಗಿ ವಿರೋಧಿಸುತ್ತದೆ ಮತ್ತು ಈ ವಿಚಾರದಲ್ಲಿ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಹೊಸದಾಗಿ ಆಯ್ಕೆಯಾದ ಎಂಎಲ್‌ಸಿ ಸಿ.ಟಿ.ರವಿ ಅವರು ಶನಿವಾರ ಹೇಳಿದ್ದಾರೆ.

ಆಂಧ್ರಪ್ರದೇಶದಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಮುಂದುವರಿಯಲಿದೆ ಎಂಬ ಎನ್‌ಡಿಎ ಮಿತ್ರಪಕ್ಷ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷದ (ಟಿಡಿಪಿ) ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಟಿ ರವಿ, ಡಾ.ಬಿ.ಆರ್. ಅಂಬೇಡ್ಕರ್ ಅವರು ಧರ್ಮದ ಆಧರಿತ ಮೀಸಲಾತಿಯನ್ನು ತೀವ್ರವಾಗಿ ವಿರೋಧಿಸಿದ್ದರು ಎಂದರು.

ಧಾರ್ಮಿಕ ಮೀಸಲಾತಿ ಸಾಂವಿಧಾನಿಕ ಸಮಿತಿ ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧ ಎಂಬುದನ್ನು ಮರೆಯಬಾರದು. ಧಾರ್ಮಿಕ ಮೀಸಲಾತಿಯು ಅಂಬೇಡ್ಕರ್ ಅವರ ಚಿಂತನೆ ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದರು.

ಸಿಟಿ ರವಿ
ರಾಜ್ಯದಲ್ಲಿ ಕೋಮುವಾದಿ ಚಟುವಟಿಕೆಗೆ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು: ಸಿಟಿ ರವಿ

ನೀವು ಜಾತಿ ಮತ್ತು ಆರ್ಥಿಕ ಅಂಶಗಳ ಆಧಾರದ ಮೇಲೆ ಮೀಸಲಾತಿಯನ್ನು ನೀಡಬಹುದು. ಆದರೆ ಸಂವಿಧಾನವು ಧಾರ್ಮಿಕ ಮೀಸಲಾತಿಯನ್ನು ಅನುಮತಿಸುವುದಿಲ್ಲ. ಈ ಸಮಸ್ಯೆ ನ್ಯಾಯಾಲಯದಲ್ಲಿದ್ದು, ಸಂವಿಧಾನ ವಿರೋಧಿ ವಿಷಯಕ್ಕೆ ನ್ಯಾಯಾಲಯವು ಅವಕಾಶ ನೀಡುತ್ತದೆಯೇ ಎಂಬುದನ್ನು ನಾವು ಕಾದು ನೋಡಬೇಕಾಗಿದೆ ಎಂದರು.

ಧರ್ಮಾಧಾರಿತ ಮೀಸಲಾತಿಯು ದೇಶದ ವಿಭಜನೆಗೆ ಕಾರಣವಾಯಿತು ಎಂಬುದನ್ನು ಯಾರೂ ಮರೆಯಬಾರದು. ನಾವು ಧಾರ್ಮಿಕ ಮೀಸಲಾತಿಯ ಪರವಾಗಿಲ್ಲ ಎಂಬುದು ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com