'ಲೋಕ' ಸಮರಕ್ಕೆ ಬಳ್ಳಾರಿ ಸಜ್ಜು; ಪಕ್ಷದಿಂದ ಅಭ್ಯರ್ಥಿ ಕಣಕ್ಕೆ ಎಂದ ಗಾಲಿ ಜನಾರ್ಧನ ರೆಡ್ಡಿ; ಶ್ರೀರಾಮುಲು ಕಳವಳ!

ಮುಂಬರುವ ಲೋಕಸಭಾ ಸಭಾ ಚುನಾವಣೆಗೆ ಬಳ್ಳಾರಿ ಸಜ್ಜುಗೊಳ್ಳುತ್ತಿದ್ದು, ಈ ನಡುವಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ (ಕೆಆರ್‌ಪಿಪಿ) ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎಂಬ ಜನಾರ್ಧನ ರೆಡ್ಡಿಯವರ ಹೇಳಿಕೆ ಮಾಜಿ ಸಚಿವ ಹಾಗೂ ಬಿಜೆಪಿ ಲೋಕಸಭಾ ಟಿಕೆಟ್‌ ಆಕಾಂಕ್ಷಿ ಬಿ.ಶ್ರೀರಾಮುಲು ಅವರಲ್ಲಿ ಕಳವಳನ್ನುಂಟು ಮಾಡಿದೆ.
ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ
ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ
Updated on

ಬಳ್ಳಾರಿ: ಮುಂಬರುವ ಲೋಕಸಭಾ ಸಭಾ ಚುನಾವಣೆಗೆ ಬಳ್ಳಾರಿ ಸಜ್ಜುಗೊಳ್ಳುತ್ತಿದ್ದು, ಈ ನಡುವಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ (ಕೆಆರ್‌ಪಿಪಿ) ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎಂಬ ಜನಾರ್ಧನ ರೆಡ್ಡಿಯವರ ಹೇಳಿಕೆ ಮಾಜಿ ಸಚಿವ ಹಾಗೂ ಬಿಜೆಪಿ ಲೋಕಸಭಾ ಟಿಕೆಟ್‌ ಆಕಾಂಕ್ಷಿ ಬಿ.ಶ್ರೀರಾಮುಲು ಅವರಲ್ಲಿ ಕಳವಳನ್ನುಂಟು ಮಾಡಿದೆ.

ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮಾಂತರದಿಂದ ಸ್ಪರ್ಧಿಸಿ ಸೋಲು ಕಂಡಿದ್ದ ಶ್ರೀರಾಮುಲು ಅವರು ಇದೀಗ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಆದರೆ, ಕೆಆರ್‌ಪಿಪಿ ಅಭ್ಯರ್ಥಿಯನ್ನು ನಿಲ್ಲಿಸಿದ್ದೇ ಆದರೆ, ಮತ ಹಂಚಿಕೆಯಾಗಬಹುದು. ಇದು ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಶ್ರೀರಾಮುಲು ಅವರು ಆಂತಕಗೊಂಡಿದ್ದಾರೆ.

ಹೀಗಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ರೆಡ್ಡಿ ಅವರಿಗೆ ಮನವರಿಕೆ ಮಾಡಿಕೊಡಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಬಳ್ಳಾರಿಯಿಂದ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಚರ್ಚಿಸಲು ರೆಡ್ಡಿ ಅವರು ಕಳೆದ ವಾರ ಸಭೆ ಕರೆದಿದ್ದರು ಎಂದು ಕೆಆರ್‌ಪಿಪಿ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ಕೆಆರ್‌ಪಿಪಿ ಆರಂಭಿಸಿದಾಗ ಶ್ರೀರಾಮುಲು ಅವರು ಬೆಂಬಲ ನೀಡದಿರುವ ಬಗ್ಗೆ ಸಭೆಯಲ್ಲಿ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಶ್ರೀರಾಮುಲು ಅವರು ಪಕ್ಷದ ಅಭ್ಯರ್ಥಿ ಮತ್ತು ರೆಡ್ಡಿ ಪತ್ನಿ ಅವರ ಅರುಣಾ ಲಕ್ಷ್ಮಿ ವಿರುದ್ಧ ಕೆಲಸ ಮಾಡಿದ್ದರು. ಈಗ ನಮ್ಮ ಸಹಾಯ ಅಪೇಕ್ಷಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ
ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ಧ, ಶೀಘ್ರ ಸಮಾವೇಶದಲ್ಲಿ ಘೋಷಣೆ: ಜನಾರ್ಧನ ರೆಡ್ಡಿ

ಜನಾರ್ಧನ ರೆಡ್ಡಿ ಅವರು ತಮ್ಮ ರಾಜಕೀಯ ಜೀವನದ ಆರಂಭದಿಂದಲೂ ಶ್ರೀರಾಮುಲು ಅವರನ್ನು ಬೆಂಬಲಿಸಿದ್ದರು. ಆದರೆ, ಕಳೆದ ಕೆಲವು ವರ್ಷಗಳಿಂದ ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಸಮಸ್ಯೆಗಳನ್ನು ಎದುರಿಸುತ್ತಿದ್ದ ಸಂದರ್ಭದಲ್ಲಿ ಶ್ರೀರಾಮುಲು ರೆಡ್ಡಿ ಪರವಾಗಿ ನಿಲ್ಲಲಿಲ್ಲ. ಹೀಗಾಗಿ ಈ ಬಾರಿ ಚುನಾವಣೆಯಲ್ಲಿ ಬಳ್ಳಾರಿಯಲ್ಲಿ ನಮ್ಮ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಖಚಿತ ಎಂದು ಹೇಳಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ್ದರು. ಇದೀಗ ಶ್ರೀರಾಮುಲು ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವು ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ನಿಲ್ಲುವುದು ಹಾಗೂ ಮತಗಳನ್ನು ವಿಭಜಿಸುವ ರಾಜಕೀಯ ತಂತ್ರವಾಗಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com