ಕರ್ನಾಟಕದ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಡಿಕೆ ಶಿವಕುಮಾರ್ ವಿಶ್ವಾಸ

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Updated on

ಕಲಬುರಗಿ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸುತ್ತಿದೆ. ಏಕೆಂದರೆ, ಅವರ ಸಂಸದರು ಯಾವುದೇ ಕೆಲಸ ಮಾಡಿಲ್ಲ ಎಂದರು.

ಬೆಂಗಳೂರಿನ ನೀರಿನ ಸಮಸ್ಯೆ ಕುರಿತು ಮಾತನಾಡಿದ ಅವರು, 'ನಮ್ಮ ಸರ್ಕಾರ ಕುಡಿಯುವ ನೀರು ಒದಗಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. 7,000ಕ್ಕೂ ಹೆಚ್ಚು ಕೊಳವೆ ಬಾವಿಗಳು ಬತ್ತಿ ಹೋಗಿವೆ. ನೀರಿನ ಕೊರತೆ ಉಂಟಾಗಿದೆ. ನಾವು ಈ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಂಡಿದ್ದೇವೆ ಮತ್ತು ನಾವು ಅದರ ಮೇಲೆ ಕೆಲಸ ಮಾಡುತ್ತಿದ್ದೇವೆ' ಎಂದು ಹೇಳಿದರು.

ಡಿಕೆ ಶಿವಕುಮಾರ್
ಲೋಕಸಭೆ ಚುನಾವಣೆ: 39 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ, ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್ ಕಣಕ್ಕೆ

ನೀರಿನ ಕೊರತೆ ನೀಗಿಸಲು ಮಹಾರಾಷ್ಟ್ರದಿಂದ ಭೀಮಾ ನದಿ ನೀರು ಬಿಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ‘ನಮ್ಮ ಸರ್ಕಾರ ಈಗಾಗಲೇ ಪತ್ರ ಬರೆದಿದೆ. ತೆಲಂಗಾಣ ರಾಜ್ಯ ಕೂಡ ನೀರು ಕೇಳಿದೆ. ಆದರೆ, ಇಲ್ಲಿ ನೀರು ಕಡಿಮೆಯಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯಗಳು ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ' ಎಂದು ತಿಳಿಸಿದರು.

ಖಾತರಿ ಯೋಜನೆಗಳು ಜನರ ಜೀವನೋಪಾಯಕ್ಕಾಗಿಯೇ ಹೊರತು ಚುನಾವಣೆಗಾಗಿ ಅಲ್ಲ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದಕ್ಕಿಂತ ದೊಡ್ಡ ತೃಪ್ತಿ ಪಕ್ಷ ಅಥವಾ ಸರ್ಕಾರಕ್ಕೆ ಮತ್ತೊಂದಿಲ್ಲ. ಈ ಯೋಜನೆಗಳು ಜನರಿಗಾಗಿಯೇ ಹೊರತು ಯಾವುದೇ ಚುನಾವಣೆಯನ್ನು ಉದ್ದೇಶಿಸಿಲ್ಲ. ಈ ಯೋಜನೆಗಳು ಬೆಲೆ ಏರಿಕೆ ಮತ್ತು ಹಣದುಬ್ಬರದ ಹೊರೆಯನ್ನು ತಗ್ಗಿಸಲು ಉದ್ದೇಶಿಸಲಾಗಿದೆ ಎಂದು ಸಮರ್ಥಿಸಿಕೊಂಡರು.

ಡಿಕೆ ಶಿವಕುಮಾರ್
Water crisis: 16 ಸಾವಿರ ಪೈಕಿ 7 ಸಾವಿರ ಬೋರ್ ವೆಲ್ ಗಳು ಸ್ಥಗಿತ, ಹೊಸ ಸಂಪರ್ಕಕ್ಕೆ ಅನುಮತಿ ಕಡ್ಡಾಯ: ಡಿಸಿಎಂ ಡಿಕೆ ಶಿವಕುಮಾರ್

'ದೇಶದ ಜನರು ನಮ್ಮ ಖಾತರಿ ಯೋಜನೆಗಳನ್ನು ಇಷ್ಟಪಟ್ಟಿದ್ದಾರೆ. ಈ ಯೋಜನೆಗಳ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ನಾವು ವಿವಿಧ ಹಂತಗಳಲ್ಲಿ ಖಾತರಿ ಅನುಷ್ಠಾನ ಯೋಜನೆಗಳನ್ನು ರೂಪಿಸಲು ನಿರ್ಧರಿಸಿದ್ದೇವೆ. ನಮ್ಮ ಸರ್ಕಾರವು ಒಟ್ಟು 3.74 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಗಾತ್ರದಲ್ಲಿ 1.26 ಲಕ್ಷ ಕೋಟಿ ರೂ. ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com