ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಭಾವಚಿತ್ರದ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ!

ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಭಾವಚಿತ್ರ ಇರುವ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಭಾವಚಿತ್ರದ ಫ್ಲೆಕ್ಸ್
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಭಾವಚಿತ್ರದ ಫ್ಲೆಕ್ಸ್

ಕಾರವಾರ: ಇತ್ತೀಚಿಗೆ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಗೈರಾಗುವ ಮೂಲಕ ಕಾಂಗ್ರೆಸ್ ಗೆಲುವಿಗೆ ಕಾರಣರಾಗಿದ್ದ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಭಾವಚಿತ್ರ ಇರುವ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ್ದಾರೆ.

ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಬನವಾಸಿಯ ಕದಂಬೋತ್ಸವ ಕಾರ್ಯಕ್ರಮಕ್ಕೆ ಸಿಎಂ ಹಾಗೂ ಡಿಸಿಎಂಗೆ ಸ್ವಾಗತ ಕೋರಿ ಬ್ಯಾನರ್ ಹಾಕಿದ್ದಾರೆ.

ಕನ್ನಡದ ಪ್ರಥಮ ರಾಜಧಾನಿ ಬನವಾಸಿಯಲ್ಲಿ ಮಾರ್ಚ್ 5 ಮತ್ತು ಮಾರ್ಚ್ 6ರಂದು ಕದಂಬೋತ್ಸವ ನಡೆಯುತ್ತಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಭಾವಚಿತ್ರದ ಫ್ಲೆಕ್ಸ್
ರಾಜ್ಯಸಭಾ ಚುನಾವಣೆ: ಎಸ್ ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಗೆ ಬಿಜೆಪಿ ಶೋಕಾಸ್ ನೋಟಿಸ್

ರಾಜ್ಯಸಭೆ ಚುನಾವಣೆಯಲ್ಲಿ ನಿರೀಕ್ಷೆಯಂತೆ ಯಶವಂತಪುರ ಶಾಸಕ ಎಸ್​ಟಿ ಸೋಮಶೇಖರ್ ಅವರು ಬಿಜೆಪಿ ಅಭ್ಯರ್ಥಿಗೆ ಮತಹಾಕುವ ಬದಲಿಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಶಾಕ್ ಕೊಟ್ಟಿದ್ದರು. ಮತ್ತೋರ್ವ ಶಾಸಕ ಶಿವರಾಮ್ ಹೆಬ್ಬಾರ್, ಮತದಾನ ಮಾಡದೇ ಬಿಜೆಪಿಗೆ ಆಘಾತ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com