ಸಂವಿಧಾನದ ಬಗ್ಗೆ ಕೀಳಾಗಿ ಮಾತನಾಡುವ ಸಂಸದ ಅನಂತ್ ಕುಮಾರ್‌ ರನ್ನು ಪಕ್ಷದಿಂದ ಹೊರಹಾಕಲಿ:‌ ಗೃಹ ಸಚಿವ ಪರಮೇಶ್ವರ್

ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಪಕ್ಷದಿಂದ ಹೊರಹಾಕಲಿ ಎಂದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ.
ಗೃಹ ಸಚಿವ ಪರಮೇಶ್ವರ್
ಗೃಹ ಸಚಿವ ಪರಮೇಶ್ವರ್
Updated on

ಬೆಂಗಳೂರು: ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಪಕ್ಷದಿಂದ ಹೊರಹಾಕಲಿ ಎಂದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಅಂಬೇಡ್ಕರ್ ಅವರನ್ನು ಪ್ರಧಾನಿ ಮೋದಿ ಮುಕ್ತ ಕಂಠದಿಂದ ಹೊಗಳಿದ್ದಾರೆ. ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಪ್ರಧಾನಮಂತ್ರಿ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ. ಆದರೆ, ಅವರ ಪಕ್ಷದ ಸಂಸದರೊಬ್ಬರು ಪದೇ ಪದೇ ಸಂವಿಧಾನ ಬದಲಾವಣೆಯ ಮಾತುಗಳನ್ನು ಆಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು.

ಗೃಹ ಸಚಿವ ಪರಮೇಶ್ವರ್
ಸಂವಿಧಾನ ತಿದ್ದುಪಡಿ ಮಾಡಲು ಬಿಜೆಪಿ ಬಹುಮತ ಗಳಿಸಿ ಅಧಿಕಾರಕ್ಕೆ ಬರಬೇಕು: ಸಂಸದ ಅನಂತ ಕುಮಾರ್ ಹೆಗಡೆ

ಅನಂತಕುಮಾರ್ ಹೆಗಡೆ ಅವರ ಹೇಳಿಕೆಯಿಂದ ದೂರ ಇದ್ದೇವೆ ಎಂದು ಬಿಜೆಪಿ ನಾಯಕರು ಹೇಳಿದರೆ ಸಾಲದು, ಪಕ್ಷದಿಂದ ಹೊರಹಾಕಬೇಕು ಅಥವಾ ನಿಯಂತ್ರಿಸಬೇಕು.‌ ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸರಿಯಾದ ಅಭ್ಯರ್ಥಿಯೇ ಇಲ್ಲ ಎಂದು ಬಿಜೆಪಿಯವರು ಹೇಳಿಕೊಳ್ಳಬಹುದು.‌ ಆದರೆ, ಚುನಾವಣೆ ನಂತರ ವಾಸ್ತವಾಂಶ ಏನೆಂಬುದು ಗೊತ್ತಾಗಲಿದೆ. ಸಚಿವ ಎಚ್.ಸಿ.ಮಹದೇವಪ್ಪ ಅವರ ಸ್ಪರ್ಧೆಯ ಮಾತುಗಳು ಕೇಳಿಬರುತ್ತಿವೆ. ತನಗೆ ಟಿಕೆಟ್ ಬೇಡ, ಮಗನಿಗೆ ನೀಡುವಂತೆ ಮಹದೇವಪ್ಪ ಅವರು ಹೇಳುತ್ತಿದ್ದಾರೆ. ಅಂತಿಮ ತೀರ್ಮಾನ ಹೈಕಮಾಂಡ್ ಮಾಡಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com