ಯದುವೀರ್ ಗೆ ಟಿಕೆಟ್- ಬದಲಾದ ಕಾಂಗ್ರೆಸ್ ರಣತಂತ್ರ: ಮೈಸೂರು -ಕೊಡಗು ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಒಕ್ಕಲಿಗ ಅಭ್ಯರ್ಥಿ!

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ನರಸಿಂಹರಾಜ ಒಡೆಯರ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಿನ್ನೆಲೆಯಲ್ಲಿ ಕೇಸರಿ ಪಕ್ಷವನ್ನು ಮಣಿಸಲು ಕಾಂಗ್ರೆಸ್ ತನ್ನ ತಂತ್ರಗಾರಿಕೆ ರೂಪಿಸಲು ಮುಂದಾಗಿದೆ.
ಯದುವೀರ್ ಒಡೆಯರ್
ಯದುವೀರ್ ಒಡೆಯರ್
Updated on

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ನರಸಿಂಹರಾಜ ಒಡೆಯರ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಿನ್ನೆಲೆಯಲ್ಲಿ ಕೇಸರಿ ಪಕ್ಷವನ್ನು ಮಣಿಸಲು ಕಾಂಗ್ರೆಸ್ ತನ್ನ ತಂತ್ರಗಾರಿಕೆ ರೂಪಿಸಲು ಮುಂದಾಗಿದೆ.

ಮೈಸೂರು-ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳೆರಡನ್ನೂ ಮರಳಿ ಗೆಲ್ಲಲೇಬೇಕೆಂಬ ಒತ್ತಡದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಭಾಗದ ಮುಖಂಡರು ಹಾಗೂ ಸಚಿವರೊಂದಿಗೆ ಚಿಂತನ ಮಂಥನ ನಡೆಸಿದರು. ರಾಜಮನೆತನದ ವರ್ಚಸ್ಸು ಕೇಸರಿ ಪಕ್ಷಕ್ಕೆ ಲಾಭ ತಂದುಕೊಡುತ್ತದೆ ಎಂಬ ಕಾರಣದಿಂದ ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ತನ್ನ ಕಾರ್ಯತಂತ್ರದ ವಿಧಾನವನ್ನು ಮರುಸೃಷ್ಟಿಸುತ್ತಿದೆ.

ರಾಜಮನೆತನವು ಜನರೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಹೊಂದಿದೆ, ಹೀಗಾಗಿ ಟಿಕೆಟ್ ನಿರಾಕರಿಸಿದ ಪ್ರಬಲ ಒಕ್ಕಲಿಗ ಸಮುದಾಯವನ್ನು ಮತ್ತೆ ಗೆಲ್ಲಲು ಕಾಂಗ್ರೆಸ್ ಬಯಸಿದೆ. ಮೈಸೂರು-ಕೊಡಗು ವಿಧಾನಸಭಾ ಕ್ಷೇತ್ರಕ್ಕೆ ಪಕ್ಷವು ಒಕ್ಕಲಿಗ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದು, ಎಲ್ಲಾ ರಾಜಕೀಯ ಬೆಳವಣಿಗೆಗಳು ಮತ್ತು ಕೆಲವು ಅಂಶಗಳನ್ನು ಗಮನಿಸಿದ ನಂತರ ಅಧಿಕೃತ ಘೋಷಣೆ ಮಾಡಲಿದೆ.

ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳೆರಡರಲ್ಲೂ ಅಂತಿಮ ತೀರ್ಮಾನ ಕೈಗೊಳ್ಳಲು ಸಿದ್ದರಾಮಯ್ಯ ಅವರಿಗೆ ಪಕ್ಷದ ಹೈಕಮಾಂಡ್ ಅಧಿಕಾರ ನೀಡಿರುವುದರಿಂದ ಮುಖಂಡರು ಹಾಗೂ ಸ್ಥಳೀಯ ಶಾಸಕರೊಂದಿಗೆ ಅಂತಿಮ ಸುತ್ತಿನ ಮಾತುಕತೆ ನಡೆಸಲಿದ್ದಾರೆ.

ಯದುವೀರ್ ಒಡೆಯರ್
ಎರಡು ಅವಧಿ ಯಶಸ್ವಿಯಾಗಿ ಪೂರೈಸಿದ ಪ್ರತಾಪ ಸಿಂಹಗೆ ಅಭಿನಂದನೆ: ಟಿಕೆಟ್ ಘೋಷಣೆ ಬಳಿಕ ಯದುವೀರ್ ಮೊದಲ ಪ್ರತಿಕ್ರಿಯೆ!

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತಿತರರು ಪ್ರತಿಸ್ಪರ್ಧಿ ಪಕ್ಷಗಳಲ್ಲಿರುವ ಪ್ರಮುಖ ಒಕ್ಕಲಿಗ ನಾಯಕರ ಸಂಪರ್ಕದಲ್ಲಿದ್ದು, ಬಿಜೆಪಿ ಪಾಳಯದಲ್ಲಿನ ಭಿನ್ನಾಭಿಪ್ರಾಯದ ಲಾಭ ಪಡೆಯಲು ಬಯಸಿದ್ದಾರೆ. ಸಿದ್ದರಾಮಯ್ಯ ಎರಡು ದಿನಗಳ ಭೇಟಿಗಾಗಿ ಮೈಸೂರಿಗೆ ಆಗಮಿಸಿದ್ದು, ಭಾನುವಾರ ಕಾಂಗ್ರೆಸ್ ಪಟ್ಟಿ ಹೊರಬೀಳಲಿದ್ದು, ಅಭ್ಯರ್ಥಿಯನ್ನು ಅಂತಿಮಗೊಳಿಸಲು ಸರಣಿ ಸಭೆ ನಡೆಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com